Homeಮುಖಪುಟ'ಪಾಲಾರ್' ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

‘ಪಾಲಾರ್’ ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

- Advertisement -
- Advertisement -

ದಲಿತ ದೌರ್ಜನ್ಯ ಮತ್ತು ಭೂಮಿ ಪ್ರಶ್ನೆಯ ಕಥೆಯನ್ನಾಧರಿಸಿದ ಕನ್ನಡದ ಬಹುನಿರೀಕ್ಷಿತ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಅನ್ನು ಖ್ಯಾತ ತಮಿಳು ನಿರ್ದೇಶಕ ಪ.ರಂಜಿತ್ ಬಿಡುಗಡೆ ಮಾಡಿದ್ದಾರೆ. ‘ಪಾಲಾರ್ ಸಿನಿಮಾ ಕನ್ನಡ ಚಲನಚಿತ್ರರಂಗದಲ್ಲಿ ಮೈಲಿಗಲ್ಲು ಆಗಲಿ ಎಂದು ಶುಭ ಕೋರುತ್ತೇನೆ’ ಎಂದು ಅವರು ಟ್ವೀಟ್ ಸಹ ಮಾಡಿದ್ದಾರೆ.

ಯುವ ನಿರ್ದೇಶಕ ಜೀವಾ ನವೀನ್ ನಿರ್ದೇಶನದ ಕೋಲಾರ ಜಿಲ್ಲೆಯಲ್ಲಿ ನಡೆದ ಸತ್ಯ ಘಟನೆಗಳ ಆಧಾರಿತ ಪಾಲಾರ್ ಸಿನಿಮಾದಲ್ಲಿ ‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಸೌನವಿ ಕ್ರಿಯೇಷನ್ಸ್‌ ಸಂಸ್ಥೆ ಸಿನಿಮಾ ನಿರ್ಮಾಣ ಮಾಡಿದೆ.

ಎಲ್ಲಾ ಕಮ್ಮಿ ಜಾತಿ ನನ್ ಮಕ್ಕಳಿಗೇನಾ ಪ್ರೈಸ್ ಕೊಡೋದು ನೀವು? ಇಲ್ಲ ನೀವು ಅವರೇನಾ? ಎನ್ನುವ ಡೈಲಾಗ್ ಮತ್ತು ‘ಜಮೀನ್‌ಗುಳಗಾ ಏನ್ ಬೆಳೆಯಕಾತದೆ ಅಂದ್ರೆ? ಏನ್ ಏರೋಪ್ಲೇನಾ ಬೆಳೆಯಕಾತದೆ? ರಾಗಿ, ಟಮಾಟ ಬೆಳೆಯಾದು, ಹೊಟ್ಗುಳ್‌ಗ ತಿನ್ನಕ!’ ಎನ್ನುವ ಉಮಾರವರ ಕೋಲಾರ ಕನ್ನಡ ಭಾಷೆಯ ಡೈಲಾರ್ ಟ್ರೇಲರ್‌ನಲ್ಲಿದ್ದು ಗಮನ ಸೆಳೆದಿದೆ.

“ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎನ್ನುತ್ತಾರೆ ನಿರ್ದೇಶಕ ಜೀವಾ ನವೀನ್.

ಮೂರು ತಿಂಗಳ ಹಿಂದೆಯೇ ಚಿತ್ರದ ಟ್ರೇಲರ್ ಬಿಡುಗಡೆಯಾಗಬೇಕಿತ್ತು. ಆದರೆ ದಲಿತರ ಕಥೆ ಎಂಬ ಕಾರಣಕ್ಕೆ ಆಡಿಯೋ ಕಂಪನಿಗಳು ಟ್ರೇಲರ್ ಬಿಡುಗಡೆಗೆ ಹಿಂಜರಿಯುತ್ತಿವೆ ಎಂದು ಜೀವಾ ನವೀನ್ ಆರೋಪಿಸಿದ್ದರು. ಧೀರ್ಘ ಫೇಸ್‌ಬುಕ್ ಪೋಸ್ಟ್ ಮೂಲಕ ಯಾವ ಯಾವ ಕಂಪನಿಗಳು ಯಾವ ರೀತಿ ಉತ್ತರ ನೀಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಕೊನೆಗೆ ಸೌನವಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿಯೇ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಎರಡು ನಿಮಿಷದ ಟ್ರೇಲ್‌ರ್‌ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಒಮ್ಮೆ ನೀವು ಟ್ರೇಲರ್‌ ನೋಡಿ.

ಇದನ್ನೂ ಓದಿ; ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...