Homeಮುಖಪುಟ'ಪಾಲಾರ್' ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

‘ಪಾಲಾರ್’ ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

- Advertisement -
- Advertisement -

ದಲಿತ ದೌರ್ಜನ್ಯ ಮತ್ತು ಭೂಮಿ ಪ್ರಶ್ನೆಯ ಕಥೆಯನ್ನಾಧರಿಸಿದ ಕನ್ನಡದ ಬಹುನಿರೀಕ್ಷಿತ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಅನ್ನು ಖ್ಯಾತ ತಮಿಳು ನಿರ್ದೇಶಕ ಪ.ರಂಜಿತ್ ಬಿಡುಗಡೆ ಮಾಡಿದ್ದಾರೆ. ‘ಪಾಲಾರ್ ಸಿನಿಮಾ ಕನ್ನಡ ಚಲನಚಿತ್ರರಂಗದಲ್ಲಿ ಮೈಲಿಗಲ್ಲು ಆಗಲಿ ಎಂದು ಶುಭ ಕೋರುತ್ತೇನೆ’ ಎಂದು ಅವರು ಟ್ವೀಟ್ ಸಹ ಮಾಡಿದ್ದಾರೆ.

ಯುವ ನಿರ್ದೇಶಕ ಜೀವಾ ನವೀನ್ ನಿರ್ದೇಶನದ ಕೋಲಾರ ಜಿಲ್ಲೆಯಲ್ಲಿ ನಡೆದ ಸತ್ಯ ಘಟನೆಗಳ ಆಧಾರಿತ ಪಾಲಾರ್ ಸಿನಿಮಾದಲ್ಲಿ ‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಸೌನವಿ ಕ್ರಿಯೇಷನ್ಸ್‌ ಸಂಸ್ಥೆ ಸಿನಿಮಾ ನಿರ್ಮಾಣ ಮಾಡಿದೆ.

ಎಲ್ಲಾ ಕಮ್ಮಿ ಜಾತಿ ನನ್ ಮಕ್ಕಳಿಗೇನಾ ಪ್ರೈಸ್ ಕೊಡೋದು ನೀವು? ಇಲ್ಲ ನೀವು ಅವರೇನಾ? ಎನ್ನುವ ಡೈಲಾಗ್ ಮತ್ತು ‘ಜಮೀನ್‌ಗುಳಗಾ ಏನ್ ಬೆಳೆಯಕಾತದೆ ಅಂದ್ರೆ? ಏನ್ ಏರೋಪ್ಲೇನಾ ಬೆಳೆಯಕಾತದೆ? ರಾಗಿ, ಟಮಾಟ ಬೆಳೆಯಾದು, ಹೊಟ್ಗುಳ್‌ಗ ತಿನ್ನಕ!’ ಎನ್ನುವ ಉಮಾರವರ ಕೋಲಾರ ಕನ್ನಡ ಭಾಷೆಯ ಡೈಲಾರ್ ಟ್ರೇಲರ್‌ನಲ್ಲಿದ್ದು ಗಮನ ಸೆಳೆದಿದೆ.

“ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎನ್ನುತ್ತಾರೆ ನಿರ್ದೇಶಕ ಜೀವಾ ನವೀನ್.

ಮೂರು ತಿಂಗಳ ಹಿಂದೆಯೇ ಚಿತ್ರದ ಟ್ರೇಲರ್ ಬಿಡುಗಡೆಯಾಗಬೇಕಿತ್ತು. ಆದರೆ ದಲಿತರ ಕಥೆ ಎಂಬ ಕಾರಣಕ್ಕೆ ಆಡಿಯೋ ಕಂಪನಿಗಳು ಟ್ರೇಲರ್ ಬಿಡುಗಡೆಗೆ ಹಿಂಜರಿಯುತ್ತಿವೆ ಎಂದು ಜೀವಾ ನವೀನ್ ಆರೋಪಿಸಿದ್ದರು. ಧೀರ್ಘ ಫೇಸ್‌ಬುಕ್ ಪೋಸ್ಟ್ ಮೂಲಕ ಯಾವ ಯಾವ ಕಂಪನಿಗಳು ಯಾವ ರೀತಿ ಉತ್ತರ ನೀಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಕೊನೆಗೆ ಸೌನವಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿಯೇ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಎರಡು ನಿಮಿಷದ ಟ್ರೇಲ್‌ರ್‌ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಒಮ್ಮೆ ನೀವು ಟ್ರೇಲರ್‌ ನೋಡಿ.

ಇದನ್ನೂ ಓದಿ; ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...