Homeಮುಖಪುಟಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

ಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

‘ದಿ ಸಟಾನಿಕ್ ವರ್ಸಸ್’ ಕೃತಿ ಬರೆದ ಬಳಿಕ ಜೀವ ಬೆದರಿಕೆಯನ್ನು ಎದುರಿಸಿದ ಸಲ್ಮಾನ್ ಅವರು ದಶಕ ಕಾಲ ತಲೆಮರೆಸಿಕೊಂಡು ಬದುಕಿದ್ದರು.

- Advertisement -
- Advertisement -

ಕೊಲೆ ಭೀತಿಯ ಬಳಿಕ ದಶಕಗಳ ಕಾಲ ತಲೆ ಮರೆಸಿಕೊಂಡಿದ್ದು, ಬಳಿಕ ಸಾರ್ವಜನಿಕ ಜೀವನಕ್ಕೆ ಮರಳಿದ್ದ ಭಾರತೀಯ ಮೂಲದ ಕಾದಂಬರಿಕಾರ ಸಲ್ಮಾನ್ ರಶ್ದಿ ಅವರ ಮೇಲೆ ನ್ಯೂಯಾರ್ಕ್‌ನಲ್ಲಿ ಚಾಕುವಿನಿಂದ ಇರಿಯಲಾಗಿದೆ.

ಶುಕ್ರವಾರ ರಾತ್ರಿ ನ್ಯೂಯಾರ್ಕ್‌‌ನಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿ ಚಾಕುವಿನಿಂದ ಹತ್ತರಿಂದ ಹದಿನೈದು ಬಾರಿ ಇರಿದಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ದಿ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ಬರಹಗಾರರು ಮತ್ತು ರಾಜಕಾರಣಿಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಇದೆಂದು ಖಂಡನೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ನ್ಯೂಯಾರ್ಕ್‌ನ ಚೌಟಕ್ವಾ ಇನ್‌ಸ್ಟಿಟ್ಯೂಷನ್‌ನಲ್ಲಿ ಕಲಾತ್ಮಕ ಸ್ವಾತಂತ್ರ್ಯದ ಕುರಿತು ಭಾಷಣ ಮಾಡಲು 75 ವರ್ಷ ವಯಸ್ಸಿನ ರಶ್ದಿ ಅವರನ್ನು ಆಹ್ವಾನಿಸಲಾಗಿತ್ತು. ಆ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿದ್ದಾನೆ. ನ್ಯೂಯಾರ್ಕ್ ಸ್ಟೇಟ್ ಪೊಲೀಸ್ ಪಡೆ ದಾಳಿಕೋರನನ್ನು ಬಂಧಿಸಿದೆ.

“ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ; ಅವರ ತೋಳಿನ ನರಗಳು ಕತ್ತರಿಸಲ್ಪಟ್ಟಿವೆ. ಅವರ ಲಿವರ್‌ಗೆ ಹಾನಿಯಾಗಿದೆ” ಎಂದು ರಶ್ದಿಯವರ ಪುಸ್ತಕ ಏಜೆಂಟ್ ಆಂಡ್ರ್ಯೂ ವೈಲಿ ಹೇಳಿದ್ದಾರೆ.

ಬಾಂಬೆಯಲ್ಲಿ ಮುಸ್ಲಿಂ ಕಾಶ್ಮೀರಿ ಕುಟುಂಬದಲ್ಲಿ ಜನಿಸಿದ ರಶ್ದಿ, ತಮ್ಮ ನಾಲ್ಕನೇ ಕಾದಂಬರಿ “ದಿ ಸೈಟಾನಿಕ್ ವರ್ಸಸ್”ನಿಂದಾಗಿ ಜೀವ ಬೆದರಿಕೆಗಳನ್ನು ಎದುರಿಸಿದರು. ಕೆಲವು ಮುಸ್ಲಿಮರು ಪುಸ್ತಕದಲ್ಲಿ ಧರ್ಮನಿಂದೆಯ ಭಾಗಗಳಿವೆ ಎಂದು ದೂರಿದರು. ಮುಸ್ಲಿಂ ಹೆಚ್ಚಿರುವ ಅನೇಕ ದೇಶಗಳಲ್ಲಿ ಈ ಕೃತಿಯನ್ನು ನಿಷೇಧಿಸಲಾಯಿತು. ನಿಷೇಧಿಸಲಾಯಿತು.

