Homeಮುಖಪುಟ'ಪಾಲಾರ್' ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

‘ಪಾಲಾರ್’ ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

- Advertisement -
- Advertisement -

ದಲಿತ ದೌರ್ಜನ್ಯ ಮತ್ತು ಭೂಮಿ ಪ್ರಶ್ನೆಯ ಕಥೆಯನ್ನಾಧರಿಸಿದ ಕನ್ನಡದ ಬಹುನಿರೀಕ್ಷಿತ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಅನ್ನು ಖ್ಯಾತ ತಮಿಳು ನಿರ್ದೇಶಕ ಪ.ರಂಜಿತ್ ಬಿಡುಗಡೆ ಮಾಡಿದ್ದಾರೆ. ‘ಪಾಲಾರ್ ಸಿನಿಮಾ ಕನ್ನಡ ಚಲನಚಿತ್ರರಂಗದಲ್ಲಿ ಮೈಲಿಗಲ್ಲು ಆಗಲಿ ಎಂದು ಶುಭ ಕೋರುತ್ತೇನೆ’ ಎಂದು ಅವರು ಟ್ವೀಟ್ ಸಹ ಮಾಡಿದ್ದಾರೆ.

ಯುವ ನಿರ್ದೇಶಕ ಜೀವಾ ನವೀನ್ ನಿರ್ದೇಶನದ ಕೋಲಾರ ಜಿಲ್ಲೆಯಲ್ಲಿ ನಡೆದ ಸತ್ಯ ಘಟನೆಗಳ ಆಧಾರಿತ ಪಾಲಾರ್ ಸಿನಿಮಾದಲ್ಲಿ ‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಸೌನವಿ ಕ್ರಿಯೇಷನ್ಸ್‌ ಸಂಸ್ಥೆ ಸಿನಿಮಾ ನಿರ್ಮಾಣ ಮಾಡಿದೆ.

ಎಲ್ಲಾ ಕಮ್ಮಿ ಜಾತಿ ನನ್ ಮಕ್ಕಳಿಗೇನಾ ಪ್ರೈಸ್ ಕೊಡೋದು ನೀವು? ಇಲ್ಲ ನೀವು ಅವರೇನಾ? ಎನ್ನುವ ಡೈಲಾಗ್ ಮತ್ತು ‘ಜಮೀನ್‌ಗುಳಗಾ ಏನ್ ಬೆಳೆಯಕಾತದೆ ಅಂದ್ರೆ? ಏನ್ ಏರೋಪ್ಲೇನಾ ಬೆಳೆಯಕಾತದೆ? ರಾಗಿ, ಟಮಾಟ ಬೆಳೆಯಾದು, ಹೊಟ್ಗುಳ್‌ಗ ತಿನ್ನಕ!’ ಎನ್ನುವ ಉಮಾರವರ ಕೋಲಾರ ಕನ್ನಡ ಭಾಷೆಯ ಡೈಲಾರ್ ಟ್ರೇಲರ್‌ನಲ್ಲಿದ್ದು ಗಮನ ಸೆಳೆದಿದೆ.

“ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎನ್ನುತ್ತಾರೆ ನಿರ್ದೇಶಕ ಜೀವಾ ನವೀನ್.

ಮೂರು ತಿಂಗಳ ಹಿಂದೆಯೇ ಚಿತ್ರದ ಟ್ರೇಲರ್ ಬಿಡುಗಡೆಯಾಗಬೇಕಿತ್ತು. ಆದರೆ ದಲಿತರ ಕಥೆ ಎಂಬ ಕಾರಣಕ್ಕೆ ಆಡಿಯೋ ಕಂಪನಿಗಳು ಟ್ರೇಲರ್ ಬಿಡುಗಡೆಗೆ ಹಿಂಜರಿಯುತ್ತಿವೆ ಎಂದು ಜೀವಾ ನವೀನ್ ಆರೋಪಿಸಿದ್ದರು. ಧೀರ್ಘ ಫೇಸ್‌ಬುಕ್ ಪೋಸ್ಟ್ ಮೂಲಕ ಯಾವ ಯಾವ ಕಂಪನಿಗಳು ಯಾವ ರೀತಿ ಉತ್ತರ ನೀಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಕೊನೆಗೆ ಸೌನವಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿಯೇ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಎರಡು ನಿಮಿಷದ ಟ್ರೇಲ್‌ರ್‌ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಒಮ್ಮೆ ನೀವು ಟ್ರೇಲರ್‌ ನೋಡಿ.

ಇದನ್ನೂ ಓದಿ; ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...