Homeಮುಖಪುಟದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

ದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

- Advertisement -
- Advertisement -

ತಮಿಳುನಾಡಿನ ಉದುಮಲ್‌ಪೇಟ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೋರ್ವನ ಕೊಲೆ ಪ್ರಕರಣದ ಆರೋಪಿಗಳು ಸಂತ್ರಸ್ತನ ಕುಟುಂಬಕ್ಕೆ ಪ್ರಕರಣವನ್ನು ಕೈಬಿಡುವಂತೆ ಹಣದ ಆಮಿಷ ಮತ್ತು ಬೆದರಿಕೆಯನ್ನು ಹಾಕಿದ್ದಾರೆ. ಈ ಕುರಿತು ಸಂತ್ರಸ್ತನ ಕುಟುಂಬವೇ ಹೇಳಿಕೆಯನ್ನು ನೀಡಿದ್ದು, ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪದ ಆರೋಪವನ್ನು ಮಾಡಿದ್ದಾರೆ.

2023ರ ನ.27ರಂದು ಪರಿಶಿಷ್ಟ ಪಂಗಡದ ನರಿಕುರವರ್ ಸಮುದಾಯಕ್ಕೆ ಸೇರಿದ ಸೆಂಕೋಟ್ಟೈ (55) ಅವರನ್ನು ಉದುಮಲಪೇಟೆಯ ತಾಂಥೋಣಿಯಲ್ಲಿ ಥಳಿಸಿ ಹತ್ಯೆ ಮಾಡಲಾಗಿತ್ತು. ಉದುಮಲಪೇಟೆ ಪೊಲೀಸರು ದುಷ್ಕರ್ಮಿಗಳ ಪರವಾಗಿ ನಿಂತಿದ್ದಾರೆ ಮತ್ತು ವೀಡಿಯೊ ಸಾಕ್ಷ್ಯವನ್ನು ನಾಶಪಡಿಸಿದ್ದಾರೆ ಎಂದು ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್ ಆರೋಪಿಸಿದ್ದಾರೆ.

ಏನಿದು ಘಟನೆ?

2023ರ ನ.27ರಂದು ಸೆಂಕೋಟ್ಟೈ ತನ್ನ ಸೋದರಳಿಯ ಕುಮಾರ್ (25) ಜೊತೆಗೆ ತಾಂಥೋನಿಯಲ್ಲಿ  ಪಕ್ಷಿಗಳನ್ನು ಬೇಟೆಯಾಡುತ್ತಿದ್ದರು ಎನ್ನಲಾಗಿದೆ. ಎಫ್‌ಐಆರ್‌ನಲ್ಲಿ ಕುಮಾರ್ ಉಲ್ಲೇಖದ ಪ್ರಕಾರ, ಅವರು ಬೇಟೆಯಾಡಲು ಬಳಸಿದ ಕಲ್ಲು ಸೆಲ್ವಕುಮಾರ್ ಎಂಬವರ ಮನೆಯ ಮೇಲ್ಛಾವಣಿಗೆ ಬಿದ್ದಿದೆ. ಇದೇ ಕಾರಣಕ್ಕೆ  ಆರೋಪಿಗಳು ಆತನ ವಿರುದ್ಧ ಕೋಳಿ ಕಳ್ಳತನಕ್ಕೆ ಯತ್ನಿಸಿದ್ದಾನೆಂದು ನಿಂದಿಸುತ್ತಾರೆ. ಬಳಿಕ ಇತರರನ್ನು ಗುಂಪು ಸೇರಿಸಿ ಕುಮಾರ್ ಮತ್ತು ಸೆಂಕೋಟ್ಟೈ ಅವರನ್ನು ಎರಡು ಮರಗಳಿಗೆ ಕಟ್ಟಿಹಾಕಿ ಥಳಿಸಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಸೆಂಕೋಟ್ಟೈ ಅವರನ್ನು ಉದುಮಲ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಹಲ್ಲೆಯಿಂದ ಕುಮಾರ್‌ಗೆ ತೀವ್ರ ಗಾಯಗಳಾಗಿದ್ದವು. ಕುಮಾರ್ ಅದೇ ದಿನ ಪೊಲೀಸ್ ದೂರು ನೀಡಿದ್ದಾರೆ ಮತ್ತು ಸೆಲ್ವಕುಮಾರ್ ಮತ್ತು ಇತರ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕಾರಣವನ್ನು ಕೈಬಿಡಲು ಆಮಿಷ

