Homeಮುಖಪುಟಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ 'ಫರೀಷಾ ಆಬಿದ್': ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

- Advertisement -
- Advertisement -

‘ಮಾದಕ ವಸ್ತು’ ಯಾವುದೋ ವಿದೇಶಿ ವಿಷಯ ಎನ್ನುವ ಕಾಲವೊಂದಿತ್ತು. ಆದರೆ, ಈಗ ಭಾರತದ ಮಟ್ಟಿಗೆ ಮಾದಕ ವಸ್ತು ದೊಡ್ಡ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದೆ. ನಮ್ಮ ಊರುಗಳ ಗಲ್ಲಿ ಗಲ್ಲಿಗೂ ಮಾದಕ ವಸ್ತುಗಳು ಕಾಲಿಟ್ಟಿದೆ. ಯುವಜನರು ಅವುಗಳಿಗೆ ದಾಸರಾಗಿ ಜೀವನ, ಜೀವ ಕಳೆದುಕೊಳ್ಳುತ್ತಿದ್ದಾರೆ.

ಕೇರಳದಲ್ಲಿ ಮಾದಕ ವಸ್ತುಗಳು ಮಕ್ಕಳ ಪೋಷಕರಿಂದ ಹಿಡಿದು ಸರ್ಕಾರದವರೆಗೆ ಎಲ್ಲರಿಗೂ ದೊಡ್ಡ ತಲೆನೋವಾಗಿ ಮಾರ್ಪಟ್ಟಿದೆ. ಯುವಜನರು ಮಾದಕ ವಸ್ತುಗಳಿಗೆ ದಾಸರಾಗಿ ಹೆತ್ತ ತಂದೆ-ತಾಯಿಯನ್ನು ಕೊಲೆ ಮಾಡುವಂತಹ ಪ್ರಕರಣಗಳು ವರದಿಯಾಗುತ್ತಿವೆ.

ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕಣ್ಣೂರು ಜಿಲ್ಲೆಯ ಮಾಟೂಲ್ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಫರೀಷಾ ಆಬಿದ್ ಅವರು ಪ್ರಾರಂಭಿಸಿದ ಕಾರ್ಯಕ್ರಮವೊಂದು ದೊಡ್ಡ ಅಭಿಯಾನವಾಗಿ ಮಾರ್ಪಟ್ಟಿದೆ. ಎಲ್ಲಾ ವರ್ಗದ ಜನ ಸಮೂಹ ಫರೀಷಾ ಅವರ ಬೆನ್ನಿಗೆ ನಿಂತಿದ್ದಾರೆ.

ಈ ಹಿಂದೆ ಶಿಕ್ಷಕಿಯಾಗಿದ್ದ ಈಗ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿರುವ ಫರೀಷಾ ಆಬಿದ್ ಅವರು, ಕಳೆದ ಎರಡು ತಿಂಗಳ ಹಿಂದೆ ಮಾದಕ ವಸ್ತುಗಳ ವಿರುದ್ದ ‘ಧೀರ’ ಎಂಬ ಹೆಸರಿನ ಕಾರ್ಯಕ್ರಮ ಆರಂಭಿಸಿದ್ದಾರೆ. ಆರಂಭದಲ್ಲಿ ಕೆಲ ಯುವಕರನ್ನು ಸೇರಿಸಿ ವಾಟ್ಸಾಪ್‌ ಗ್ರೂಪ್‌ ಮೂಲಕ ಆರಂಭವಾದ ಈ ಕಾರ್ಯಕ್ರಮ ಈಗ ದೊಡ್ಡ ಅಭಿಯಾನವಾಗಿ ಮಾರ್ಪಟ್ಟಿದೆ. ಜನ ಸಮುದಾಯ ಈ ಅಭಿಯಾನಕ್ಕೆ ಅಪೂರ್ವ ಬೆಂಬಲ ವ್ಯಕ್ತಪಡಿಸಿದ್ದು, ಮಾಟೂಲ್‌ನ ಪಕ್ಕದ ಮಾಡಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯವರೂ ಸೇರಿದಂತೆ 800 ಸ್ವಯಂ ಸೇವಕರ ಪಡೆ ರಚನೆಯಾಗಿದೆ.

