Homeಮುಖಪುಟ'ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ: ಉಪ ರಾಷ್ಟ್ರಪತಿ ರಾಜೀನಾಮೆ ಬಗ್ಗೆ ಪ್ರಶ್ನೆ ಎತ್ತಿದ...

‘ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ: ಉಪ ರಾಷ್ಟ್ರಪತಿ ರಾಜೀನಾಮೆ ಬಗ್ಗೆ ಪ್ರಶ್ನೆ ಎತ್ತಿದ ಜೈರಾಮ್ ರಮೇಶ್

- Advertisement -
- Advertisement -

ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಸೋಮವಾರ (ಜು.21) ಮಧ್ಯಾಹ್ನದವರೆಗೂ ರಾಜ್ಯಸಭೆಯ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡಿದ್ದ ಅವರು ಸಂಜೆಯ ವೇಳೆ ರಾಜೀನಾಮೆ ನೀಡಿದ್ದು ಏಕೆ ಎಂಬ ಪ್ರಶ್ನೆ ಮೂಡಿದೆ.

ಧನಕರ್ ಅವರ ಹಠಾತ್ ರಾಜೀನಾಮೆ ಅಚ್ಚರಿ ತಂದಿದೆ ಎಂದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಉಪ ರಾಷ್ಟ್ರಪತಿ ತನ್ನ ರಾಜೀನಾಮೆಗೆ ಆರೋಗ್ಯದ ಕಾರಣ ನೀಡಿದ್ದರೂ, ‘ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ’ ಎಂದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ಜೈರಾಮ್ ರಮೇಶ್ “ಇದು ಅಚ್ಚರಿದಾಯಕ ಮತ್ತು ವಿವರಿಸಲಾಗದ್ದು” ಎಂದಿದ್ದು, ಈ ಬೆಳವಣಿಗೆಯ ಹಠಾತ್ ಸ್ವರೂಪದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

“ನಾನು ಇಂದು ಸಂಜೆ 5 ಗಂಟೆಯ ಸುಮಾರಿಗೆ ಇತರ ಹಲವು ಸಂಸದರೊಂದಿಗೆ ಜಗದೀಪ್ ಧನಕರ್ ಅವರ ಜೊತೆಗಿದ್ದೆ. ಸಂಜೆ 7:30ಕ್ಕೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೆ. ಆಗ ಅವರು ರಾಜೀನಾಮೆ ನೀಡುವ ಬಗ್ಗೆ ಯಾವುದೇ ಸೂಚನೆ ಇರಲಿಲ್ಲ” ಎಂದಿದ್ದಾರೆ.

“ಖಂಡಿತವಾಗಿಯೂ ಧನಕರ್ ಅವರು ತಮ್ಮ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಆದರೆ, ಸ್ಪಷ್ಟವಾಗಿ, ಅವರ ಅನಿರೀಕ್ಷಿತ ರಾಜೀನಾಮೆಯಲ್ಲಿ ಕಣ್ಣಿಗೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ. ಆದಾಗ್ಯೂ ಇದು ಊಹಾಪೋಹಗಳಿಗೆ ಸಮಯವಲ್ಲ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಉಪರಾಷ್ಟ್ರಪತಿ ಧನಕರ್ ಅವರು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ರಾಜ್ಯಸಭೆಯ ವ್ಯವಹಾರ ಸಲಹಾ ಸಮಿತಿಯ ನಿರ್ಣಾಯಕ ಸಭೆಯನ್ನು ನಿಗದಿಪಡಿಸಿದ್ದರು ಮತ್ತು ನ್ಯಾಯಾಂಗಕ್ಕೆ ಸಂಬಂಧಿಸಿದ ಮಹತ್ವದ ಕ್ರಮಗಳನ್ನು ಘೋಷಿಸುವ ನಿರೀಕ್ಷೆಯಿತ್ತು. ಈ ನಡುವೆ ಅವರು ರಾಜೀನಾಮೆ ನೀಡಿರುವುದು ಗೊಂದಲಕ್ಕೆ ಕಾರಣವಾಗಿದೆ.

ಇಂದು ಮುಂಜಾನೆ, 63 ಸಂಸದರು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಪದಚ್ಯುತಿಗೆ ನೋಟಿಸ್ ಸಲ್ಲಿಸಿದ್ದರು.

“ಧನಕರ್ ಅವರು ಸರ್ಕಾರ ಮತ್ತು ವಿರೋಧ ಪಕ್ಷಗಳೆರಡನ್ನೂ ಸಮಾನವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದರು” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ನಾವು ಅವರಿಗೆ ಉತ್ತಮ ಆರೋಗ್ಯವನ್ನು ಬಯಸುತ್ತೇವೆ. ಆದರೆ, ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆಯೂ ವಿನಂತಿಸುತ್ತೇವೆ. ಪ್ರಧಾನ ಮಂತ್ರಿಗಳು ಧನಕರ್ ಅವರು ಮನಸ್ಸು ಬದಲಾಯಿಸುವಂತೆ ಮನವೊಲಿಸುತ್ತಾರೆಂದು ನಾವು ನಿರೀಕ್ಷಿಸುತ್ತೇವೆ. ಇದು ರಾಷ್ಟ್ರದ ಹಿತಾಸಕ್ತಿಗೆ, ವಿಶೇಷವಾಗಿ ರೈತ ಸಮುದಾಯಕ್ಕೆ ಇದರಿಂದ ಹೆಚ್ಚಿನ ಸಮಾಧಾನವಾಗುತ್ತದೆ” ಎಂದಿದ್ದಾರೆ.

74 ವರ್ಷದ ಧನಕರ್ ಅವರು ಆಗಸ್ಟ್ 2022ರಲ್ಲಿ ಉಪ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡವರು. ಅವರು 2027ರವರೆಗೆ ಈ ಹುದ್ದೆಯಲ್ಲಿ ಇರಬೇಕಿತ್ತು.

ಧನಕರ್ ಅವರು ಅಧಿಕಾರವಧಿ ಪೂರ್ಣಗೊಳಿಸುವ ಮುನ್ನ ಹುದ್ದೆಯಿಂದ ಕೆಳಗಿಳಿದ ಭಾರತದ ಆರನೇ ಉಪರಾಷ್ಟ್ರಪತಿಯಾಗಿದ್ದಾರೆ.

ವಿ.ವಿ. ಗಿರಿ, ಆರ್. ವೆಂಕಟರಾಮನ್, ಶಂಕರ್ ದಯಾಳ್ ಶರ್ಮಾ, ಕೆ.ಆರ್. ನಾರಾಯಣನ್ ಮತ್ತು ಭೈರೋನ್ ಸಿಂಗ್ ಶೇಖಾವತ್ ಅವರ ಹೆಜ್ಜೆಗಳನ್ನು ಧನಕರ್ ಅನುಸರಿಸಿದ್ದಾರೆ. ಮೊದಲ ನಾಲ್ವರು ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ನಂತರ ರಾಷ್ಟ್ರಪತಿ ಹುದ್ದೆಯನ್ನು ವಹಿಸಿಕೊಳ್ಳಲು ರಾಜೀನಾಮೆ ನೀಡಿದರೆ, 2007ರ ರಾಷ್ಟ್ರಪತಿ ಚುನಾವಣೆಯಲ್ಲಿ ಸೋತ ನಂತರ ಶೇಖಾವತ್ ರಾಜೀನಾಮೆ ನೀಡಿದ್ದರು.

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಮಧ್ಯಂತರ ರಾಜೀನಾಮೆ: ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...