Homeಮುಖಪುಟ'ಪಾಲಾರ್' ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

‘ಪಾಲಾರ್’ ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

- Advertisement -
- Advertisement -

ದಲಿತ ದೌರ್ಜನ್ಯ ಮತ್ತು ಭೂಮಿ ಪ್ರಶ್ನೆಯ ಕಥೆಯನ್ನಾಧರಿಸಿದ ಕನ್ನಡದ ಬಹುನಿರೀಕ್ಷಿತ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಅನ್ನು ಖ್ಯಾತ ತಮಿಳು ನಿರ್ದೇಶಕ ಪ.ರಂಜಿತ್ ಬಿಡುಗಡೆ ಮಾಡಿದ್ದಾರೆ. ‘ಪಾಲಾರ್ ಸಿನಿಮಾ ಕನ್ನಡ ಚಲನಚಿತ್ರರಂಗದಲ್ಲಿ ಮೈಲಿಗಲ್ಲು ಆಗಲಿ ಎಂದು ಶುಭ ಕೋರುತ್ತೇನೆ’ ಎಂದು ಅವರು ಟ್ವೀಟ್ ಸಹ ಮಾಡಿದ್ದಾರೆ.

ಯುವ ನಿರ್ದೇಶಕ ಜೀವಾ ನವೀನ್ ನಿರ್ದೇಶನದ ಕೋಲಾರ ಜಿಲ್ಲೆಯಲ್ಲಿ ನಡೆದ ಸತ್ಯ ಘಟನೆಗಳ ಆಧಾರಿತ ಪಾಲಾರ್ ಸಿನಿಮಾದಲ್ಲಿ ‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಸೌನವಿ ಕ್ರಿಯೇಷನ್ಸ್‌ ಸಂಸ್ಥೆ ಸಿನಿಮಾ ನಿರ್ಮಾಣ ಮಾಡಿದೆ.

ಎಲ್ಲಾ ಕಮ್ಮಿ ಜಾತಿ ನನ್ ಮಕ್ಕಳಿಗೇನಾ ಪ್ರೈಸ್ ಕೊಡೋದು ನೀವು? ಇಲ್ಲ ನೀವು ಅವರೇನಾ? ಎನ್ನುವ ಡೈಲಾಗ್ ಮತ್ತು ‘ಜಮೀನ್‌ಗುಳಗಾ ಏನ್ ಬೆಳೆಯಕಾತದೆ ಅಂದ್ರೆ? ಏನ್ ಏರೋಪ್ಲೇನಾ ಬೆಳೆಯಕಾತದೆ? ರಾಗಿ, ಟಮಾಟ ಬೆಳೆಯಾದು, ಹೊಟ್ಗುಳ್‌ಗ ತಿನ್ನಕ!’ ಎನ್ನುವ ಉಮಾರವರ ಕೋಲಾರ ಕನ್ನಡ ಭಾಷೆಯ ಡೈಲಾರ್ ಟ್ರೇಲರ್‌ನಲ್ಲಿದ್ದು ಗಮನ ಸೆಳೆದಿದೆ.

“ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎನ್ನುತ್ತಾರೆ ನಿರ್ದೇಶಕ ಜೀವಾ ನವೀನ್.

ಮೂರು ತಿಂಗಳ ಹಿಂದೆಯೇ ಚಿತ್ರದ ಟ್ರೇಲರ್ ಬಿಡುಗಡೆಯಾಗಬೇಕಿತ್ತು. ಆದರೆ ದಲಿತರ ಕಥೆ ಎಂಬ ಕಾರಣಕ್ಕೆ ಆಡಿಯೋ ಕಂಪನಿಗಳು ಟ್ರೇಲರ್ ಬಿಡುಗಡೆಗೆ ಹಿಂಜರಿಯುತ್ತಿವೆ ಎಂದು ಜೀವಾ ನವೀನ್ ಆರೋಪಿಸಿದ್ದರು. ಧೀರ್ಘ ಫೇಸ್‌ಬುಕ್ ಪೋಸ್ಟ್ ಮೂಲಕ ಯಾವ ಯಾವ ಕಂಪನಿಗಳು ಯಾವ ರೀತಿ ಉತ್ತರ ನೀಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಕೊನೆಗೆ ಸೌನವಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿಯೇ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಎರಡು ನಿಮಿಷದ ಟ್ರೇಲ್‌ರ್‌ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಒಮ್ಮೆ ನೀವು ಟ್ರೇಲರ್‌ ನೋಡಿ.

ಇದನ್ನೂ ಓದಿ; ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...