Homeಮುಖಪುಟಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ...

ಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ ನಿರ್ಬಂಧ

- Advertisement -
- Advertisement -

ಮುಸ್ಲಿಮರ ಪವಿತ್ರ ‘ಶಬೇ ಬರಾಅತ್’ ದಿನವಾದ ಗುರುವಾರ (ಫೆ.13) ಶ್ರೀನಗರದ ಪ್ರಸಿದ್ದ ಜಾಮಿಯಾ ಮಸೀದಿಯಲ್ಲಿ ರಾತ್ರಿಯ ವಿಶೇಷ ಪ್ರಾರ್ಥನೆಗೆ ಅವಕಾಶ ನಿರಾಕರಿಸಿದ ಆಡಳಿತ, ಮಸೀದಿಗೆ ಬೀಗ ಜಡಿದಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಕಾಶ್ಮೀರದ ಮುಖ್ಯ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಟ್ಟಿದೆ ಎಂದು ವರದಿಯಾಗಿದೆ.

“ಗುರುವಾರ ಅಧಿಕಾರಿಗಳು ಹಠಾತ್ ಮಸೀದಿಯ ದ್ವಾರಗಳನ್ನು ಮುಚ್ಚಿದರು ಮತ್ತು ಪೊಲೀಸ್ ಸಿಬ್ಬಂದಿ ಜನರನ್ನು ಮಸೀದಿಯಿಂದ ಹೊರ ಹೋಗುವಂತೆ ಸೂಚಿಸಿದರು” ಎಂದು ಮಸೀದಿಯ ಉಸ್ತುವಾರಿ ವಹಿಸಿರುವ ಅಂಜುಮನ್ ಔಕಾಫ್ ಹೇಳಿದೆ.

“ಜಾಮಿಯಾ ಮಸೀದಿಯಲ್ಲಿ ಶಬೇ ಬರಾತ್ ಆಚರಣೆಗೆ ಅನುಮತಿ ನೀಡುವುದಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆಯಿಂದ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ. ಅವರು ತನ್ನ ಧಾರ್ಮಿಕ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆಯಲಾಗಿದೆ” ಎಂದು ಔಕಾಫ್ ಆರೋಪಿಸಿದೆ.

ವಿಶೇಷ ಧಾರ್ಮಿಕ ದಿನಗಳಂದು ಹೆಚ್ಚಿನ ಜನರು ಮಸೀದಿಗಳಿಗೆ ಭೇಟಿ ನೀಡುತ್ತಾರೆ. ಆದರೆ, ಎಲ್ಲಾ ವಿಶೇಷ ದಿನಗಳಂದು ಜಾಮಿಯಾ ಮಸೀದಿಯನ್ನು ಮುಚ್ಚಲಾಗ್ತಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಧಾರ್ಮಿಕ ಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗುತ್ತಿದೆ. ಇದು ಬಹಳ ದುರದೃಷ್ಟಕರ. ಇಂತಹ ಪುನರಾವರ್ತಿತ ನಿರ್ಬಂಧಗಳು ಜನರ ಭಾವನೆಗಳಿಗೆ ನೋವುಂಟು ಮಾಡುವುದಲ್ಲದೆ, ಅವರ ಮೂಲಭೂತ ಧಾರ್ಮಿಕ ಹಕ್ಕುನ್ನು ತಡೆದಂತೆಯಾಗುತ್ತದೆ ಎಂದು ಅಂಜುಮನ್ ಔಕಾಫ್ ಹೇಳಿದೆ.

ದುರದೃಷ್ಟಕರ : ಸಿಎಂ ಉಮರ್ ಅಬ್ದುಲ್ಲಾ

“ಶಬೇ ಬರಾಅತ್ ದಿನವೇ ಶ್ರೀನಗರದ ಜಾಮಿಯಾ ಮಸೀದಿಯನ್ನು ಮುಚ್ಚಿರುವುದು ದುರದೃಷ್ಟಕರ. ಈ ಕ್ರಮ ಜನರಿಗೆ ಕಾನೂನು ಸುವ್ಯವಸ್ಥೆಯ ಮೇಲೆ ನಂಬಿಕೆ ಕಡಿಮೆಯಾಗುವಂತೆ ಮಾಡುತ್ತದೆ. ಕಾಶ್ಮೀರದ ಜನರು ಈ ಪರಿಸ್ಥಿತಿ ಎದುರಿಸಬೇಕಾದವರಲ್ಲ. ಅವರು ಇದಕ್ಕಿಂತ ಉತ್ತಮ ಪರಿಸ್ಥಿತಿ ಅನುಭವಿಸಬೇಕಾದವರು” ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ಕೂಡ ಆಡಳಿತದ ಕ್ರಮವನ್ನು ಖಂಡಿಸಿದ್ದಾರೆ. “ಶಬೇ ಬರಾಅತ್ ಹಬ್ಬದ ಪವಿತ್ರ ದಿನದಂದು ಮಿರ್ವೈಝ್ ಸಾಹಬ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಮತ್ತು ಜಾಮಿಯಾ ಮಸೀದಿಯ ದ್ವಾರಗಳನ್ನು ಹಠಾತ್ತನೆ ಮುಚ್ಚಲಾಗಿದೆ. ಕಾಶ್ಮೀರದಲ್ಲಿ ನಮ್ಮ ಮೂಲಭೂತ ವಾಕ್ ಮತ್ತು ಅಭಿವ್ಯಕ್ತಿ ಹಕ್ಕುಗಳನ್ನು ಮಾತ್ರವಲ್ಲದೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕೂಡ ತಡೆಯಲಾಗುತ್ತಿದೆ. ಇದು ಅಪರಾಧ ಮತ್ತು ದುಃಖಕರ. ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸರ್ಕಾರ ಚರ್ಚ್ ಇಲಿಯಂತೆ ಮೌನವಾಗಿರುವುದು ಆಘಾತಕಾರಿ. ನೀವು ಯಾವ ಸಂವಿಧಾನವನ್ನು ಅನುಸರಿಸುತ್ತಿದ್ದೀರಿ?” ಎಂದು ಇಲ್ತಿಜಾ ಮುಫ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಆರನೇ ವರ್ಷವೂ ಮಸೀದಿ ಬಂದ್

ಶಬೇ ಬರಾಅತ್ ದಿನ ಸತತ ಆರನೇ ವರ್ಷವೂ ಜಾಮಿಯಾ ಮಸೀದಿಗೆ ಬೀಗ ಜಡಿಯಲಾಗಿದೆ ಎಂದು ವರದಿಗಳು ಹೇಳಿವೆ. ಆದರೆ, ಯಾವ ಕಾರಣಕ್ಕೆ ಶಬೇ ಬರಾಅತ್ ದಿನ ಮಸೀದಿಯನ್ನು ಬಂದ್ ಮಾಡಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ.

ಮಣಿಪುರ | ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ ಯೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...