ಈ ಸ್ವಯಂ ಸೇವಕರು ಮಾದಕ ವಸ್ತುಗಳ ಸಾಗಣೆ ಮತ್ತು ಸೇವನೆಯ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಫರೀಷಾ ಅವರ ತಂಡ ಮುಂದಿನ ದಿನಗಳಲ್ಲಿ ಗುಪ್ತ ಮಾದಕವಸ್ತು ಚಟುವಟಿಕೆಗಳನ್ನು ಪತ್ತೆಹಚ್ಚಲು ಥರ್ಮಲ್ ಸ್ಕ್ಯಾನಿಂಗ್‌ನೊಂದಿಗೆ ಡ್ರೋನ್ ಕಣ್ಗಾವಲು ಪರಿಚಯಿಸುವ ಯೋಚನೆಯಲ್ಲಿದೆ.

ಶಿಕ್ಷಕರು, ವಿದ್ಯಾರ್ಥಿಗಳು, ಉದ್ಯಮಿಗಳು, ವ್ಯಾಪಾರಸ್ಥರು, ವಕೀಲರು, ಪೊಲೀಸ್ ಅಧಿಕಾರಿಗಳು ಮತ್ತು ಇತರ ನಾಗರಿಕರು ಫರೀಷಾ ಅವರ ‘ಧೀರ’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಪರಿಣಾಮ ಮಾದಕವಸ್ತು ಪ್ರಕರಣಗಳಲ್ಲಿ ಭಾಗಿಯಾಗಿರುವ ಕನಿಷ್ಠ 13 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಮತ್ತು ವ್ಯಸನದಿಂದ ಬಳಲುತ್ತಿರುವ ಹಲವಾರು ಜನರನ್ನು ಗುರುತಿಸಿ ಅವರನ್ನು ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ.

ಯಾವುದೇ ಗಂಡು-ಹೆಣ್ಣಿನ ಮದುವೆಗೂ ಮುನ್ನ ಅವರನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಬೇಕು ಎಂದು ಧಾರ್ಮಿಕ ಸಂಸ್ಥೆಗಳು, ನಾಯಕರ ಮೂಲಕ ಸಾರ್ವಜನಿಕರಿಗೆ ಧೀರ ಅಭಿಯಾನ ಸಲಹೆ ನೀಡಿದೆ. ಈ ಮೂಲಕ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಕೌಟುಂಬಿಕ ಕಲಹಗಳನ್ನು ತಪ್ಪಿಸುವ ಪ್ರಯತ್ನದಲ್ಲಿದೆ.

ಆರಂಭದಲ್ಲಿ ಮಾಟೂಲ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡ ಧೀರ ಅಭಿಯಾನದೊಂದಿಗೆ ಈಗ ಪಕ್ಕದ ಮಾಡಾಯಿ ಗ್ರಾಮಸ್ಥರು ಕೈ ಜೋಡಿಸಿದ್ದಾರೆ. ಹಾಗಾಗಿ, ಧೀರ ತಂಡದ ಹೆಸರನ್ನು ಈಗ “ಧೀರ : ಮಾಟ್ಟೂಲ್-ಮಾಡಾಯಿ ಕೂಟಾಯಿಮ” (Dheera: Mattool-Madayi Collective) ಎಂದು ಬದಲಾಯಿಸಲಾಗಿದೆ.

