Homeಮುಖಪುಟಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ...

ಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ ನಿರ್ಬಂಧ

- Advertisement -
- Advertisement -

ಮುಸ್ಲಿಮರ ಪವಿತ್ರ ‘ಶಬೇ ಬರಾಅತ್’ ದಿನವಾದ ಗುರುವಾರ (ಫೆ.13) ಶ್ರೀನಗರದ ಪ್ರಸಿದ್ದ ಜಾಮಿಯಾ ಮಸೀದಿಯಲ್ಲಿ ರಾತ್ರಿಯ ವಿಶೇಷ ಪ್ರಾರ್ಥನೆಗೆ ಅವಕಾಶ ನಿರಾಕರಿಸಿದ ಆಡಳಿತ, ಮಸೀದಿಗೆ ಬೀಗ ಜಡಿದಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಕಾಶ್ಮೀರದ ಮುಖ್ಯ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಟ್ಟಿದೆ ಎಂದು ವರದಿಯಾಗಿದೆ.

“ಗುರುವಾರ ಅಧಿಕಾರಿಗಳು ಹಠಾತ್ ಮಸೀದಿಯ ದ್ವಾರಗಳನ್ನು ಮುಚ್ಚಿದರು ಮತ್ತು ಪೊಲೀಸ್ ಸಿಬ್ಬಂದಿ ಜನರನ್ನು ಮಸೀದಿಯಿಂದ ಹೊರ ಹೋಗುವಂತೆ ಸೂಚಿಸಿದರು” ಎಂದು ಮಸೀದಿಯ ಉಸ್ತುವಾರಿ ವಹಿಸಿರುವ ಅಂಜುಮನ್ ಔಕಾಫ್ ಹೇಳಿದೆ.

“ಜಾಮಿಯಾ ಮಸೀದಿಯಲ್ಲಿ ಶಬೇ ಬರಾತ್ ಆಚರಣೆಗೆ ಅನುಮತಿ ನೀಡುವುದಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆಯಿಂದ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ. ಅವರು ತನ್ನ ಧಾರ್ಮಿಕ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆಯಲಾಗಿದೆ” ಎಂದು ಔಕಾಫ್ ಆರೋಪಿಸಿದೆ.

ವಿಶೇಷ ಧಾರ್ಮಿಕ ದಿನಗಳಂದು ಹೆಚ್ಚಿನ ಜನರು ಮಸೀದಿಗಳಿಗೆ ಭೇಟಿ ನೀಡುತ್ತಾರೆ. ಆದರೆ, ಎಲ್ಲಾ ವಿಶೇಷ ದಿನಗಳಂದು ಜಾಮಿಯಾ ಮಸೀದಿಯನ್ನು ಮುಚ್ಚಲಾಗ್ತಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಧಾರ್ಮಿಕ ಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗುತ್ತಿದೆ. ಇದು ಬಹಳ ದುರದೃಷ್ಟಕರ. ಇಂತಹ ಪುನರಾವರ್ತಿತ ನಿರ್ಬಂಧಗಳು ಜನರ ಭಾವನೆಗಳಿಗೆ ನೋವುಂಟು ಮಾಡುವುದಲ್ಲದೆ, ಅವರ ಮೂಲಭೂತ ಧಾರ್ಮಿಕ ಹಕ್ಕುನ್ನು ತಡೆದಂತೆಯಾಗುತ್ತದೆ ಎಂದು ಅಂಜುಮನ್ ಔಕಾಫ್ ಹೇಳಿದೆ.

ದುರದೃಷ್ಟಕರ : ಸಿಎಂ ಉಮರ್ ಅಬ್ದುಲ್ಲಾ

“ಶಬೇ ಬರಾಅತ್ ದಿನವೇ ಶ್ರೀನಗರದ ಜಾಮಿಯಾ ಮಸೀದಿಯನ್ನು ಮುಚ್ಚಿರುವುದು ದುರದೃಷ್ಟಕರ. ಈ ಕ್ರಮ ಜನರಿಗೆ ಕಾನೂನು ಸುವ್ಯವಸ್ಥೆಯ ಮೇಲೆ ನಂಬಿಕೆ ಕಡಿಮೆಯಾಗುವಂತೆ ಮಾಡುತ್ತದೆ. ಕಾಶ್ಮೀರದ ಜನರು ಈ ಪರಿಸ್ಥಿತಿ ಎದುರಿಸಬೇಕಾದವರಲ್ಲ. ಅವರು ಇದಕ್ಕಿಂತ ಉತ್ತಮ ಪರಿಸ್ಥಿತಿ ಅನುಭವಿಸಬೇಕಾದವರು” ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ಕೂಡ ಆಡಳಿತದ ಕ್ರಮವನ್ನು ಖಂಡಿಸಿದ್ದಾರೆ. “ಶಬೇ ಬರಾಅತ್ ಹಬ್ಬದ ಪವಿತ್ರ ದಿನದಂದು ಮಿರ್ವೈಝ್ ಸಾಹಬ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಮತ್ತು ಜಾಮಿಯಾ ಮಸೀದಿಯ ದ್ವಾರಗಳನ್ನು ಹಠಾತ್ತನೆ ಮುಚ್ಚಲಾಗಿದೆ. ಕಾಶ್ಮೀರದಲ್ಲಿ ನಮ್ಮ ಮೂಲಭೂತ ವಾಕ್ ಮತ್ತು ಅಭಿವ್ಯಕ್ತಿ ಹಕ್ಕುಗಳನ್ನು ಮಾತ್ರವಲ್ಲದೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕೂಡ ತಡೆಯಲಾಗುತ್ತಿದೆ. ಇದು ಅಪರಾಧ ಮತ್ತು ದುಃಖಕರ. ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸರ್ಕಾರ ಚರ್ಚ್ ಇಲಿಯಂತೆ ಮೌನವಾಗಿರುವುದು ಆಘಾತಕಾರಿ. ನೀವು ಯಾವ ಸಂವಿಧಾನವನ್ನು ಅನುಸರಿಸುತ್ತಿದ್ದೀರಿ?” ಎಂದು ಇಲ್ತಿಜಾ ಮುಫ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಆರನೇ ವರ್ಷವೂ ಮಸೀದಿ ಬಂದ್

ಶಬೇ ಬರಾಅತ್ ದಿನ ಸತತ ಆರನೇ ವರ್ಷವೂ ಜಾಮಿಯಾ ಮಸೀದಿಗೆ ಬೀಗ ಜಡಿಯಲಾಗಿದೆ ಎಂದು ವರದಿಗಳು ಹೇಳಿವೆ. ಆದರೆ, ಯಾವ ಕಾರಣಕ್ಕೆ ಶಬೇ ಬರಾಅತ್ ದಿನ ಮಸೀದಿಯನ್ನು ಬಂದ್ ಮಾಡಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ.

ಮಣಿಪುರ | ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ ಯೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...