Homeಮುಖಪುಟಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

ಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

‘ದಿ ಸಟಾನಿಕ್ ವರ್ಸಸ್’ ಕೃತಿ ಬರೆದ ಬಳಿಕ ಜೀವ ಬೆದರಿಕೆಯನ್ನು ಎದುರಿಸಿದ ಸಲ್ಮಾನ್ ಅವರು ದಶಕ ಕಾಲ ತಲೆಮರೆಸಿಕೊಂಡು ಬದುಕಿದ್ದರು.

- Advertisement -
- Advertisement -

ಕೊಲೆ ಭೀತಿಯ ಬಳಿಕ ದಶಕಗಳ ಕಾಲ ತಲೆ ಮರೆಸಿಕೊಂಡಿದ್ದು, ಬಳಿಕ ಸಾರ್ವಜನಿಕ ಜೀವನಕ್ಕೆ ಮರಳಿದ್ದ ಭಾರತೀಯ ಮೂಲದ ಕಾದಂಬರಿಕಾರ ಸಲ್ಮಾನ್ ರಶ್ದಿ ಅವರ ಮೇಲೆ ನ್ಯೂಯಾರ್ಕ್‌ನಲ್ಲಿ ಚಾಕುವಿನಿಂದ ಇರಿಯಲಾಗಿದೆ.

ಶುಕ್ರವಾರ ರಾತ್ರಿ ನ್ಯೂಯಾರ್ಕ್‌‌ನಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿ ಚಾಕುವಿನಿಂದ ಹತ್ತರಿಂದ ಹದಿನೈದು ಬಾರಿ ಇರಿದಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ದಿ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ಬರಹಗಾರರು ಮತ್ತು ರಾಜಕಾರಣಿಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಇದೆಂದು ಖಂಡನೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ನ್ಯೂಯಾರ್ಕ್‌ನ ಚೌಟಕ್ವಾ ಇನ್‌ಸ್ಟಿಟ್ಯೂಷನ್‌ನಲ್ಲಿ ಕಲಾತ್ಮಕ ಸ್ವಾತಂತ್ರ್ಯದ ಕುರಿತು ಭಾಷಣ ಮಾಡಲು 75 ವರ್ಷ ವಯಸ್ಸಿನ ರಶ್ದಿ ಅವರನ್ನು ಆಹ್ವಾನಿಸಲಾಗಿತ್ತು. ಆ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿದ್ದಾನೆ. ನ್ಯೂಯಾರ್ಕ್ ಸ್ಟೇಟ್ ಪೊಲೀಸ್ ಪಡೆ ದಾಳಿಕೋರನನ್ನು ಬಂಧಿಸಿದೆ.

“ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ; ಅವರ ತೋಳಿನ ನರಗಳು ಕತ್ತರಿಸಲ್ಪಟ್ಟಿವೆ. ಅವರ ಲಿವರ್‌ಗೆ ಹಾನಿಯಾಗಿದೆ” ಎಂದು ರಶ್ದಿಯವರ ಪುಸ್ತಕ ಏಜೆಂಟ್ ಆಂಡ್ರ್ಯೂ ವೈಲಿ ಹೇಳಿದ್ದಾರೆ.

ಬಾಂಬೆಯಲ್ಲಿ ಮುಸ್ಲಿಂ ಕಾಶ್ಮೀರಿ ಕುಟುಂಬದಲ್ಲಿ ಜನಿಸಿದ ರಶ್ದಿ, ತಮ್ಮ ನಾಲ್ಕನೇ ಕಾದಂಬರಿ “ದಿ ಸೈಟಾನಿಕ್ ವರ್ಸಸ್”ನಿಂದಾಗಿ ಜೀವ ಬೆದರಿಕೆಗಳನ್ನು ಎದುರಿಸಿದರು. ಕೆಲವು ಮುಸ್ಲಿಮರು ಪುಸ್ತಕದಲ್ಲಿ ಧರ್ಮನಿಂದೆಯ ಭಾಗಗಳಿವೆ ಎಂದು ದೂರಿದರು. ಮುಸ್ಲಿಂ ಹೆಚ್ಚಿರುವ ಅನೇಕ ದೇಶಗಳಲ್ಲಿ ಈ ಕೃತಿಯನ್ನು ನಿಷೇಧಿಸಲಾಯಿತು. ನಿಷೇಧಿಸಲಾಯಿತು.

