Homeಮುಖಪುಟಸಿಎಂ ಯೋಗಿ ಆದಿತ್ಯನಾಥ್ ನಮ್ಮನ್ನು ಭೇಟಿ ಮಾಡುವವರೆಗೂ ಶವಸಂಸ್ಕಾರ ಮಾಡುವುದಿಲ್ಲ: ಉನ್ನಾವೊ ಸಂತ್ರಸ್ತೆಯ ಸಹೋದರಿ

ಸಿಎಂ ಯೋಗಿ ಆದಿತ್ಯನಾಥ್ ನಮ್ಮನ್ನು ಭೇಟಿ ಮಾಡುವವರೆಗೂ ಶವಸಂಸ್ಕಾರ ಮಾಡುವುದಿಲ್ಲ: ಉನ್ನಾವೊ ಸಂತ್ರಸ್ತೆಯ ಸಹೋದರಿ

- Advertisement -
- Advertisement -

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬವು ಭಾನುವಾರ ಶವವನ್ನು ದಹನ ಮಾಡಲು ನಿರಾಕರಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಮ್ಮನ್ನು ಭೇಟಿ ಮಾಡಿ, ಆರೋಪಿಯನ್ನು ಗಲ್ಲಿಗೇರಿಸಲಾಗುವುದು ಎಂದು ಭರವಸೆ ನೀಡುವವರೆಗೂ ಶವಸಂಸ್ಕಾರ ಮಾಡದಿರಲು ತೀರ್ಮಾನಿಸಿದೆ.

“ಸಿಎಂ ಯೋಗಿ ಆದಿತ್ಯನಾಥ್‌ರವರು ಬಾರದ ತನಕ, ನಾವು ನನ್ನ ತಂಗಿಯನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ. ನಾನು ವೈಯಕ್ತಿಕವಾಗಿ ಅವರೊಂದಿಗೆ ಮಾತನಾಡಲು ಬಯಸುತ್ತೇನೆ” ಎಂದು ಸಂತ್ರಸ್ತೆಯ ಸಹೋದರಿ ಪಟ್ಟು ಹಿಡಿದಿದ್ದಾರೆ.

ಸಂತ್ರಸ್ತೆಯ ಅಂತ್ಯ ಸಂಸ್ಕಾರದ ಕೊನೆಯ ವಿಧಿ ವಿಧಾನಗಳಿಗೆ ಜಿಲ್ಲಾಡಳಿತ ಸಿದ್ಧತೆಗಳನ್ನು ನಡೆಸುತ್ತಿರುವಾಗ, ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಖಾತರಿ ನೀಡದ ಹೊರತು ಸಂತ್ರಸ್ತೆಯನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಸಹೋದರಿ ಪ್ರತಿಪಾದಿಸಿದ್ದಾರೆ.

ಆರೋಪಿಗೆ ಮರಣದಂಡನೆಯನ್ನು ವಿಧಿಸಬೇಕೆಂದು ಪಟ್ಟು ಹಿಡಿದಾಗ “ಮರಣದಂಡನೆಯನ್ನು ನೀಡುವುದು ನ್ಯಾಯಾಲಯದ ಕೆಲಸ” ಎಂದು ಸಂತ್ರಸ್ತೆಯ ಸಹೋದರಿಗೆ ತಿಳಿಸಿದಾಗ, “ಯಾರು ನ್ಯಾಯಾಲಯವನ್ನು ಸುತ್ತುತ್ತಾರೆ?” ಎಂದು ಆಕೆ ಪ್ರಶ್ನಿಸಿದ್ದಾರೆ.

ಶನಿವಾರ ಸಂಜೆ ಭಾರೀ ಭದ್ರತಾ ರಕ್ಷಣೆಯ ನಡುವೆ ಸಂತ್ರಸ್ತೆಯ ಮೃತ ದೇಹವನ್ನು ಗ್ರಾಮಕ್ಕೆ ತರಲಾಗಿದೆ.

ಸಂತ್ರಸ್ತೆಯ ಸಾವನ್ನು “ಅತ್ಯಂತ ದುರದೃಷ್ಟಕರ” ಎಂದು ಹೇಳಿರುವ ಸಿಎಂ ಆದಿತ್ಯನಾಥ್ ಆರೋಪಿಗಳನ್ನು ತ್ವರಿತಗತಿಯ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸುವುದಾಗಿ ಹೇಳಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಸಂತ್ರಸ್ತೆಯ ತಂದೆ ಹೈದರಾಬಾದ್ ಎನ್ಕೌಂಟರ್‌ನಂತೆ ಆರೋಪಿಗಳನ್ನು ಕೊಲ್ಲಬೇಕೆಂದು ಒತ್ತಾಯಿಸಿದ್ದಾರೆ. “ನನ್ನ ಏಕೈಕ ಬೇಡಿಕೆಯೆಂದರೆ, ನನ್ನ ಮಗಳ ಕೊಲೆಗಾರರನ್ನು ಹೈದರಾಬಾದ್‌ನಲ್ಲಿ ನಡೆದಂತೆ ಎನ್‌ಕೌಂಟರ್‌ ಮಾಡಿ ಹೊಡೆದುರುಳಿಸಬೇಕು” ಎಂದು ಅವರು ಹೇಳಿದರು. “ಅವರು ಜೈಲಿನಿಂದ ಹೊರಗೆ ಬರಬಾರದು. ಅವರು ಸತ್ತರೆಂದು ನಾನು ಬಯಸುತ್ತೇನೆ … ಆಗ ಮಾತ್ರ ಅವಳ ಆತ್ಮಕ್ಕೆ ಶಾಂತಿ ಸಿಗುತ್ತದೆ. ಅವರು (ಆರೋಪಿಗಳು) ಪ್ರಬಲ ವ್ಯಕ್ತಿಗಳು, ಅವರು ಜೈಲಿನಿಂದ ಹೊರಗಿದ್ದರೆ ನಾವು ಸುರಕ್ಷಿತವಾಗಿರುವುದಿಲ್ಲ. ಅವರು ನನ್ನ ಮಗಳನ್ನು ಕೊಂದರು, ಮತ್ತು ಅವರು ನಮ್ಮನ್ನೂ ಕೊಲ್ಲಬಹುದು. ಹಾಗಾಗಿ ಎನ್ಕೌಂಟರ್‌ನಲ್ಲಿ ಅವರನ್ನು ಕೊಲ್ಲಬೇಕೆಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...