Homeಕರ್ನಾಟಕಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ (67) ನಿಧನ

ಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ (67) ನಿಧನ

- Advertisement -
- Advertisement -

ನಾಡಿನ ಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ ಅವರು ಕೊರೊನಾ ಸೋಂಕಿನಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನ ಹೊಂದಿದ್ದಾರೆ. ಸೋಂಕಿನಿಂದಾಗಿ ಅವರು ಕಳೆದ ಐದು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.

1955ರ ಏಪ್ರಿಲ್ 22 ರಂದು ಜನಿಸಿದ ಎ.ಎನ್.ಮುಕುಂದ ಅವರು, ಕರ್ನಾಟಕದ ಉತ್ತಮ ಫೋಟೊಗ್ರಾಫರ್‌ಗಳಲ್ಲಿ ಒಬ್ಬರು. ದಾವಣಗೆರೆಯಲ್ಲಿ ಹೈಸ್ಕೂಲು ವಿದ್ಯಾಭ್ಯಾಸ ಮತ್ತು ಬೆಂಗಳೂರಿನ ಬಿ.ಎಮ್.ಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದರು. ವಿದ್ಯಾಭ್ಯಾಸದ ನಂತರ ಕೆ.ಪಿ.ಟಿ.ಸಿ.ಎಲ್.ನಲ್ಲಿ 30 ವರ್ಷದ ಸೇವೆ ಸಲ್ಲಿಸಿದ್ದ ಅವರು 2008ರಲ್ಲಿ ಸ್ವಯಂ ನಿವೃತ್ತಿ ಪಡೆದು ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೃತ್ತಿಯಲ್ಲಿ ಇಂಜಿನಿಯರ್ ಅಗಿದ್ದ ಅವರು, ಸಾಹಿತ್ಯ ಮತ್ತು ಸಾಸ್ಕೃತಿಕ ಚಟುವಟಿಕೆಗಳ ಜೊತೆಗೆ ಗುರುತಿಸಿಕೊಂಡಿದ್ದು, ಛಾಯಾಗ್ರಾಹಕರಾಗಿ ಸಾಹಿತ್ಯಕ್ಕೆ ಪೂರಕವಾದ ಸಾಹಿತಿಗಳ ಭಾವಚಿತ್ರ, ವಿಶೇಷ ಚಿತ್ರಗಳನ್ನು ಅವರು ಕ್ಲಿಕ್ಕಿಸಿದ್ದಾರೆ.

ಇದನ್ನೂ ಓದಿ: ‘ಕೊಲುವೆನೆಂಬ ಭಾಶೆ’ ಕೃತಿ ಪರಿಚಯ: ಉಳಿಸುವ ನುಡಿಯ ಹುಡುಕುತ್ತಾ…

‘ಮುಖಮುದ್ರೆ’ ಎಂಬುದು ಎ.ಎನ್. ಮುಕುಂದ ಅವರ ವಿಶಿಷ್ಟ ಕೃತಿಯಾಗಿದ್ದು, ಅದರಲ್ಲಿ ಅವರು ಕನ್ನಡ ಸಾಹಿತ್ಯ ಲೋಕದ 50 ಮಂದಿ ಅಗ್ರಮಾನ್ಯ ಲೇಖಕರ ಸುಂದರ ಭಾವಚಿತ್ರಗಳನ್ನು ದಾಖಲಿಸಿದ್ದಾರೆ. ಕಳೆದ ಸುಮಾರು ಎರಡೂವರೆ ದಶಕಗಳಲ್ಲಿ ಅವರು ತೆಗೆದ ಸಾಹಿತಿಗಳ, ಸಂಗೀತಗಾರರ, ರಾಜಕಾರಣಿಗಳ, ಮಕ್ಕಳ ಭಾವಚಿತ್ರಗಳು ರಾಜ್ಯದ ಪ್ರತಿಷ್ಠಿತ ಕನ್ನಡ ಮತ್ತು ಇಂಗ್ಲಿಷ್‌ ನಿಯತಕಾಲಿಕೆಗಳಲ್ಲಿ, ಪತ್ರಿಕೆಗಳಲ್ಲಿ ನಿರಂತರವಾಗಿ ಪ್ರಕಟವಾಗಿವೆ.

ಎ.ಎನ್. ಮುಕುಂದ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೈಸೂರಿನ ಮಹಾರಾಣಿ ಕಾಲೇಜಿನ ಸಹಾಯಕ ಪ್ರೊಫೆಸರ್‌ ಜಯಶಂಕರ್‌ ಹಲಗೂರು ಅವರು ಮುಕುಂದ ಅವರೊಂದಿಗೆ ಕಳೆದ ಕ್ಷಣಗಳನ್ನು ನೆನೆದುಕೊಂಡಿದ್ದು, ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಲೇಖಕರು ಮತ್ತು ಪ್ರಕಾಶಕರಾದ ಜಿ.ಎನ್. ಮೋಹನ್ ಅವರು, “ಅವರಿಗೆ ಖಂಡಿತಾ ಧಣಿವಾಗಿರಲಿಲ್ಲ. ಆದರೆ ಅವರು ಹೊರಟೇ ಹೋದರು. ದಣಿವು ಎನ್ನುವ ಶಬ್ದಕ್ಕೂ ಎಎನ್ ಮುಕುಂದರಿಗೂ ಆರ್ಥಾತ್ ಸಂಬಂಧ ಇರಲಿಲ್ಲ. ನಮ್ಮೊಳಗೇ ಒಂದು ಸುಸ್ತು ಆವರಿಸಿದರೂ ಅವರೊಳಗಿನ ಚೈತನ್ಯ, ಮುಖದ ತುಂಬಾ ಹರಡಿಕೊಳ್ಳುತ್ತಿದ್ದ ನಗು ಎರಡಕ್ಕೂ ಕೊನೆ ಇರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್

ಯುವ ಕವಿ ರಾಜೇಂದ್ರ ಪ್ರಸಾದ್ ಅವರು, “ಹುಷಾರಾಗಿ ಬಂದುಬಿಡ್ತಾರೆ ಅನ್ನುವ ನನ್ನ ನಂಬುಗೆ ಹುಸಿಯಾಗಿ ಬಿಡ್ತು. ನಾಕ್ಲೈದು ದಿನಗಳಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದರು.. ಮುಕುಂದ್ ಅಂಕಲ್ ತೋರುತ್ತಿದ್ದ ಪ್ರೀತಿ, ವಿಶ್ವಾಸ, ಕಾಳಜಿಗಳು ದೊಡ್ಡವು. ಮಾತು-ಮನಸುಗಳಿಗೆ ಏನೂ ತೋಚುತ್ತಿಲ್ಲ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...