Homeಮುಖಪುಟಸಿಎಂ ಯೋಗಿ ಆದಿತ್ಯನಾಥ್ ನಮ್ಮನ್ನು ಭೇಟಿ ಮಾಡುವವರೆಗೂ ಶವಸಂಸ್ಕಾರ ಮಾಡುವುದಿಲ್ಲ: ಉನ್ನಾವೊ ಸಂತ್ರಸ್ತೆಯ ಸಹೋದರಿ

ಸಿಎಂ ಯೋಗಿ ಆದಿತ್ಯನಾಥ್ ನಮ್ಮನ್ನು ಭೇಟಿ ಮಾಡುವವರೆಗೂ ಶವಸಂಸ್ಕಾರ ಮಾಡುವುದಿಲ್ಲ: ಉನ್ನಾವೊ ಸಂತ್ರಸ್ತೆಯ ಸಹೋದರಿ

- Advertisement -
- Advertisement -

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬವು ಭಾನುವಾರ ಶವವನ್ನು ದಹನ ಮಾಡಲು ನಿರಾಕರಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಮ್ಮನ್ನು ಭೇಟಿ ಮಾಡಿ, ಆರೋಪಿಯನ್ನು ಗಲ್ಲಿಗೇರಿಸಲಾಗುವುದು ಎಂದು ಭರವಸೆ ನೀಡುವವರೆಗೂ ಶವಸಂಸ್ಕಾರ ಮಾಡದಿರಲು ತೀರ್ಮಾನಿಸಿದೆ.

“ಸಿಎಂ ಯೋಗಿ ಆದಿತ್ಯನಾಥ್‌ರವರು ಬಾರದ ತನಕ, ನಾವು ನನ್ನ ತಂಗಿಯನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ. ನಾನು ವೈಯಕ್ತಿಕವಾಗಿ ಅವರೊಂದಿಗೆ ಮಾತನಾಡಲು ಬಯಸುತ್ತೇನೆ” ಎಂದು ಸಂತ್ರಸ್ತೆಯ ಸಹೋದರಿ ಪಟ್ಟು ಹಿಡಿದಿದ್ದಾರೆ.

ಸಂತ್ರಸ್ತೆಯ ಅಂತ್ಯ ಸಂಸ್ಕಾರದ ಕೊನೆಯ ವಿಧಿ ವಿಧಾನಗಳಿಗೆ ಜಿಲ್ಲಾಡಳಿತ ಸಿದ್ಧತೆಗಳನ್ನು ನಡೆಸುತ್ತಿರುವಾಗ, ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಖಾತರಿ ನೀಡದ ಹೊರತು ಸಂತ್ರಸ್ತೆಯನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಸಹೋದರಿ ಪ್ರತಿಪಾದಿಸಿದ್ದಾರೆ.

ಆರೋಪಿಗೆ ಮರಣದಂಡನೆಯನ್ನು ವಿಧಿಸಬೇಕೆಂದು ಪಟ್ಟು ಹಿಡಿದಾಗ “ಮರಣದಂಡನೆಯನ್ನು ನೀಡುವುದು ನ್ಯಾಯಾಲಯದ ಕೆಲಸ” ಎಂದು ಸಂತ್ರಸ್ತೆಯ ಸಹೋದರಿಗೆ ತಿಳಿಸಿದಾಗ, “ಯಾರು ನ್ಯಾಯಾಲಯವನ್ನು ಸುತ್ತುತ್ತಾರೆ?” ಎಂದು ಆಕೆ ಪ್ರಶ್ನಿಸಿದ್ದಾರೆ.

ಶನಿವಾರ ಸಂಜೆ ಭಾರೀ ಭದ್ರತಾ ರಕ್ಷಣೆಯ ನಡುವೆ ಸಂತ್ರಸ್ತೆಯ ಮೃತ ದೇಹವನ್ನು ಗ್ರಾಮಕ್ಕೆ ತರಲಾಗಿದೆ.

ಸಂತ್ರಸ್ತೆಯ ಸಾವನ್ನು “ಅತ್ಯಂತ ದುರದೃಷ್ಟಕರ” ಎಂದು ಹೇಳಿರುವ ಸಿಎಂ ಆದಿತ್ಯನಾಥ್ ಆರೋಪಿಗಳನ್ನು ತ್ವರಿತಗತಿಯ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸುವುದಾಗಿ ಹೇಳಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಸಂತ್ರಸ್ತೆಯ ತಂದೆ ಹೈದರಾಬಾದ್ ಎನ್ಕೌಂಟರ್‌ನಂತೆ ಆರೋಪಿಗಳನ್ನು ಕೊಲ್ಲಬೇಕೆಂದು ಒತ್ತಾಯಿಸಿದ್ದಾರೆ. “ನನ್ನ ಏಕೈಕ ಬೇಡಿಕೆಯೆಂದರೆ, ನನ್ನ ಮಗಳ ಕೊಲೆಗಾರರನ್ನು ಹೈದರಾಬಾದ್‌ನಲ್ಲಿ ನಡೆದಂತೆ ಎನ್‌ಕೌಂಟರ್‌ ಮಾಡಿ ಹೊಡೆದುರುಳಿಸಬೇಕು” ಎಂದು ಅವರು ಹೇಳಿದರು. “ಅವರು ಜೈಲಿನಿಂದ ಹೊರಗೆ ಬರಬಾರದು. ಅವರು ಸತ್ತರೆಂದು ನಾನು ಬಯಸುತ್ತೇನೆ … ಆಗ ಮಾತ್ರ ಅವಳ ಆತ್ಮಕ್ಕೆ ಶಾಂತಿ ಸಿಗುತ್ತದೆ. ಅವರು (ಆರೋಪಿಗಳು) ಪ್ರಬಲ ವ್ಯಕ್ತಿಗಳು, ಅವರು ಜೈಲಿನಿಂದ ಹೊರಗಿದ್ದರೆ ನಾವು ಸುರಕ್ಷಿತವಾಗಿರುವುದಿಲ್ಲ. ಅವರು ನನ್ನ ಮಗಳನ್ನು ಕೊಂದರು, ಮತ್ತು ಅವರು ನಮ್ಮನ್ನೂ ಕೊಲ್ಲಬಹುದು. ಹಾಗಾಗಿ ಎನ್ಕೌಂಟರ್‌ನಲ್ಲಿ ಅವರನ್ನು ಕೊಲ್ಲಬೇಕೆಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...