Homeಮುಖಪುಟಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

ಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

‘ದಿ ಸಟಾನಿಕ್ ವರ್ಸಸ್’ ಕೃತಿ ಬರೆದ ಬಳಿಕ ಜೀವ ಬೆದರಿಕೆಯನ್ನು ಎದುರಿಸಿದ ಸಲ್ಮಾನ್ ಅವರು ದಶಕ ಕಾಲ ತಲೆಮರೆಸಿಕೊಂಡು ಬದುಕಿದ್ದರು.

- Advertisement -
- Advertisement -

ಕೊಲೆ ಭೀತಿಯ ಬಳಿಕ ದಶಕಗಳ ಕಾಲ ತಲೆ ಮರೆಸಿಕೊಂಡಿದ್ದು, ಬಳಿಕ ಸಾರ್ವಜನಿಕ ಜೀವನಕ್ಕೆ ಮರಳಿದ್ದ ಭಾರತೀಯ ಮೂಲದ ಕಾದಂಬರಿಕಾರ ಸಲ್ಮಾನ್ ರಶ್ದಿ ಅವರ ಮೇಲೆ ನ್ಯೂಯಾರ್ಕ್‌ನಲ್ಲಿ ಚಾಕುವಿನಿಂದ ಇರಿಯಲಾಗಿದೆ.

ಶುಕ್ರವಾರ ರಾತ್ರಿ ನ್ಯೂಯಾರ್ಕ್‌‌ನಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿ ಚಾಕುವಿನಿಂದ ಹತ್ತರಿಂದ ಹದಿನೈದು ಬಾರಿ ಇರಿದಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ದಿ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ಬರಹಗಾರರು ಮತ್ತು ರಾಜಕಾರಣಿಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಇದೆಂದು ಖಂಡನೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ನ್ಯೂಯಾರ್ಕ್‌ನ ಚೌಟಕ್ವಾ ಇನ್‌ಸ್ಟಿಟ್ಯೂಷನ್‌ನಲ್ಲಿ ಕಲಾತ್ಮಕ ಸ್ವಾತಂತ್ರ್ಯದ ಕುರಿತು ಭಾಷಣ ಮಾಡಲು 75 ವರ್ಷ ವಯಸ್ಸಿನ ರಶ್ದಿ ಅವರನ್ನು ಆಹ್ವಾನಿಸಲಾಗಿತ್ತು. ಆ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿದ್ದಾನೆ. ನ್ಯೂಯಾರ್ಕ್ ಸ್ಟೇಟ್ ಪೊಲೀಸ್ ಪಡೆ ದಾಳಿಕೋರನನ್ನು ಬಂಧಿಸಿದೆ.

“ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ; ಅವರ ತೋಳಿನ ನರಗಳು ಕತ್ತರಿಸಲ್ಪಟ್ಟಿವೆ. ಅವರ ಲಿವರ್‌ಗೆ ಹಾನಿಯಾಗಿದೆ” ಎಂದು ರಶ್ದಿಯವರ ಪುಸ್ತಕ ಏಜೆಂಟ್ ಆಂಡ್ರ್ಯೂ ವೈಲಿ ಹೇಳಿದ್ದಾರೆ.

ಬಾಂಬೆಯಲ್ಲಿ ಮುಸ್ಲಿಂ ಕಾಶ್ಮೀರಿ ಕುಟುಂಬದಲ್ಲಿ ಜನಿಸಿದ ರಶ್ದಿ, ತಮ್ಮ ನಾಲ್ಕನೇ ಕಾದಂಬರಿ “ದಿ ಸೈಟಾನಿಕ್ ವರ್ಸಸ್”ನಿಂದಾಗಿ ಜೀವ ಬೆದರಿಕೆಗಳನ್ನು ಎದುರಿಸಿದರು. ಕೆಲವು ಮುಸ್ಲಿಮರು ಪುಸ್ತಕದಲ್ಲಿ ಧರ್ಮನಿಂದೆಯ ಭಾಗಗಳಿವೆ ಎಂದು ದೂರಿದರು. ಮುಸ್ಲಿಂ ಹೆಚ್ಚಿರುವ ಅನೇಕ ದೇಶಗಳಲ್ಲಿ ಈ ಕೃತಿಯನ್ನು ನಿಷೇಧಿಸಲಾಯಿತು. ನಿಷೇಧಿಸಲಾಯಿತು.

