Homeಮುಖಪುಟಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ 'ಫರೀಷಾ ಆಬಿದ್': ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

- Advertisement -
- Advertisement -

‘ಮಾದಕ ವಸ್ತು’ ಯಾವುದೋ ವಿದೇಶಿ ವಿಷಯ ಎನ್ನುವ ಕಾಲವೊಂದಿತ್ತು. ಆದರೆ, ಈಗ ಭಾರತದ ಮಟ್ಟಿಗೆ ಮಾದಕ ವಸ್ತು ದೊಡ್ಡ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದೆ. ನಮ್ಮ ಊರುಗಳ ಗಲ್ಲಿ ಗಲ್ಲಿಗೂ ಮಾದಕ ವಸ್ತುಗಳು ಕಾಲಿಟ್ಟಿದೆ. ಯುವಜನರು ಅವುಗಳಿಗೆ ದಾಸರಾಗಿ ಜೀವನ, ಜೀವ ಕಳೆದುಕೊಳ್ಳುತ್ತಿದ್ದಾರೆ.

ಕೇರಳದಲ್ಲಿ ಮಾದಕ ವಸ್ತುಗಳು ಮಕ್ಕಳ ಪೋಷಕರಿಂದ ಹಿಡಿದು ಸರ್ಕಾರದವರೆಗೆ ಎಲ್ಲರಿಗೂ ದೊಡ್ಡ ತಲೆನೋವಾಗಿ ಮಾರ್ಪಟ್ಟಿದೆ. ಯುವಜನರು ಮಾದಕ ವಸ್ತುಗಳಿಗೆ ದಾಸರಾಗಿ ಹೆತ್ತ ತಂದೆ-ತಾಯಿಯನ್ನು ಕೊಲೆ ಮಾಡುವಂತಹ ಪ್ರಕರಣಗಳು ವರದಿಯಾಗುತ್ತಿವೆ.

ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕಣ್ಣೂರು ಜಿಲ್ಲೆಯ ಮಾಟೂಲ್ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಫರೀಷಾ ಆಬಿದ್ ಅವರು ಪ್ರಾರಂಭಿಸಿದ ಕಾರ್ಯಕ್ರಮವೊಂದು ದೊಡ್ಡ ಅಭಿಯಾನವಾಗಿ ಮಾರ್ಪಟ್ಟಿದೆ. ಎಲ್ಲಾ ವರ್ಗದ ಜನ ಸಮೂಹ ಫರೀಷಾ ಅವರ ಬೆನ್ನಿಗೆ ನಿಂತಿದ್ದಾರೆ.

ಈ ಹಿಂದೆ ಶಿಕ್ಷಕಿಯಾಗಿದ್ದ ಈಗ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿರುವ ಫರೀಷಾ ಆಬಿದ್ ಅವರು, ಕಳೆದ ಎರಡು ತಿಂಗಳ ಹಿಂದೆ ಮಾದಕ ವಸ್ತುಗಳ ವಿರುದ್ದ ‘ಧೀರ’ ಎಂಬ ಹೆಸರಿನ ಕಾರ್ಯಕ್ರಮ ಆರಂಭಿಸಿದ್ದಾರೆ. ಆರಂಭದಲ್ಲಿ ಕೆಲ ಯುವಕರನ್ನು ಸೇರಿಸಿ ವಾಟ್ಸಾಪ್‌ ಗ್ರೂಪ್‌ ಮೂಲಕ ಆರಂಭವಾದ ಈ ಕಾರ್ಯಕ್ರಮ ಈಗ ದೊಡ್ಡ ಅಭಿಯಾನವಾಗಿ ಮಾರ್ಪಟ್ಟಿದೆ. ಜನ ಸಮುದಾಯ ಈ ಅಭಿಯಾನಕ್ಕೆ ಅಪೂರ್ವ ಬೆಂಬಲ ವ್ಯಕ್ತಪಡಿಸಿದ್ದು, ಮಾಟೂಲ್‌ನ ಪಕ್ಕದ ಮಾಡಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯವರೂ ಸೇರಿದಂತೆ 800 ಸ್ವಯಂ ಸೇವಕರ ಪಡೆ ರಚನೆಯಾಗಿದೆ.

ಈ ಸ್ವಯಂ ಸೇವಕರು ಮಾದಕ ವಸ್ತುಗಳ ಸಾಗಣೆ ಮತ್ತು ಸೇವನೆಯ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಫರೀಷಾ ಅವರ ತಂಡ ಮುಂದಿನ ದಿನಗಳಲ್ಲಿ ಗುಪ್ತ ಮಾದಕವಸ್ತು ಚಟುವಟಿಕೆಗಳನ್ನು ಪತ್ತೆಹಚ್ಚಲು ಥರ್ಮಲ್ ಸ್ಕ್ಯಾನಿಂಗ್‌ನೊಂದಿಗೆ ಡ್ರೋನ್ ಕಣ್ಗಾವಲು ಪರಿಚಯಿಸುವ ಯೋಚನೆಯಲ್ಲಿದೆ.

