Homeಮುಖಪುಟಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ...

ಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ ನಿರ್ಬಂಧ

- Advertisement -
- Advertisement -

ಮುಸ್ಲಿಮರ ಪವಿತ್ರ ‘ಶಬೇ ಬರಾಅತ್’ ದಿನವಾದ ಗುರುವಾರ (ಫೆ.13) ಶ್ರೀನಗರದ ಪ್ರಸಿದ್ದ ಜಾಮಿಯಾ ಮಸೀದಿಯಲ್ಲಿ ರಾತ್ರಿಯ ವಿಶೇಷ ಪ್ರಾರ್ಥನೆಗೆ ಅವಕಾಶ ನಿರಾಕರಿಸಿದ ಆಡಳಿತ, ಮಸೀದಿಗೆ ಬೀಗ ಜಡಿದಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಕಾಶ್ಮೀರದ ಮುಖ್ಯ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಟ್ಟಿದೆ ಎಂದು ವರದಿಯಾಗಿದೆ.

“ಗುರುವಾರ ಅಧಿಕಾರಿಗಳು ಹಠಾತ್ ಮಸೀದಿಯ ದ್ವಾರಗಳನ್ನು ಮುಚ್ಚಿದರು ಮತ್ತು ಪೊಲೀಸ್ ಸಿಬ್ಬಂದಿ ಜನರನ್ನು ಮಸೀದಿಯಿಂದ ಹೊರ ಹೋಗುವಂತೆ ಸೂಚಿಸಿದರು” ಎಂದು ಮಸೀದಿಯ ಉಸ್ತುವಾರಿ ವಹಿಸಿರುವ ಅಂಜುಮನ್ ಔಕಾಫ್ ಹೇಳಿದೆ.

“ಜಾಮಿಯಾ ಮಸೀದಿಯಲ್ಲಿ ಶಬೇ ಬರಾತ್ ಆಚರಣೆಗೆ ಅನುಮತಿ ನೀಡುವುದಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆಯಿಂದ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ. ಅವರು ತನ್ನ ಧಾರ್ಮಿಕ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆಯಲಾಗಿದೆ” ಎಂದು ಔಕಾಫ್ ಆರೋಪಿಸಿದೆ.

ವಿಶೇಷ ಧಾರ್ಮಿಕ ದಿನಗಳಂದು ಹೆಚ್ಚಿನ ಜನರು ಮಸೀದಿಗಳಿಗೆ ಭೇಟಿ ನೀಡುತ್ತಾರೆ. ಆದರೆ, ಎಲ್ಲಾ ವಿಶೇಷ ದಿನಗಳಂದು ಜಾಮಿಯಾ ಮಸೀದಿಯನ್ನು ಮುಚ್ಚಲಾಗ್ತಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಧಾರ್ಮಿಕ ಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗುತ್ತಿದೆ. ಇದು ಬಹಳ ದುರದೃಷ್ಟಕರ. ಇಂತಹ ಪುನರಾವರ್ತಿತ ನಿರ್ಬಂಧಗಳು ಜನರ ಭಾವನೆಗಳಿಗೆ ನೋವುಂಟು ಮಾಡುವುದಲ್ಲದೆ, ಅವರ ಮೂಲಭೂತ ಧಾರ್ಮಿಕ ಹಕ್ಕುನ್ನು ತಡೆದಂತೆಯಾಗುತ್ತದೆ ಎಂದು ಅಂಜುಮನ್ ಔಕಾಫ್ ಹೇಳಿದೆ.

ದುರದೃಷ್ಟಕರ : ಸಿಎಂ ಉಮರ್ ಅಬ್ದುಲ್ಲಾ

“ಶಬೇ ಬರಾಅತ್ ದಿನವೇ ಶ್ರೀನಗರದ ಜಾಮಿಯಾ ಮಸೀದಿಯನ್ನು ಮುಚ್ಚಿರುವುದು ದುರದೃಷ್ಟಕರ. ಈ ಕ್ರಮ ಜನರಿಗೆ ಕಾನೂನು ಸುವ್ಯವಸ್ಥೆಯ ಮೇಲೆ ನಂಬಿಕೆ ಕಡಿಮೆಯಾಗುವಂತೆ ಮಾಡುತ್ತದೆ. ಕಾಶ್ಮೀರದ ಜನರು ಈ ಪರಿಸ್ಥಿತಿ ಎದುರಿಸಬೇಕಾದವರಲ್ಲ. ಅವರು ಇದಕ್ಕಿಂತ ಉತ್ತಮ ಪರಿಸ್ಥಿತಿ ಅನುಭವಿಸಬೇಕಾದವರು” ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ಕೂಡ ಆಡಳಿತದ ಕ್ರಮವನ್ನು ಖಂಡಿಸಿದ್ದಾರೆ. “ಶಬೇ ಬರಾಅತ್ ಹಬ್ಬದ ಪವಿತ್ರ ದಿನದಂದು ಮಿರ್ವೈಝ್ ಸಾಹಬ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಮತ್ತು ಜಾಮಿಯಾ ಮಸೀದಿಯ ದ್ವಾರಗಳನ್ನು ಹಠಾತ್ತನೆ ಮುಚ್ಚಲಾಗಿದೆ. ಕಾಶ್ಮೀರದಲ್ಲಿ ನಮ್ಮ ಮೂಲಭೂತ ವಾಕ್ ಮತ್ತು ಅಭಿವ್ಯಕ್ತಿ ಹಕ್ಕುಗಳನ್ನು ಮಾತ್ರವಲ್ಲದೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕೂಡ ತಡೆಯಲಾಗುತ್ತಿದೆ. ಇದು ಅಪರಾಧ ಮತ್ತು ದುಃಖಕರ. ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸರ್ಕಾರ ಚರ್ಚ್ ಇಲಿಯಂತೆ ಮೌನವಾಗಿರುವುದು ಆಘಾತಕಾರಿ. ನೀವು ಯಾವ ಸಂವಿಧಾನವನ್ನು ಅನುಸರಿಸುತ್ತಿದ್ದೀರಿ?” ಎಂದು ಇಲ್ತಿಜಾ ಮುಫ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಆರನೇ ವರ್ಷವೂ ಮಸೀದಿ ಬಂದ್

ಶಬೇ ಬರಾಅತ್ ದಿನ ಸತತ ಆರನೇ ವರ್ಷವೂ ಜಾಮಿಯಾ ಮಸೀದಿಗೆ ಬೀಗ ಜಡಿಯಲಾಗಿದೆ ಎಂದು ವರದಿಗಳು ಹೇಳಿವೆ. ಆದರೆ, ಯಾವ ಕಾರಣಕ್ಕೆ ಶಬೇ ಬರಾಅತ್ ದಿನ ಮಸೀದಿಯನ್ನು ಬಂದ್ ಮಾಡಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ.

ಮಣಿಪುರ | ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ ಯೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...