Homeಮುಖಪುಟಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

ಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

‘ದಿ ಸಟಾನಿಕ್ ವರ್ಸಸ್’ ಕೃತಿ ಬರೆದ ಬಳಿಕ ಜೀವ ಬೆದರಿಕೆಯನ್ನು ಎದುರಿಸಿದ ಸಲ್ಮಾನ್ ಅವರು ದಶಕ ಕಾಲ ತಲೆಮರೆಸಿಕೊಂಡು ಬದುಕಿದ್ದರು.

- Advertisement -
- Advertisement -

ಕೊಲೆ ಭೀತಿಯ ಬಳಿಕ ದಶಕಗಳ ಕಾಲ ತಲೆ ಮರೆಸಿಕೊಂಡಿದ್ದು, ಬಳಿಕ ಸಾರ್ವಜನಿಕ ಜೀವನಕ್ಕೆ ಮರಳಿದ್ದ ಭಾರತೀಯ ಮೂಲದ ಕಾದಂಬರಿಕಾರ ಸಲ್ಮಾನ್ ರಶ್ದಿ ಅವರ ಮೇಲೆ ನ್ಯೂಯಾರ್ಕ್‌ನಲ್ಲಿ ಚಾಕುವಿನಿಂದ ಇರಿಯಲಾಗಿದೆ.

ಶುಕ್ರವಾರ ರಾತ್ರಿ ನ್ಯೂಯಾರ್ಕ್‌‌ನಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿ ಚಾಕುವಿನಿಂದ ಹತ್ತರಿಂದ ಹದಿನೈದು ಬಾರಿ ಇರಿದಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ದಿ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ಬರಹಗಾರರು ಮತ್ತು ರಾಜಕಾರಣಿಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಇದೆಂದು ಖಂಡನೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ನ್ಯೂಯಾರ್ಕ್‌ನ ಚೌಟಕ್ವಾ ಇನ್‌ಸ್ಟಿಟ್ಯೂಷನ್‌ನಲ್ಲಿ ಕಲಾತ್ಮಕ ಸ್ವಾತಂತ್ರ್ಯದ ಕುರಿತು ಭಾಷಣ ಮಾಡಲು 75 ವರ್ಷ ವಯಸ್ಸಿನ ರಶ್ದಿ ಅವರನ್ನು ಆಹ್ವಾನಿಸಲಾಗಿತ್ತು. ಆ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿದ್ದಾನೆ. ನ್ಯೂಯಾರ್ಕ್ ಸ್ಟೇಟ್ ಪೊಲೀಸ್ ಪಡೆ ದಾಳಿಕೋರನನ್ನು ಬಂಧಿಸಿದೆ.

“ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ; ಅವರ ತೋಳಿನ ನರಗಳು ಕತ್ತರಿಸಲ್ಪಟ್ಟಿವೆ. ಅವರ ಲಿವರ್‌ಗೆ ಹಾನಿಯಾಗಿದೆ” ಎಂದು ರಶ್ದಿಯವರ ಪುಸ್ತಕ ಏಜೆಂಟ್ ಆಂಡ್ರ್ಯೂ ವೈಲಿ ಹೇಳಿದ್ದಾರೆ.

ಬಾಂಬೆಯಲ್ಲಿ ಮುಸ್ಲಿಂ ಕಾಶ್ಮೀರಿ ಕುಟುಂಬದಲ್ಲಿ ಜನಿಸಿದ ರಶ್ದಿ, ತಮ್ಮ ನಾಲ್ಕನೇ ಕಾದಂಬರಿ “ದಿ ಸೈಟಾನಿಕ್ ವರ್ಸಸ್”ನಿಂದಾಗಿ ಜೀವ ಬೆದರಿಕೆಗಳನ್ನು ಎದುರಿಸಿದರು. ಕೆಲವು ಮುಸ್ಲಿಮರು ಪುಸ್ತಕದಲ್ಲಿ ಧರ್ಮನಿಂದೆಯ ಭಾಗಗಳಿವೆ ಎಂದು ದೂರಿದರು. ಮುಸ್ಲಿಂ ಹೆಚ್ಚಿರುವ ಅನೇಕ ದೇಶಗಳಲ್ಲಿ ಈ ಕೃತಿಯನ್ನು ನಿಷೇಧಿಸಲಾಯಿತು. ನಿಷೇಧಿಸಲಾಯಿತು.

