Homeಮುಖಪುಟಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ...

ಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ ನಿರ್ಬಂಧ

- Advertisement -
- Advertisement -

ಮುಸ್ಲಿಮರ ಪವಿತ್ರ ‘ಶಬೇ ಬರಾಅತ್’ ದಿನವಾದ ಗುರುವಾರ (ಫೆ.13) ಶ್ರೀನಗರದ ಪ್ರಸಿದ್ದ ಜಾಮಿಯಾ ಮಸೀದಿಯಲ್ಲಿ ರಾತ್ರಿಯ ವಿಶೇಷ ಪ್ರಾರ್ಥನೆಗೆ ಅವಕಾಶ ನಿರಾಕರಿಸಿದ ಆಡಳಿತ, ಮಸೀದಿಗೆ ಬೀಗ ಜಡಿದಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಕಾಶ್ಮೀರದ ಮುಖ್ಯ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಟ್ಟಿದೆ ಎಂದು ವರದಿಯಾಗಿದೆ.

“ಗುರುವಾರ ಅಧಿಕಾರಿಗಳು ಹಠಾತ್ ಮಸೀದಿಯ ದ್ವಾರಗಳನ್ನು ಮುಚ್ಚಿದರು ಮತ್ತು ಪೊಲೀಸ್ ಸಿಬ್ಬಂದಿ ಜನರನ್ನು ಮಸೀದಿಯಿಂದ ಹೊರ ಹೋಗುವಂತೆ ಸೂಚಿಸಿದರು” ಎಂದು ಮಸೀದಿಯ ಉಸ್ತುವಾರಿ ವಹಿಸಿರುವ ಅಂಜುಮನ್ ಔಕಾಫ್ ಹೇಳಿದೆ.

“ಜಾಮಿಯಾ ಮಸೀದಿಯಲ್ಲಿ ಶಬೇ ಬರಾತ್ ಆಚರಣೆಗೆ ಅನುಮತಿ ನೀಡುವುದಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆಯಿಂದ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ. ಅವರು ತನ್ನ ಧಾರ್ಮಿಕ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆಯಲಾಗಿದೆ” ಎಂದು ಔಕಾಫ್ ಆರೋಪಿಸಿದೆ.

ವಿಶೇಷ ಧಾರ್ಮಿಕ ದಿನಗಳಂದು ಹೆಚ್ಚಿನ ಜನರು ಮಸೀದಿಗಳಿಗೆ ಭೇಟಿ ನೀಡುತ್ತಾರೆ. ಆದರೆ, ಎಲ್ಲಾ ವಿಶೇಷ ದಿನಗಳಂದು ಜಾಮಿಯಾ ಮಸೀದಿಯನ್ನು ಮುಚ್ಚಲಾಗ್ತಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಧಾರ್ಮಿಕ ಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗುತ್ತಿದೆ. ಇದು ಬಹಳ ದುರದೃಷ್ಟಕರ. ಇಂತಹ ಪುನರಾವರ್ತಿತ ನಿರ್ಬಂಧಗಳು ಜನರ ಭಾವನೆಗಳಿಗೆ ನೋವುಂಟು ಮಾಡುವುದಲ್ಲದೆ, ಅವರ ಮೂಲಭೂತ ಧಾರ್ಮಿಕ ಹಕ್ಕುನ್ನು ತಡೆದಂತೆಯಾಗುತ್ತದೆ ಎಂದು ಅಂಜುಮನ್ ಔಕಾಫ್ ಹೇಳಿದೆ.

ದುರದೃಷ್ಟಕರ : ಸಿಎಂ ಉಮರ್ ಅಬ್ದುಲ್ಲಾ

“ಶಬೇ ಬರಾಅತ್ ದಿನವೇ ಶ್ರೀನಗರದ ಜಾಮಿಯಾ ಮಸೀದಿಯನ್ನು ಮುಚ್ಚಿರುವುದು ದುರದೃಷ್ಟಕರ. ಈ ಕ್ರಮ ಜನರಿಗೆ ಕಾನೂನು ಸುವ್ಯವಸ್ಥೆಯ ಮೇಲೆ ನಂಬಿಕೆ ಕಡಿಮೆಯಾಗುವಂತೆ ಮಾಡುತ್ತದೆ. ಕಾಶ್ಮೀರದ ಜನರು ಈ ಪರಿಸ್ಥಿತಿ ಎದುರಿಸಬೇಕಾದವರಲ್ಲ. ಅವರು ಇದಕ್ಕಿಂತ ಉತ್ತಮ ಪರಿಸ್ಥಿತಿ ಅನುಭವಿಸಬೇಕಾದವರು” ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ಕೂಡ ಆಡಳಿತದ ಕ್ರಮವನ್ನು ಖಂಡಿಸಿದ್ದಾರೆ. “ಶಬೇ ಬರಾಅತ್ ಹಬ್ಬದ ಪವಿತ್ರ ದಿನದಂದು ಮಿರ್ವೈಝ್ ಸಾಹಬ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಮತ್ತು ಜಾಮಿಯಾ ಮಸೀದಿಯ ದ್ವಾರಗಳನ್ನು ಹಠಾತ್ತನೆ ಮುಚ್ಚಲಾಗಿದೆ. ಕಾಶ್ಮೀರದಲ್ಲಿ ನಮ್ಮ ಮೂಲಭೂತ ವಾಕ್ ಮತ್ತು ಅಭಿವ್ಯಕ್ತಿ ಹಕ್ಕುಗಳನ್ನು ಮಾತ್ರವಲ್ಲದೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕೂಡ ತಡೆಯಲಾಗುತ್ತಿದೆ. ಇದು ಅಪರಾಧ ಮತ್ತು ದುಃಖಕರ. ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸರ್ಕಾರ ಚರ್ಚ್ ಇಲಿಯಂತೆ ಮೌನವಾಗಿರುವುದು ಆಘಾತಕಾರಿ. ನೀವು ಯಾವ ಸಂವಿಧಾನವನ್ನು ಅನುಸರಿಸುತ್ತಿದ್ದೀರಿ?” ಎಂದು ಇಲ್ತಿಜಾ ಮುಫ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಆರನೇ ವರ್ಷವೂ ಮಸೀದಿ ಬಂದ್

ಶಬೇ ಬರಾಅತ್ ದಿನ ಸತತ ಆರನೇ ವರ್ಷವೂ ಜಾಮಿಯಾ ಮಸೀದಿಗೆ ಬೀಗ ಜಡಿಯಲಾಗಿದೆ ಎಂದು ವರದಿಗಳು ಹೇಳಿವೆ. ಆದರೆ, ಯಾವ ಕಾರಣಕ್ಕೆ ಶಬೇ ಬರಾಅತ್ ದಿನ ಮಸೀದಿಯನ್ನು ಬಂದ್ ಮಾಡಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ.

ಮಣಿಪುರ | ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ ಯೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...