Homeಮುಖಪುಟಸಿಎಂ ಯೋಗಿ ಆದಿತ್ಯನಾಥ್ ನಮ್ಮನ್ನು ಭೇಟಿ ಮಾಡುವವರೆಗೂ ಶವಸಂಸ್ಕಾರ ಮಾಡುವುದಿಲ್ಲ: ಉನ್ನಾವೊ ಸಂತ್ರಸ್ತೆಯ ಸಹೋದರಿ

ಸಿಎಂ ಯೋಗಿ ಆದಿತ್ಯನಾಥ್ ನಮ್ಮನ್ನು ಭೇಟಿ ಮಾಡುವವರೆಗೂ ಶವಸಂಸ್ಕಾರ ಮಾಡುವುದಿಲ್ಲ: ಉನ್ನಾವೊ ಸಂತ್ರಸ್ತೆಯ ಸಹೋದರಿ

- Advertisement -
- Advertisement -

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬವು ಭಾನುವಾರ ಶವವನ್ನು ದಹನ ಮಾಡಲು ನಿರಾಕರಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಮ್ಮನ್ನು ಭೇಟಿ ಮಾಡಿ, ಆರೋಪಿಯನ್ನು ಗಲ್ಲಿಗೇರಿಸಲಾಗುವುದು ಎಂದು ಭರವಸೆ ನೀಡುವವರೆಗೂ ಶವಸಂಸ್ಕಾರ ಮಾಡದಿರಲು ತೀರ್ಮಾನಿಸಿದೆ.

“ಸಿಎಂ ಯೋಗಿ ಆದಿತ್ಯನಾಥ್‌ರವರು ಬಾರದ ತನಕ, ನಾವು ನನ್ನ ತಂಗಿಯನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ. ನಾನು ವೈಯಕ್ತಿಕವಾಗಿ ಅವರೊಂದಿಗೆ ಮಾತನಾಡಲು ಬಯಸುತ್ತೇನೆ” ಎಂದು ಸಂತ್ರಸ್ತೆಯ ಸಹೋದರಿ ಪಟ್ಟು ಹಿಡಿದಿದ್ದಾರೆ.

ಸಂತ್ರಸ್ತೆಯ ಅಂತ್ಯ ಸಂಸ್ಕಾರದ ಕೊನೆಯ ವಿಧಿ ವಿಧಾನಗಳಿಗೆ ಜಿಲ್ಲಾಡಳಿತ ಸಿದ್ಧತೆಗಳನ್ನು ನಡೆಸುತ್ತಿರುವಾಗ, ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಖಾತರಿ ನೀಡದ ಹೊರತು ಸಂತ್ರಸ್ತೆಯನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಸಹೋದರಿ ಪ್ರತಿಪಾದಿಸಿದ್ದಾರೆ.

ಆರೋಪಿಗೆ ಮರಣದಂಡನೆಯನ್ನು ವಿಧಿಸಬೇಕೆಂದು ಪಟ್ಟು ಹಿಡಿದಾಗ “ಮರಣದಂಡನೆಯನ್ನು ನೀಡುವುದು ನ್ಯಾಯಾಲಯದ ಕೆಲಸ” ಎಂದು ಸಂತ್ರಸ್ತೆಯ ಸಹೋದರಿಗೆ ತಿಳಿಸಿದಾಗ, “ಯಾರು ನ್ಯಾಯಾಲಯವನ್ನು ಸುತ್ತುತ್ತಾರೆ?” ಎಂದು ಆಕೆ ಪ್ರಶ್ನಿಸಿದ್ದಾರೆ.

ಶನಿವಾರ ಸಂಜೆ ಭಾರೀ ಭದ್ರತಾ ರಕ್ಷಣೆಯ ನಡುವೆ ಸಂತ್ರಸ್ತೆಯ ಮೃತ ದೇಹವನ್ನು ಗ್ರಾಮಕ್ಕೆ ತರಲಾಗಿದೆ.

ಸಂತ್ರಸ್ತೆಯ ಸಾವನ್ನು “ಅತ್ಯಂತ ದುರದೃಷ್ಟಕರ” ಎಂದು ಹೇಳಿರುವ ಸಿಎಂ ಆದಿತ್ಯನಾಥ್ ಆರೋಪಿಗಳನ್ನು ತ್ವರಿತಗತಿಯ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸುವುದಾಗಿ ಹೇಳಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಸಂತ್ರಸ್ತೆಯ ತಂದೆ ಹೈದರಾಬಾದ್ ಎನ್ಕೌಂಟರ್‌ನಂತೆ ಆರೋಪಿಗಳನ್ನು ಕೊಲ್ಲಬೇಕೆಂದು ಒತ್ತಾಯಿಸಿದ್ದಾರೆ. “ನನ್ನ ಏಕೈಕ ಬೇಡಿಕೆಯೆಂದರೆ, ನನ್ನ ಮಗಳ ಕೊಲೆಗಾರರನ್ನು ಹೈದರಾಬಾದ್‌ನಲ್ಲಿ ನಡೆದಂತೆ ಎನ್‌ಕೌಂಟರ್‌ ಮಾಡಿ ಹೊಡೆದುರುಳಿಸಬೇಕು” ಎಂದು ಅವರು ಹೇಳಿದರು. “ಅವರು ಜೈಲಿನಿಂದ ಹೊರಗೆ ಬರಬಾರದು. ಅವರು ಸತ್ತರೆಂದು ನಾನು ಬಯಸುತ್ತೇನೆ … ಆಗ ಮಾತ್ರ ಅವಳ ಆತ್ಮಕ್ಕೆ ಶಾಂತಿ ಸಿಗುತ್ತದೆ. ಅವರು (ಆರೋಪಿಗಳು) ಪ್ರಬಲ ವ್ಯಕ್ತಿಗಳು, ಅವರು ಜೈಲಿನಿಂದ ಹೊರಗಿದ್ದರೆ ನಾವು ಸುರಕ್ಷಿತವಾಗಿರುವುದಿಲ್ಲ. ಅವರು ನನ್ನ ಮಗಳನ್ನು ಕೊಂದರು, ಮತ್ತು ಅವರು ನಮ್ಮನ್ನೂ ಕೊಲ್ಲಬಹುದು. ಹಾಗಾಗಿ ಎನ್ಕೌಂಟರ್‌ನಲ್ಲಿ ಅವರನ್ನು ಕೊಲ್ಲಬೇಕೆಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...