1981ರಲ್ಲಿ ರಶ್ದಿ ಅವರು ಬರೆದ ‘ಮಿಡ್‌ನೈಟ್ಸ್ ಚಿಲ್ಡ್ರನ್’ ಜನಮನ್ನಣೆ ಪಡೆಯಿತು. ಸ್ವಾತಂತ್ರ್ಯಾ ನಂತರದ ಭಾರತದ ಚಿತ್ರಣವನ್ನು ಕಟ್ಟಿಕೊಟ್ಟಿದ್ದ ಕೃತಿಯು, ಬ್ರಿಟನ್‌ನ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೂ ಭಾಜನವಾಗಿತ್ತು. ಆದರೆ 1988ರಲ್ಲಿ ಬಿಡುಗಡೆಯಾದ ‘ದಿ ಸಟಾನಿಕ್ ವರ್ಸಸ್’ ವಿವಾದಕ್ಕೆ ಈಡಾಯಿತು.

ಇರಾನ್ ಕ್ರಾಂತಿಕಾರಿ ನಾಯಕ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರು ಸಲ್ಮಾನ್ ರಶ್ದಿ ಅವರ ಹತ್ಯೆಗೆ ಕರೆ ನೀಡಿದ್ದರು. ಈ ಕೃತಿಯಲ್ಲಿ ಪ್ರವಾದಿ ಮಹಮ್ಮದ್‌ಗೆ ಅಗೌರವ ತೋರಲಾಗಿದೆ ಎಂದು ಹಲವು ಮುಸ್ಲಿಂ ನಾಯಕರು ವಿರೋಧ ವ್ಯಕ್ತಪಡಿಸಿದರು.

ಧರ್ಮ ಆಚರಣೆ ಮಾಡದ ಭಾರತದ ಮುಸ್ಲಿಂ ದಂಪತಿಯ ಪುತ್ರನಾಗಿದ್ದ ರಶ್ದಿ, ನಾಸ್ತಿಕನಾಗಿದ್ದರು. ರಶ್ದಿಯವರನ್ನು ಕೊಂದವರಿಗೆ ಬಹುಮಾನ ನೀಡುವುದಾಗಿ ಫತ್ವಾ ಹೊರಡಿಸಿದ್ದರಿಂದ ಅವರು ತಲೆಮರೆಸಿಕೊಂಡು ಬದುಕಬೇಕಾಯಿತು.

ಇದನ್ನೂ ಓದಿರಿ: ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ರಶ್ದಿಯವರು ತಮ್ಮ ಕಾದಂಬರಿಯನ್ನು ‘ಸುಂದರ ಸೌಮ್ಯ’ ಎಂದು ಕರೆದಿದ್ದರು. ಕಾದಂಬರಿಯ ಜಪಾನೀ ಭಾಷಾಂತರಕಾರ ಹಿತೋಷಿ ಇಗರಾಶಿ 1991 ರಲ್ಲಿ ಕೊಲ್ಲಲ್ಪಟ್ಟಿದ್ದರು.

ಅವರ ಭಾಷಾಂತರಕಾರರು ಮತ್ತು ಪ್ರಕಾಶಕರ ಮೇಲೆ ಹತ್ಯೆಯ ಪ್ರಯತ್ನದ ನಂತರ ಅವರಿಗೆ ಬ್ರಿಟನ್‌ ಸರ್ಕಾರದಿಂದ ಪೊಲೀಸ್ ರಕ್ಷಣೆಯನ್ನು ನೀಡಲಾಗಿತ್ತು. ರಶ್ದಿ ಅವರು ಸುಮಾರು ಒಂದು ದಶಕ ಕಾಲ ತಲೆಮರೆಸಿಕೊಂಡೇ ಬದುಕಿದರು. ಪದೇ ಪದೇ ಮನೆಗಳನ್ನು ಬದಲಿಸುವುದು ಅನಿವಾರ್ಯವಾಗಿತ್ತು.

1998ರಲ್ಲಿ ಇರಾನ್ ಸರ್ಕಾರವು ರಶ್ದಿ ಹತ್ಯೆ ಆದೇಶವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ ನಂತರ ಸಾರ್ವಜನಿಕ ಜೀವನಕ್ಕೆ ಅವರು ಮರಳಿದ್ದರು. ‘ಬ್ರಿಡ್ಜೆಟ್ ಜೋನ್ಸ್ ಡೈರಿ’ಸಿನಿಮಾ ಮತ್ತು ಅಮೆರಿಕದ ದೂರದರ್ಶನ ಕಾರ್ಯಕ್ರಮ ‘ಸೈನ್ಫೆಲ್ಡ್’ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರರಾಷ್ಟ್ರೀಯ ವಲಯದಲ್ಲಿ ಅವರು ಗುರುತಿಸಿಕೊಂಡಿದ್ದರು. ನಾಲ್ಕು ಬಾರಿ ಮದುವೆಯಾಗಿರುವ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...