Homeಮುಖಪುಟದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

ದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

- Advertisement -
- Advertisement -

ತಮಿಳುನಾಡಿನ ಉದುಮಲ್‌ಪೇಟ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೋರ್ವನ ಕೊಲೆ ಪ್ರಕರಣದ ಆರೋಪಿಗಳು ಸಂತ್ರಸ್ತನ ಕುಟುಂಬಕ್ಕೆ ಪ್ರಕರಣವನ್ನು ಕೈಬಿಡುವಂತೆ ಹಣದ ಆಮಿಷ ಮತ್ತು ಬೆದರಿಕೆಯನ್ನು ಹಾಕಿದ್ದಾರೆ. ಈ ಕುರಿತು ಸಂತ್ರಸ್ತನ ಕುಟುಂಬವೇ ಹೇಳಿಕೆಯನ್ನು ನೀಡಿದ್ದು, ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪದ ಆರೋಪವನ್ನು ಮಾಡಿದ್ದಾರೆ.

2023ರ ನ.27ರಂದು ಪರಿಶಿಷ್ಟ ಪಂಗಡದ ನರಿಕುರವರ್ ಸಮುದಾಯಕ್ಕೆ ಸೇರಿದ ಸೆಂಕೋಟ್ಟೈ (55) ಅವರನ್ನು ಉದುಮಲಪೇಟೆಯ ತಾಂಥೋಣಿಯಲ್ಲಿ ಥಳಿಸಿ ಹತ್ಯೆ ಮಾಡಲಾಗಿತ್ತು. ಉದುಮಲಪೇಟೆ ಪೊಲೀಸರು ದುಷ್ಕರ್ಮಿಗಳ ಪರವಾಗಿ ನಿಂತಿದ್ದಾರೆ ಮತ್ತು ವೀಡಿಯೊ ಸಾಕ್ಷ್ಯವನ್ನು ನಾಶಪಡಿಸಿದ್ದಾರೆ ಎಂದು ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್ ಆರೋಪಿಸಿದ್ದಾರೆ.

ಏನಿದು ಘಟನೆ?

2023ರ ನ.27ರಂದು ಸೆಂಕೋಟ್ಟೈ ತನ್ನ ಸೋದರಳಿಯ ಕುಮಾರ್ (25) ಜೊತೆಗೆ ತಾಂಥೋನಿಯಲ್ಲಿ  ಪಕ್ಷಿಗಳನ್ನು ಬೇಟೆಯಾಡುತ್ತಿದ್ದರು ಎನ್ನಲಾಗಿದೆ. ಎಫ್‌ಐಆರ್‌ನಲ್ಲಿ ಕುಮಾರ್ ಉಲ್ಲೇಖದ ಪ್ರಕಾರ, ಅವರು ಬೇಟೆಯಾಡಲು ಬಳಸಿದ ಕಲ್ಲು ಸೆಲ್ವಕುಮಾರ್ ಎಂಬವರ ಮನೆಯ ಮೇಲ್ಛಾವಣಿಗೆ ಬಿದ್ದಿದೆ. ಇದೇ ಕಾರಣಕ್ಕೆ  ಆರೋಪಿಗಳು ಆತನ ವಿರುದ್ಧ ಕೋಳಿ ಕಳ್ಳತನಕ್ಕೆ ಯತ್ನಿಸಿದ್ದಾನೆಂದು ನಿಂದಿಸುತ್ತಾರೆ. ಬಳಿಕ ಇತರರನ್ನು ಗುಂಪು ಸೇರಿಸಿ ಕುಮಾರ್ ಮತ್ತು ಸೆಂಕೋಟ್ಟೈ ಅವರನ್ನು ಎರಡು ಮರಗಳಿಗೆ ಕಟ್ಟಿಹಾಕಿ ಥಳಿಸಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಸೆಂಕೋಟ್ಟೈ ಅವರನ್ನು ಉದುಮಲ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಹಲ್ಲೆಯಿಂದ ಕುಮಾರ್‌ಗೆ ತೀವ್ರ ಗಾಯಗಳಾಗಿದ್ದವು. ಕುಮಾರ್ ಅದೇ ದಿನ ಪೊಲೀಸ್ ದೂರು ನೀಡಿದ್ದಾರೆ ಮತ್ತು ಸೆಲ್ವಕುಮಾರ್ ಮತ್ತು ಇತರ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕಾರಣವನ್ನು ಕೈಬಿಡಲು ಆಮಿಷ

