Homeಕರ್ನಾಟಕಕುಟುಂಬ ರಾಜಕಾರಣ ಪೋಷಿಸುತ್ತ ಇತರರ ಕಡೆ ಕಲ್ಲು‌ ಎಸೆಯುವ ಬಿಜೆಪಿ : ಕಾಂಗ್ರೆಸ್

ಕುಟುಂಬ ರಾಜಕಾರಣ ಪೋಷಿಸುತ್ತ ಇತರರ ಕಡೆ ಕಲ್ಲು‌ ಎಸೆಯುವ ಬಿಜೆಪಿ : ಕಾಂಗ್ರೆಸ್

- Advertisement -
- Advertisement -

ಕುಟುಂಬ ರಾಜಕಾರಣವನ್ನ ಪೋಷಿಸುತ್ತಾ ಇನ್ನೊಬ್ಬರತ್ತ ಕಲ್ಲೆಸೆಯುವ ಬಿಜೆಪಿಗೆ ತಮ್ಮ ಮಾತುಗಳಿಗಾಗಲಿ ಬದ್ಧತೆ ಪ್ರದರ್ಶಿಸಬೇಕೆನ್ನುವ ಕನಿಷ್ಠ ಪ್ರಜ್ಞೆ ಇಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ರಾಜ್ಯಕ್ಕೆ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿದೆ. ಬಿಜೆಪಿ ಅದನ್ನು ಪೋಷಿಸುತ್ತಾ ಇತರರ ಕಡೆ ಕಲ್ಲು ಎಸೆಯುತ್ತಿದೆ ಎಂದಿದೆ.

ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ತಂದೆ ಎಸ್.ಅರ್. ಬೊಮ್ಮಾಯಿಯವರು 1988 ರಿಂದ 1989 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ಕುಟುಂಬ ರಾಜಕಾರಣದ ಕುರಿತು ಕಾಂಗ್ರೆಸ್ ಬಿಜೆಪಿಯನ್ನು ಕುಟುಕಿದೆ.

ಇದನ್ನೂ ಓದಿ: ಒಬ್ಬ ಭ್ರಷ್ಟನ ಬದಲು ಮತ್ತೊಬ್ಬ ಭ್ರಷ್ಟ: ಸಿಎಂ ಬದಲಾವಣೆ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

“ತಾನೇ “ಕುಟುಂಬ ರಾಜಕಾರಣ” ಎಂಬ ಗಾಜಿನ ಮನೆಯಲ್ಲಿ ಕುಳಿತು ಇತರರತ್ತ ಕಲ್ಲು ಎಸೆಯುವ ಕರ್ನಾಟಕ ಬಿಜೆಪಿ ನಡೆ ಬಂಡತನದ್ದು!. ಪುಂಖಾನುಪುಂಖವಾಗಿ ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಸಿಎಂ ಆಯ್ಕೆಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದೇಕೆ!?. ಮಾಜಿ ಸಿಎಂ ಪುತ್ರನನ್ನು ಸಿಎಂ ಮಾಡುವಾಗ ತಮ್ಮ ಮಾತು ನೆನಪಾಗಲಿಲ್ಲವೇ ಮೋದಿಯವರಿಗೆ!?” ಎಂದು ಪ್ರಶ್ನಿಸಿದೆ.

“ಕುಟುಂಬ ರಾಜಕಾರಣವನ್ನ ಪೋಷಿಸುತ್ತಾ ಇನ್ನೊಬ್ಬರತ್ತ ಕಲ್ಲೆಸೆಯುವ ಬಿಜೆಪಿಗೆ ತಮ್ಮ ಮಾತುಗಳಿಗಾಗಲಿ ಬದ್ಧತೆ ಪ್ರದರ್ಶಿಸಬೇಕೆನ್ನುವ ಕನಿಷ್ಠ ಪ್ರಜ್ಞೆ ಇಲ್ಲ. ಒಬ್ಬ ಮಾಜಿ ಸಿಎಂ ಪುತ್ರನನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ಮಾಡಿ, ಇನ್ನೊಬ್ಬ ಮಾಜಿ ಸಿಎಂ ಪುತ್ರನನ್ನು ಸಿಎಂ ಮಾಡಿದ್ದೀರಿ! ಬಿಜೆಪಿ = ಫ್ಯಾಮಿಲಿ ಪಾರ್ಟಿ ಅಲ್ಲವೇ!?” ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದೆ.

ಇನ್ನೂ,”ಜನತಾ ಪರಿವಾರದಿಂದ ವಲಸೆ ಬಂದ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಮಾಡಿರುವ ಬಿಜೆಪಿ ತನ್ನದೇ ಕಾರ್ಯಕರ್ತರನ್ನು ಸಿಎಂ ಆಗಬಲ್ಲಂತಹ ನಾಯಕರನ್ನಾಗಿ ಬೆಳೆಸಲಿಲ್ಲವೇ!? ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುತ್ತಿದ್ದ ಕರ್ನಾಟಕ ಬಿಜೆಪಿ, ಈಗ ತಾವು ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ ಎಂಬಂತೆ ನಡೆದುಕೊಂಡಿದ್ದರ ಬಗ್ಗೆ ಚರ್ಚೆಗೆ ಸಿದ್ಧವೇ..?” ಎಂದು ಬಹಿರಂಗ ಚರ್ಚೆಗೆ ಕಾಂಗ್ರೆಸ್ ಆಹ್ವಾನಿಸಿದೆ.

“ವಿಫಲ ಹಾಗೂ ಪಕ್ಷಪಾತಿ ಗೃಹಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ಕೈಯ್ಯಲ್ಲಿ ರಾಜ್ಯ ಅಧೋಗತಿಗೆ ಇಳಿಯಲಿದೆ ಎಂಬುದಕ್ಕೆ ಕೆಲವು ಸಾಕ್ಷಿಗಳು.

1. ಮಂಗಳೂರು ಗಲಭೆ ನಿಯಂತ್ರಣದಲ್ಲಿ ವೈಫಲ್ಯ,

2.ದಲಿತ ಯುವಕನಿಗೆ ಮೂತ್ರ ಕುಡಿಸಿದ ಪೊಲೀಸರು

3. ಅತ್ಯಾಚಾರ ಆರೋಪಿ ಜಾರಕಿಹೊಳಿ ರಕ್ಷಣೆ

4. ಹಲ್ಲೆ ಆರೋಪಿ ಸಿದ್ದು ಸವದಿ ರಕ್ಷಣೆ

5. ಗಲಭೆಕೋರರ ಕೇಸ್ ಹಿಂತೆಗೆತ

ಎಂದು ಪ್ರಕರಣಗಳನ್ನು ಪಟ್ಟಿ ಮಾಡಿ, ಬಸವರಾಜ್ ಬೊಮ್ಮಾಯಿ ಆಡಳಿತದಲ್ಲಿ ರಾಜ್ಯ ಅಧೋಗತಿಗೆ ಇಳಿಯಲಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...