Homeಮುಖಪುಟಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ...

ಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ ನಿರ್ಬಂಧ

- Advertisement -
- Advertisement -

ಮುಸ್ಲಿಮರ ಪವಿತ್ರ ‘ಶಬೇ ಬರಾಅತ್’ ದಿನವಾದ ಗುರುವಾರ (ಫೆ.13) ಶ್ರೀನಗರದ ಪ್ರಸಿದ್ದ ಜಾಮಿಯಾ ಮಸೀದಿಯಲ್ಲಿ ರಾತ್ರಿಯ ವಿಶೇಷ ಪ್ರಾರ್ಥನೆಗೆ ಅವಕಾಶ ನಿರಾಕರಿಸಿದ ಆಡಳಿತ, ಮಸೀದಿಗೆ ಬೀಗ ಜಡಿದಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಕಾಶ್ಮೀರದ ಮುಖ್ಯ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಟ್ಟಿದೆ ಎಂದು ವರದಿಯಾಗಿದೆ.

“ಗುರುವಾರ ಅಧಿಕಾರಿಗಳು ಹಠಾತ್ ಮಸೀದಿಯ ದ್ವಾರಗಳನ್ನು ಮುಚ್ಚಿದರು ಮತ್ತು ಪೊಲೀಸ್ ಸಿಬ್ಬಂದಿ ಜನರನ್ನು ಮಸೀದಿಯಿಂದ ಹೊರ ಹೋಗುವಂತೆ ಸೂಚಿಸಿದರು” ಎಂದು ಮಸೀದಿಯ ಉಸ್ತುವಾರಿ ವಹಿಸಿರುವ ಅಂಜುಮನ್ ಔಕಾಫ್ ಹೇಳಿದೆ.

“ಜಾಮಿಯಾ ಮಸೀದಿಯಲ್ಲಿ ಶಬೇ ಬರಾತ್ ಆಚರಣೆಗೆ ಅನುಮತಿ ನೀಡುವುದಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆಯಿಂದ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ. ಅವರು ತನ್ನ ಧಾರ್ಮಿಕ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆಯಲಾಗಿದೆ” ಎಂದು ಔಕಾಫ್ ಆರೋಪಿಸಿದೆ.

ವಿಶೇಷ ಧಾರ್ಮಿಕ ದಿನಗಳಂದು ಹೆಚ್ಚಿನ ಜನರು ಮಸೀದಿಗಳಿಗೆ ಭೇಟಿ ನೀಡುತ್ತಾರೆ. ಆದರೆ, ಎಲ್ಲಾ ವಿಶೇಷ ದಿನಗಳಂದು ಜಾಮಿಯಾ ಮಸೀದಿಯನ್ನು ಮುಚ್ಚಲಾಗ್ತಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಧಾರ್ಮಿಕ ಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗುತ್ತಿದೆ. ಇದು ಬಹಳ ದುರದೃಷ್ಟಕರ. ಇಂತಹ ಪುನರಾವರ್ತಿತ ನಿರ್ಬಂಧಗಳು ಜನರ ಭಾವನೆಗಳಿಗೆ ನೋವುಂಟು ಮಾಡುವುದಲ್ಲದೆ, ಅವರ ಮೂಲಭೂತ ಧಾರ್ಮಿಕ ಹಕ್ಕುನ್ನು ತಡೆದಂತೆಯಾಗುತ್ತದೆ ಎಂದು ಅಂಜುಮನ್ ಔಕಾಫ್ ಹೇಳಿದೆ.

ದುರದೃಷ್ಟಕರ : ಸಿಎಂ ಉಮರ್ ಅಬ್ದುಲ್ಲಾ

“ಶಬೇ ಬರಾಅತ್ ದಿನವೇ ಶ್ರೀನಗರದ ಜಾಮಿಯಾ ಮಸೀದಿಯನ್ನು ಮುಚ್ಚಿರುವುದು ದುರದೃಷ್ಟಕರ. ಈ ಕ್ರಮ ಜನರಿಗೆ ಕಾನೂನು ಸುವ್ಯವಸ್ಥೆಯ ಮೇಲೆ ನಂಬಿಕೆ ಕಡಿಮೆಯಾಗುವಂತೆ ಮಾಡುತ್ತದೆ. ಕಾಶ್ಮೀರದ ಜನರು ಈ ಪರಿಸ್ಥಿತಿ ಎದುರಿಸಬೇಕಾದವರಲ್ಲ. ಅವರು ಇದಕ್ಕಿಂತ ಉತ್ತಮ ಪರಿಸ್ಥಿತಿ ಅನುಭವಿಸಬೇಕಾದವರು” ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ಕೂಡ ಆಡಳಿತದ ಕ್ರಮವನ್ನು ಖಂಡಿಸಿದ್ದಾರೆ. “ಶಬೇ ಬರಾಅತ್ ಹಬ್ಬದ ಪವಿತ್ರ ದಿನದಂದು ಮಿರ್ವೈಝ್ ಸಾಹಬ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಮತ್ತು ಜಾಮಿಯಾ ಮಸೀದಿಯ ದ್ವಾರಗಳನ್ನು ಹಠಾತ್ತನೆ ಮುಚ್ಚಲಾಗಿದೆ. ಕಾಶ್ಮೀರದಲ್ಲಿ ನಮ್ಮ ಮೂಲಭೂತ ವಾಕ್ ಮತ್ತು ಅಭಿವ್ಯಕ್ತಿ ಹಕ್ಕುಗಳನ್ನು ಮಾತ್ರವಲ್ಲದೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕೂಡ ತಡೆಯಲಾಗುತ್ತಿದೆ. ಇದು ಅಪರಾಧ ಮತ್ತು ದುಃಖಕರ. ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸರ್ಕಾರ ಚರ್ಚ್ ಇಲಿಯಂತೆ ಮೌನವಾಗಿರುವುದು ಆಘಾತಕಾರಿ. ನೀವು ಯಾವ ಸಂವಿಧಾನವನ್ನು ಅನುಸರಿಸುತ್ತಿದ್ದೀರಿ?” ಎಂದು ಇಲ್ತಿಜಾ ಮುಫ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಆರನೇ ವರ್ಷವೂ ಮಸೀದಿ ಬಂದ್

ಶಬೇ ಬರಾಅತ್ ದಿನ ಸತತ ಆರನೇ ವರ್ಷವೂ ಜಾಮಿಯಾ ಮಸೀದಿಗೆ ಬೀಗ ಜಡಿಯಲಾಗಿದೆ ಎಂದು ವರದಿಗಳು ಹೇಳಿವೆ. ಆದರೆ, ಯಾವ ಕಾರಣಕ್ಕೆ ಶಬೇ ಬರಾಅತ್ ದಿನ ಮಸೀದಿಯನ್ನು ಬಂದ್ ಮಾಡಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ.

ಮಣಿಪುರ | ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ ಯೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...