1981ರಲ್ಲಿ ರಶ್ದಿ ಅವರು ಬರೆದ ‘ಮಿಡ್‌ನೈಟ್ಸ್ ಚಿಲ್ಡ್ರನ್’ ಜನಮನ್ನಣೆ ಪಡೆಯಿತು. ಸ್ವಾತಂತ್ರ್ಯಾ ನಂತರದ ಭಾರತದ ಚಿತ್ರಣವನ್ನು ಕಟ್ಟಿಕೊಟ್ಟಿದ್ದ ಕೃತಿಯು, ಬ್ರಿಟನ್‌ನ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೂ ಭಾಜನವಾಗಿತ್ತು. ಆದರೆ 1988ರಲ್ಲಿ ಬಿಡುಗಡೆಯಾದ ‘ದಿ ಸಟಾನಿಕ್ ವರ್ಸಸ್’ ವಿವಾದಕ್ಕೆ ಈಡಾಯಿತು.

ಇರಾನ್ ಕ್ರಾಂತಿಕಾರಿ ನಾಯಕ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರು ಸಲ್ಮಾನ್ ರಶ್ದಿ ಅವರ ಹತ್ಯೆಗೆ ಕರೆ ನೀಡಿದ್ದರು. ಈ ಕೃತಿಯಲ್ಲಿ ಪ್ರವಾದಿ ಮಹಮ್ಮದ್‌ಗೆ ಅಗೌರವ ತೋರಲಾಗಿದೆ ಎಂದು ಹಲವು ಮುಸ್ಲಿಂ ನಾಯಕರು ವಿರೋಧ ವ್ಯಕ್ತಪಡಿಸಿದರು.

ಧರ್ಮ ಆಚರಣೆ ಮಾಡದ ಭಾರತದ ಮುಸ್ಲಿಂ ದಂಪತಿಯ ಪುತ್ರನಾಗಿದ್ದ ರಶ್ದಿ, ನಾಸ್ತಿಕನಾಗಿದ್ದರು. ರಶ್ದಿಯವರನ್ನು ಕೊಂದವರಿಗೆ ಬಹುಮಾನ ನೀಡುವುದಾಗಿ ಫತ್ವಾ ಹೊರಡಿಸಿದ್ದರಿಂದ ಅವರು ತಲೆಮರೆಸಿಕೊಂಡು ಬದುಕಬೇಕಾಯಿತು.

ಇದನ್ನೂ ಓದಿರಿ: ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ರಶ್ದಿಯವರು ತಮ್ಮ ಕಾದಂಬರಿಯನ್ನು ‘ಸುಂದರ ಸೌಮ್ಯ’ ಎಂದು ಕರೆದಿದ್ದರು. ಕಾದಂಬರಿಯ ಜಪಾನೀ ಭಾಷಾಂತರಕಾರ ಹಿತೋಷಿ ಇಗರಾಶಿ 1991 ರಲ್ಲಿ ಕೊಲ್ಲಲ್ಪಟ್ಟಿದ್ದರು.

ಅವರ ಭಾಷಾಂತರಕಾರರು ಮತ್ತು ಪ್ರಕಾಶಕರ ಮೇಲೆ ಹತ್ಯೆಯ ಪ್ರಯತ್ನದ ನಂತರ ಅವರಿಗೆ ಬ್ರಿಟನ್‌ ಸರ್ಕಾರದಿಂದ ಪೊಲೀಸ್ ರಕ್ಷಣೆಯನ್ನು ನೀಡಲಾಗಿತ್ತು. ರಶ್ದಿ ಅವರು ಸುಮಾರು ಒಂದು ದಶಕ ಕಾಲ ತಲೆಮರೆಸಿಕೊಂಡೇ ಬದುಕಿದರು. ಪದೇ ಪದೇ ಮನೆಗಳನ್ನು ಬದಲಿಸುವುದು ಅನಿವಾರ್ಯವಾಗಿತ್ತು.

1998ರಲ್ಲಿ ಇರಾನ್ ಸರ್ಕಾರವು ರಶ್ದಿ ಹತ್ಯೆ ಆದೇಶವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ ನಂತರ ಸಾರ್ವಜನಿಕ ಜೀವನಕ್ಕೆ ಅವರು ಮರಳಿದ್ದರು. ‘ಬ್ರಿಡ್ಜೆಟ್ ಜೋನ್ಸ್ ಡೈರಿ’ಸಿನಿಮಾ ಮತ್ತು ಅಮೆರಿಕದ ದೂರದರ್ಶನ ಕಾರ್ಯಕ್ರಮ ‘ಸೈನ್ಫೆಲ್ಡ್’ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರರಾಷ್ಟ್ರೀಯ ವಲಯದಲ್ಲಿ ಅವರು ಗುರುತಿಸಿಕೊಂಡಿದ್ದರು. ನಾಲ್ಕು ಬಾರಿ ಮದುವೆಯಾಗಿರುವ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...