“ಮಾದಕ ವಸ್ತುಗಳ ಸಾಗಣೆ ಮತ್ತು ಸೇವನೆ ಬಗ್ಗೆ ಮಾಹಿತಿಯಿದ್ದರೂ ಅದರ ಬಗ್ಗೆ ಮಾತನಾಡಲು ಜನರು ಹೆದರುತ್ತಿದ್ದರು. ನಮ್ಮ ಅಭಿಯಾನ, ಜನರು ಮುಂದೆ ಬಂದು ಮಾತನಾಡಲು ಪ್ರೋತ್ಸಾಹಿಸಿದೆ. ಮಾದಕವಸ್ತು ವಲಯಗಳು, ಮಾರಾಟಗಾರರು ಮತ್ತು ಬಳಕೆದಾರರ ಬಗ್ಗೆ ಪ್ರಮುಖ ಮಾಹಿತಿಯನ್ನು ಒದಗಿಸುತ್ತಿದ್ದಾರೆ” ಫರೀಷಾ ಹೇಳುತ್ತಾರೆ.

ಧೀರ ಅಭಿಯಾನ ಕೇವಲ ಮಾದಕ ವಸ್ತು ಪೂರೈಕೆ ಮಾಡುವವರನ್ನು ಹಿಡಿದು ಕೊಡುವ ಕೆಲಸ ಮಾತ್ರ ಮಾಡುತ್ತಿಲ್ಲ. ಅಭಿಯಾನದ ಭಾಗವಾಗಿ ಶಾಲೆ, ಪಂಚಾಯತ್ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕರಪತ್ರಗಳನ್ನು ವಿತರಿಸಿ ಜನರಿಗೆ ವಿಷಯದ ಗಂಭೀರತೆ ಅರ್ಥ ಮಾಡಿಸಲಾಗುತ್ತಿದೆ. ಇತ್ತೀಚೆಗೆ ವಲಸೆ ಕಾರ್ಮಿಕರು ಮಾದಕ ವಸ್ತು ಪೂರೈಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದ ಕಾರಣ, ಹಿಂದಿಯಲ್ಲಿ ಕರಪತ್ರ ಮುದ್ರಿಸಿ ವಲಸೆ ಕಾರ್ಮಿಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ.

ಮಾದಕವಸ್ತು ಸೇವನೆ ಮಾಡುವವರಿಗೆ ಜಾಗದ ವ್ಯವಸ್ಥೆ ಮಾಡಿಕೊಡುವ ಕೆಲ ಆಸ್ತಿ ಮಾಲೀಕರಿಗೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಧೀರ ತಂಡ ಎಚ್ಚರಿಕೆ ನೀಡಿದೆ. ಮಾದಕವಸ್ತು ವ್ಯಾಪಾರದ ಮೇಲೆ ಸಂಘಟಿತ ಕ್ರಮ ಕೈಗೊಳ್ಳಲು ಧೀರ ತಂಡ ಪಳಯಂಗಡಿ ಪೊಲೀಸರು ಮತ್ತು ಜಿಲ್ಲಾ ಅಬಕಾರಿ ತಂಡದೊಂದಿಗೆ ನಿಕಟವಾಗಿ ಸಹಕರಿಸುತ್ತಿದೆ.

ಮಾದಕವಸ್ತು ವಿರುದ್ದ ಬೀದಿಗಳಿದ ಬಳಿಕ ಫರೀಷಾ ಅವರಿಗೆ ಹಲವಾರು ಬೆದರಿಕೆ ಕರೆಗಳು ಬಂದಿವೆಯಂತೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿ ಅವರ ಮಾನಹಾನಿ ಮಾಡುವ ಪ್ರಯತ್ನಗಳು ಆಗಿವೆ. ಕೆಲವರು ಫರೀಷಾ ಅವರ ಮಕ್ಕಳು ಮತ್ತು ಕುಟುಂಬಸ್ಥರ ಮೇಲೆ ದಾಳಿ ಮಾಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಫರೀಷಾ ಈಗಾಗಲೇ ಪಳಯಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೊಸ ಗಾಜಾ ಕದನ ವಿರಾಮ ಪ್ರಸ್ತಾವನೆಗೆ ಒಪ್ಪಿದ ಹಮಾಸ್: ಪ್ರತಿ-ಪ್ರಸ್ತಾಪ ಸಲ್ಲಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...