1981ರಲ್ಲಿ ರಶ್ದಿ ಅವರು ಬರೆದ ‘ಮಿಡ್‌ನೈಟ್ಸ್ ಚಿಲ್ಡ್ರನ್’ ಜನಮನ್ನಣೆ ಪಡೆಯಿತು. ಸ್ವಾತಂತ್ರ್ಯಾ ನಂತರದ ಭಾರತದ ಚಿತ್ರಣವನ್ನು ಕಟ್ಟಿಕೊಟ್ಟಿದ್ದ ಕೃತಿಯು, ಬ್ರಿಟನ್‌ನ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೂ ಭಾಜನವಾಗಿತ್ತು. ಆದರೆ 1988ರಲ್ಲಿ ಬಿಡುಗಡೆಯಾದ ‘ದಿ ಸಟಾನಿಕ್ ವರ್ಸಸ್’ ವಿವಾದಕ್ಕೆ ಈಡಾಯಿತು.

ಇರಾನ್ ಕ್ರಾಂತಿಕಾರಿ ನಾಯಕ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರು ಸಲ್ಮಾನ್ ರಶ್ದಿ ಅವರ ಹತ್ಯೆಗೆ ಕರೆ ನೀಡಿದ್ದರು. ಈ ಕೃತಿಯಲ್ಲಿ ಪ್ರವಾದಿ ಮಹಮ್ಮದ್‌ಗೆ ಅಗೌರವ ತೋರಲಾಗಿದೆ ಎಂದು ಹಲವು ಮುಸ್ಲಿಂ ನಾಯಕರು ವಿರೋಧ ವ್ಯಕ್ತಪಡಿಸಿದರು.

ಧರ್ಮ ಆಚರಣೆ ಮಾಡದ ಭಾರತದ ಮುಸ್ಲಿಂ ದಂಪತಿಯ ಪುತ್ರನಾಗಿದ್ದ ರಶ್ದಿ, ನಾಸ್ತಿಕನಾಗಿದ್ದರು. ರಶ್ದಿಯವರನ್ನು ಕೊಂದವರಿಗೆ ಬಹುಮಾನ ನೀಡುವುದಾಗಿ ಫತ್ವಾ ಹೊರಡಿಸಿದ್ದರಿಂದ ಅವರು ತಲೆಮರೆಸಿಕೊಂಡು ಬದುಕಬೇಕಾಯಿತು.

ಇದನ್ನೂ ಓದಿರಿ: ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ರಶ್ದಿಯವರು ತಮ್ಮ ಕಾದಂಬರಿಯನ್ನು ‘ಸುಂದರ ಸೌಮ್ಯ’ ಎಂದು ಕರೆದಿದ್ದರು. ಕಾದಂಬರಿಯ ಜಪಾನೀ ಭಾಷಾಂತರಕಾರ ಹಿತೋಷಿ ಇಗರಾಶಿ 1991 ರಲ್ಲಿ ಕೊಲ್ಲಲ್ಪಟ್ಟಿದ್ದರು.

ಅವರ ಭಾಷಾಂತರಕಾರರು ಮತ್ತು ಪ್ರಕಾಶಕರ ಮೇಲೆ ಹತ್ಯೆಯ ಪ್ರಯತ್ನದ ನಂತರ ಅವರಿಗೆ ಬ್ರಿಟನ್‌ ಸರ್ಕಾರದಿಂದ ಪೊಲೀಸ್ ರಕ್ಷಣೆಯನ್ನು ನೀಡಲಾಗಿತ್ತು. ರಶ್ದಿ ಅವರು ಸುಮಾರು ಒಂದು ದಶಕ ಕಾಲ ತಲೆಮರೆಸಿಕೊಂಡೇ ಬದುಕಿದರು. ಪದೇ ಪದೇ ಮನೆಗಳನ್ನು ಬದಲಿಸುವುದು ಅನಿವಾರ್ಯವಾಗಿತ್ತು.

1998ರಲ್ಲಿ ಇರಾನ್ ಸರ್ಕಾರವು ರಶ್ದಿ ಹತ್ಯೆ ಆದೇಶವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ ನಂತರ ಸಾರ್ವಜನಿಕ ಜೀವನಕ್ಕೆ ಅವರು ಮರಳಿದ್ದರು. ‘ಬ್ರಿಡ್ಜೆಟ್ ಜೋನ್ಸ್ ಡೈರಿ’ಸಿನಿಮಾ ಮತ್ತು ಅಮೆರಿಕದ ದೂರದರ್ಶನ ಕಾರ್ಯಕ್ರಮ ‘ಸೈನ್ಫೆಲ್ಡ್’ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರರಾಷ್ಟ್ರೀಯ ವಲಯದಲ್ಲಿ ಅವರು ಗುರುತಿಸಿಕೊಂಡಿದ್ದರು. ನಾಲ್ಕು ಬಾರಿ ಮದುವೆಯಾಗಿರುವ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...