ಇದೀಗ ಸೆಂಕೋಟ್ಟೈ ಅವರ ಕುಟುಂಬ ಪ್ರಕಾರಣವನ್ನು ಕೈಬಿಡಲು ನಮಗೆ ಆರೋಪಿಗಳು ಹಣದ ಆಮಿಷ ನೀಡುತ್ತಿದ್ದಾರೆ, ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್, ದುಷ್ಕರ್ಮಿಗಳ ಬಳಿ ಇರುವ ವಿಡಿಯೋ ಸಾಕ್ಷ್ಯವನ್ನು ಸಂಗ್ರಹಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ. ಇಬ್ಬರು ವ್ಯಕ್ತಿಗಳು ಕುಮಾರ್ ಮತ್ತು ಸೆಂಕೋಟ್ಟೈ ದೈಹಿಕವಾಗಿ ಹಲ್ಲೆ ಮಾಡಿದ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಆ ವೀಡಿಯೊಗಳನ್ನು ಅಳಿಸಲು ಪೊಲೀಸರು ಅವರನ್ನು ಕೇಳಿದ್ದಾರೆ ಎಂದು ನಾವು ಅನುಮಾನಿಸುತ್ತೇವೆ. ಗ್ರಾಮದಲ್ಲಿ ಪ್ರಬಲ ಬಹುಸಂಖ್ಯಾತರಾಗಿರುವ ಗೌಂಡರ್ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಪೊಲೀಸರು ಅವರ ಪರ ನಿಂತಿದ್ದಾರೆ ಎಂದು ಥಾನರಾಜ್ ಅವರು ಹೇಳಿದ್ದಾರೆ.

ತಮಿಳುನಾಡು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ವಿಚಾರಣೆ ನಡೆಸಬೇಕು. ಆರೋಪಿಗಳಿಗೆ ಶಿಕ್ಷಿಯನ್ನು ಕೊಡಿಸಿದರೆ ಅದು ಬುಡಕಟ್ಟು ಸಮುದಾಯಕ್ಕೆ ಭಯ ಮುಕ್ತವಾಗಿ ಬದುಕಲು ಸಹಾಯ ಮಾಡುತ್ತದೆ. ಸೆಂಕೋಟ್ಟೈ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಅವರ ಮಕ್ಕಳಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಥಾನರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಅಥವಾ ಆರೋಪಿ ಸೆಲ್ವಕುಮಾರ್ ಪರ ನಿಂತಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದು, ನಮಗೆ ತಿಳಿದಿರುವಂತೆ ಯಾವುದೇ ವೀಡಿಯೊಗಳಿಲ್ಲ ಮತ್ತು ಪ್ರಕರಣದಲ್ಲಿ ಹೆಸರಿಸಲಾದವರ ಆರೋಪಿಗಳ ಫೋನ್‌ಗಳನ್ನು ನಾವು ಪರಿಶೀಲಿಸಿದ್ದೇವೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಸೆಲ್ವಕುಮಾರ್ ಸೇರಿದಂತೆ ನಾಲ್ವರನ್ನು ಮಾತ್ರ ಕುಮಾರ್ ಉಲ್ಲೇಖಿಸಿದ್ದರು. ಅವರಿಗೆ ಇತರ ಆರೋಪಿಗಳ ಹೆಸರುಗಳು ತಿಳಿದಿರಲಿಲ್ಲ. ನಾವು ತನಿಖೆಯ ವೇಳೆ ಹೆಚ್ಚಿನ ವ್ಯಕ್ತಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಕಂಡುಕೊಂಡಿದ್ದೇವೆ. ಈವರೆಗೆ ಆರು ಮಂದಿಯನ್ನು ರಿಮಾಂಡ್ ಮಾಡಿದ್ದೇವೆ. ಉದುಮಲ್‌ಪೇಟೆಯ ಉಪ ಪೊಲೀಸ್ ಆಯುಕ್ತ ಜೆ ಸುಕುಮಾರನ್ ಅವರು ತನಿಖೆಯ ನೇತೃತ್ವವನ್ನು ವಹಿಸಿಕೊಂಡಿದ್ದಾರೆ. ಪೊಲೀಸ್ ತನಿಖೆಯ ವೇಳೆ ಹೆಚ್ಚಿನ ಆರೋಪಿಗಳು ಶಾಮೀಲಾಗಿರುವುದು ಕಂಡು ಬಂದರೆ ಹೆಚ್ಚಿನ ಜನರನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 294 (b), 342, 324, 506, 302 ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...