1981ರಲ್ಲಿ ರಶ್ದಿ ಅವರು ಬರೆದ ‘ಮಿಡ್‌ನೈಟ್ಸ್ ಚಿಲ್ಡ್ರನ್’ ಜನಮನ್ನಣೆ ಪಡೆಯಿತು. ಸ್ವಾತಂತ್ರ್ಯಾ ನಂತರದ ಭಾರತದ ಚಿತ್ರಣವನ್ನು ಕಟ್ಟಿಕೊಟ್ಟಿದ್ದ ಕೃತಿಯು, ಬ್ರಿಟನ್‌ನ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೂ ಭಾಜನವಾಗಿತ್ತು. ಆದರೆ 1988ರಲ್ಲಿ ಬಿಡುಗಡೆಯಾದ ‘ದಿ ಸಟಾನಿಕ್ ವರ್ಸಸ್’ ವಿವಾದಕ್ಕೆ ಈಡಾಯಿತು.

ಇರಾನ್ ಕ್ರಾಂತಿಕಾರಿ ನಾಯಕ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರು ಸಲ್ಮಾನ್ ರಶ್ದಿ ಅವರ ಹತ್ಯೆಗೆ ಕರೆ ನೀಡಿದ್ದರು. ಈ ಕೃತಿಯಲ್ಲಿ ಪ್ರವಾದಿ ಮಹಮ್ಮದ್‌ಗೆ ಅಗೌರವ ತೋರಲಾಗಿದೆ ಎಂದು ಹಲವು ಮುಸ್ಲಿಂ ನಾಯಕರು ವಿರೋಧ ವ್ಯಕ್ತಪಡಿಸಿದರು.

ಧರ್ಮ ಆಚರಣೆ ಮಾಡದ ಭಾರತದ ಮುಸ್ಲಿಂ ದಂಪತಿಯ ಪುತ್ರನಾಗಿದ್ದ ರಶ್ದಿ, ನಾಸ್ತಿಕನಾಗಿದ್ದರು. ರಶ್ದಿಯವರನ್ನು ಕೊಂದವರಿಗೆ ಬಹುಮಾನ ನೀಡುವುದಾಗಿ ಫತ್ವಾ ಹೊರಡಿಸಿದ್ದರಿಂದ ಅವರು ತಲೆಮರೆಸಿಕೊಂಡು ಬದುಕಬೇಕಾಯಿತು.

ಇದನ್ನೂ ಓದಿರಿ: ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ರಶ್ದಿಯವರು ತಮ್ಮ ಕಾದಂಬರಿಯನ್ನು ‘ಸುಂದರ ಸೌಮ್ಯ’ ಎಂದು ಕರೆದಿದ್ದರು. ಕಾದಂಬರಿಯ ಜಪಾನೀ ಭಾಷಾಂತರಕಾರ ಹಿತೋಷಿ ಇಗರಾಶಿ 1991 ರಲ್ಲಿ ಕೊಲ್ಲಲ್ಪಟ್ಟಿದ್ದರು.

ಅವರ ಭಾಷಾಂತರಕಾರರು ಮತ್ತು ಪ್ರಕಾಶಕರ ಮೇಲೆ ಹತ್ಯೆಯ ಪ್ರಯತ್ನದ ನಂತರ ಅವರಿಗೆ ಬ್ರಿಟನ್‌ ಸರ್ಕಾರದಿಂದ ಪೊಲೀಸ್ ರಕ್ಷಣೆಯನ್ನು ನೀಡಲಾಗಿತ್ತು. ರಶ್ದಿ ಅವರು ಸುಮಾರು ಒಂದು ದಶಕ ಕಾಲ ತಲೆಮರೆಸಿಕೊಂಡೇ ಬದುಕಿದರು. ಪದೇ ಪದೇ ಮನೆಗಳನ್ನು ಬದಲಿಸುವುದು ಅನಿವಾರ್ಯವಾಗಿತ್ತು.

1998ರಲ್ಲಿ ಇರಾನ್ ಸರ್ಕಾರವು ರಶ್ದಿ ಹತ್ಯೆ ಆದೇಶವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ ನಂತರ ಸಾರ್ವಜನಿಕ ಜೀವನಕ್ಕೆ ಅವರು ಮರಳಿದ್ದರು. ‘ಬ್ರಿಡ್ಜೆಟ್ ಜೋನ್ಸ್ ಡೈರಿ’ಸಿನಿಮಾ ಮತ್ತು ಅಮೆರಿಕದ ದೂರದರ್ಶನ ಕಾರ್ಯಕ್ರಮ ‘ಸೈನ್ಫೆಲ್ಡ್’ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರರಾಷ್ಟ್ರೀಯ ವಲಯದಲ್ಲಿ ಅವರು ಗುರುತಿಸಿಕೊಂಡಿದ್ದರು. ನಾಲ್ಕು ಬಾರಿ ಮದುವೆಯಾಗಿರುವ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....