ಇದೀಗ ಸೆಂಕೋಟ್ಟೈ ಅವರ ಕುಟುಂಬ ಪ್ರಕಾರಣವನ್ನು ಕೈಬಿಡಲು ನಮಗೆ ಆರೋಪಿಗಳು ಹಣದ ಆಮಿಷ ನೀಡುತ್ತಿದ್ದಾರೆ, ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್, ದುಷ್ಕರ್ಮಿಗಳ ಬಳಿ ಇರುವ ವಿಡಿಯೋ ಸಾಕ್ಷ್ಯವನ್ನು ಸಂಗ್ರಹಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ. ಇಬ್ಬರು ವ್ಯಕ್ತಿಗಳು ಕುಮಾರ್ ಮತ್ತು ಸೆಂಕೋಟ್ಟೈ ದೈಹಿಕವಾಗಿ ಹಲ್ಲೆ ಮಾಡಿದ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಆ ವೀಡಿಯೊಗಳನ್ನು ಅಳಿಸಲು ಪೊಲೀಸರು ಅವರನ್ನು ಕೇಳಿದ್ದಾರೆ ಎಂದು ನಾವು ಅನುಮಾನಿಸುತ್ತೇವೆ. ಗ್ರಾಮದಲ್ಲಿ ಪ್ರಬಲ ಬಹುಸಂಖ್ಯಾತರಾಗಿರುವ ಗೌಂಡರ್ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಪೊಲೀಸರು ಅವರ ಪರ ನಿಂತಿದ್ದಾರೆ ಎಂದು ಥಾನರಾಜ್ ಅವರು ಹೇಳಿದ್ದಾರೆ.

ತಮಿಳುನಾಡು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ವಿಚಾರಣೆ ನಡೆಸಬೇಕು. ಆರೋಪಿಗಳಿಗೆ ಶಿಕ್ಷಿಯನ್ನು ಕೊಡಿಸಿದರೆ ಅದು ಬುಡಕಟ್ಟು ಸಮುದಾಯಕ್ಕೆ ಭಯ ಮುಕ್ತವಾಗಿ ಬದುಕಲು ಸಹಾಯ ಮಾಡುತ್ತದೆ. ಸೆಂಕೋಟ್ಟೈ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಅವರ ಮಕ್ಕಳಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಥಾನರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಅಥವಾ ಆರೋಪಿ ಸೆಲ್ವಕುಮಾರ್ ಪರ ನಿಂತಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದು, ನಮಗೆ ತಿಳಿದಿರುವಂತೆ ಯಾವುದೇ ವೀಡಿಯೊಗಳಿಲ್ಲ ಮತ್ತು ಪ್ರಕರಣದಲ್ಲಿ ಹೆಸರಿಸಲಾದವರ ಆರೋಪಿಗಳ ಫೋನ್‌ಗಳನ್ನು ನಾವು ಪರಿಶೀಲಿಸಿದ್ದೇವೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಸೆಲ್ವಕುಮಾರ್ ಸೇರಿದಂತೆ ನಾಲ್ವರನ್ನು ಮಾತ್ರ ಕುಮಾರ್ ಉಲ್ಲೇಖಿಸಿದ್ದರು. ಅವರಿಗೆ ಇತರ ಆರೋಪಿಗಳ ಹೆಸರುಗಳು ತಿಳಿದಿರಲಿಲ್ಲ. ನಾವು ತನಿಖೆಯ ವೇಳೆ ಹೆಚ್ಚಿನ ವ್ಯಕ್ತಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಕಂಡುಕೊಂಡಿದ್ದೇವೆ. ಈವರೆಗೆ ಆರು ಮಂದಿಯನ್ನು ರಿಮಾಂಡ್ ಮಾಡಿದ್ದೇವೆ. ಉದುಮಲ್‌ಪೇಟೆಯ ಉಪ ಪೊಲೀಸ್ ಆಯುಕ್ತ ಜೆ ಸುಕುಮಾರನ್ ಅವರು ತನಿಖೆಯ ನೇತೃತ್ವವನ್ನು ವಹಿಸಿಕೊಂಡಿದ್ದಾರೆ. ಪೊಲೀಸ್ ತನಿಖೆಯ ವೇಳೆ ಹೆಚ್ಚಿನ ಆರೋಪಿಗಳು ಶಾಮೀಲಾಗಿರುವುದು ಕಂಡು ಬಂದರೆ ಹೆಚ್ಚಿನ ಜನರನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 294 (b), 342, 324, 506, 302 ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...