Homeಕರ್ನಾಟಕಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ (67) ನಿಧನ

ಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ (67) ನಿಧನ

- Advertisement -
- Advertisement -

ನಾಡಿನ ಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ ಅವರು ಕೊರೊನಾ ಸೋಂಕಿನಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನ ಹೊಂದಿದ್ದಾರೆ. ಸೋಂಕಿನಿಂದಾಗಿ ಅವರು ಕಳೆದ ಐದು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.

1955ರ ಏಪ್ರಿಲ್ 22 ರಂದು ಜನಿಸಿದ ಎ.ಎನ್.ಮುಕುಂದ ಅವರು, ಕರ್ನಾಟಕದ ಉತ್ತಮ ಫೋಟೊಗ್ರಾಫರ್‌ಗಳಲ್ಲಿ ಒಬ್ಬರು. ದಾವಣಗೆರೆಯಲ್ಲಿ ಹೈಸ್ಕೂಲು ವಿದ್ಯಾಭ್ಯಾಸ ಮತ್ತು ಬೆಂಗಳೂರಿನ ಬಿ.ಎಮ್.ಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದರು. ವಿದ್ಯಾಭ್ಯಾಸದ ನಂತರ ಕೆ.ಪಿ.ಟಿ.ಸಿ.ಎಲ್.ನಲ್ಲಿ 30 ವರ್ಷದ ಸೇವೆ ಸಲ್ಲಿಸಿದ್ದ ಅವರು 2008ರಲ್ಲಿ ಸ್ವಯಂ ನಿವೃತ್ತಿ ಪಡೆದು ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೃತ್ತಿಯಲ್ಲಿ ಇಂಜಿನಿಯರ್ ಅಗಿದ್ದ ಅವರು, ಸಾಹಿತ್ಯ ಮತ್ತು ಸಾಸ್ಕೃತಿಕ ಚಟುವಟಿಕೆಗಳ ಜೊತೆಗೆ ಗುರುತಿಸಿಕೊಂಡಿದ್ದು, ಛಾಯಾಗ್ರಾಹಕರಾಗಿ ಸಾಹಿತ್ಯಕ್ಕೆ ಪೂರಕವಾದ ಸಾಹಿತಿಗಳ ಭಾವಚಿತ್ರ, ವಿಶೇಷ ಚಿತ್ರಗಳನ್ನು ಅವರು ಕ್ಲಿಕ್ಕಿಸಿದ್ದಾರೆ.

ಇದನ್ನೂ ಓದಿ: ‘ಕೊಲುವೆನೆಂಬ ಭಾಶೆ’ ಕೃತಿ ಪರಿಚಯ: ಉಳಿಸುವ ನುಡಿಯ ಹುಡುಕುತ್ತಾ…

‘ಮುಖಮುದ್ರೆ’ ಎಂಬುದು ಎ.ಎನ್. ಮುಕುಂದ ಅವರ ವಿಶಿಷ್ಟ ಕೃತಿಯಾಗಿದ್ದು, ಅದರಲ್ಲಿ ಅವರು ಕನ್ನಡ ಸಾಹಿತ್ಯ ಲೋಕದ 50 ಮಂದಿ ಅಗ್ರಮಾನ್ಯ ಲೇಖಕರ ಸುಂದರ ಭಾವಚಿತ್ರಗಳನ್ನು ದಾಖಲಿಸಿದ್ದಾರೆ. ಕಳೆದ ಸುಮಾರು ಎರಡೂವರೆ ದಶಕಗಳಲ್ಲಿ ಅವರು ತೆಗೆದ ಸಾಹಿತಿಗಳ, ಸಂಗೀತಗಾರರ, ರಾಜಕಾರಣಿಗಳ, ಮಕ್ಕಳ ಭಾವಚಿತ್ರಗಳು ರಾಜ್ಯದ ಪ್ರತಿಷ್ಠಿತ ಕನ್ನಡ ಮತ್ತು ಇಂಗ್ಲಿಷ್‌ ನಿಯತಕಾಲಿಕೆಗಳಲ್ಲಿ, ಪತ್ರಿಕೆಗಳಲ್ಲಿ ನಿರಂತರವಾಗಿ ಪ್ರಕಟವಾಗಿವೆ.

ಎ.ಎನ್. ಮುಕುಂದ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೈಸೂರಿನ ಮಹಾರಾಣಿ ಕಾಲೇಜಿನ ಸಹಾಯಕ ಪ್ರೊಫೆಸರ್‌ ಜಯಶಂಕರ್‌ ಹಲಗೂರು ಅವರು ಮುಕುಂದ ಅವರೊಂದಿಗೆ ಕಳೆದ ಕ್ಷಣಗಳನ್ನು ನೆನೆದುಕೊಂಡಿದ್ದು, ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಲೇಖಕರು ಮತ್ತು ಪ್ರಕಾಶಕರಾದ ಜಿ.ಎನ್. ಮೋಹನ್ ಅವರು, “ಅವರಿಗೆ ಖಂಡಿತಾ ಧಣಿವಾಗಿರಲಿಲ್ಲ. ಆದರೆ ಅವರು ಹೊರಟೇ ಹೋದರು. ದಣಿವು ಎನ್ನುವ ಶಬ್ದಕ್ಕೂ ಎಎನ್ ಮುಕುಂದರಿಗೂ ಆರ್ಥಾತ್ ಸಂಬಂಧ ಇರಲಿಲ್ಲ. ನಮ್ಮೊಳಗೇ ಒಂದು ಸುಸ್ತು ಆವರಿಸಿದರೂ ಅವರೊಳಗಿನ ಚೈತನ್ಯ, ಮುಖದ ತುಂಬಾ ಹರಡಿಕೊಳ್ಳುತ್ತಿದ್ದ ನಗು ಎರಡಕ್ಕೂ ಕೊನೆ ಇರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್

ಯುವ ಕವಿ ರಾಜೇಂದ್ರ ಪ್ರಸಾದ್ ಅವರು, “ಹುಷಾರಾಗಿ ಬಂದುಬಿಡ್ತಾರೆ ಅನ್ನುವ ನನ್ನ ನಂಬುಗೆ ಹುಸಿಯಾಗಿ ಬಿಡ್ತು. ನಾಕ್ಲೈದು ದಿನಗಳಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದರು.. ಮುಕುಂದ್ ಅಂಕಲ್ ತೋರುತ್ತಿದ್ದ ಪ್ರೀತಿ, ವಿಶ್ವಾಸ, ಕಾಳಜಿಗಳು ದೊಡ್ಡವು. ಮಾತು-ಮನಸುಗಳಿಗೆ ಏನೂ ತೋಚುತ್ತಿಲ್ಲ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...