ಶಿಕ್ಷಕರು, ವಿದ್ಯಾರ್ಥಿಗಳು, ಉದ್ಯಮಿಗಳು, ವ್ಯಾಪಾರಸ್ಥರು, ವಕೀಲರು, ಪೊಲೀಸ್ ಅಧಿಕಾರಿಗಳು ಮತ್ತು ಇತರ ನಾಗರಿಕರು ಫರೀಷಾ ಅವರ ‘ಧೀರ’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಪರಿಣಾಮ ಮಾದಕವಸ್ತು ಪ್ರಕರಣಗಳಲ್ಲಿ ಭಾಗಿಯಾಗಿರುವ ಕನಿಷ್ಠ 13 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಮತ್ತು ವ್ಯಸನದಿಂದ ಬಳಲುತ್ತಿರುವ ಹಲವಾರು ಜನರನ್ನು ಗುರುತಿಸಿ ಅವರನ್ನು ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ.

ಯಾವುದೇ ಗಂಡು-ಹೆಣ್ಣಿನ ಮದುವೆಗೂ ಮುನ್ನ ಅವರನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಬೇಕು ಎಂದು ಧಾರ್ಮಿಕ ಸಂಸ್ಥೆಗಳು, ನಾಯಕರ ಮೂಲಕ ಸಾರ್ವಜನಿಕರಿಗೆ ಧೀರ ಅಭಿಯಾನ ಸಲಹೆ ನೀಡಿದೆ. ಈ ಮೂಲಕ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಕೌಟುಂಬಿಕ ಕಲಹಗಳನ್ನು ತಪ್ಪಿಸುವ ಪ್ರಯತ್ನದಲ್ಲಿದೆ.

ಆರಂಭದಲ್ಲಿ ಮಾಟೂಲ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡ ಧೀರ ಅಭಿಯಾನದೊಂದಿಗೆ ಈಗ ಪಕ್ಕದ ಮಾಡಾಯಿ ಗ್ರಾಮಸ್ಥರು ಕೈ ಜೋಡಿಸಿದ್ದಾರೆ. ಹಾಗಾಗಿ, ಧೀರ ತಂಡದ ಹೆಸರನ್ನು ಈಗ “ಧೀರ : ಮಾಟ್ಟೂಲ್-ಮಾಡಾಯಿ ಕೂಟಾಯಿಮ” (Dheera: Mattool-Madayi Collective) ಎಂದು ಬದಲಾಯಿಸಲಾಗಿದೆ.

“ಮಾದಕ ವಸ್ತುಗಳ ಸಾಗಣೆ ಮತ್ತು ಸೇವನೆ ಬಗ್ಗೆ ಮಾಹಿತಿಯಿದ್ದರೂ ಅದರ ಬಗ್ಗೆ ಮಾತನಾಡಲು ಜನರು ಹೆದರುತ್ತಿದ್ದರು. ನಮ್ಮ ಅಭಿಯಾನ, ಜನರು ಮುಂದೆ ಬಂದು ಮಾತನಾಡಲು ಪ್ರೋತ್ಸಾಹಿಸಿದೆ. ಮಾದಕವಸ್ತು ವಲಯಗಳು, ಮಾರಾಟಗಾರರು ಮತ್ತು ಬಳಕೆದಾರರ ಬಗ್ಗೆ ಪ್ರಮುಖ ಮಾಹಿತಿಯನ್ನು ಒದಗಿಸುತ್ತಿದ್ದಾರೆ” ಫರೀಷಾ ಹೇಳುತ್ತಾರೆ.

ಧೀರ ಅಭಿಯಾನ ಕೇವಲ ಮಾದಕ ವಸ್ತು ಪೂರೈಕೆ ಮಾಡುವವರನ್ನು ಹಿಡಿದು ಕೊಡುವ ಕೆಲಸ ಮಾತ್ರ ಮಾಡುತ್ತಿಲ್ಲ. ಅಭಿಯಾನದ ಭಾಗವಾಗಿ ಶಾಲೆ, ಪಂಚಾಯತ್ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕರಪತ್ರಗಳನ್ನು ವಿತರಿಸಿ ಜನರಿಗೆ ವಿಷಯದ ಗಂಭೀರತೆ ಅರ್ಥ ಮಾಡಿಸಲಾಗುತ್ತಿದೆ. ಇತ್ತೀಚೆಗೆ ವಲಸೆ ಕಾರ್ಮಿಕರು ಮಾದಕ ವಸ್ತು ಪೂರೈಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದ ಕಾರಣ, ಹಿಂದಿಯಲ್ಲಿ ಕರಪತ್ರ ಮುದ್ರಿಸಿ ವಲಸೆ ಕಾರ್ಮಿಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ.

ಮಾದಕವಸ್ತು ಸೇವನೆ ಮಾಡುವವರಿಗೆ ಜಾಗದ ವ್ಯವಸ್ಥೆ ಮಾಡಿಕೊಡುವ ಕೆಲ ಆಸ್ತಿ ಮಾಲೀಕರಿಗೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಧೀರ ತಂಡ ಎಚ್ಚರಿಕೆ ನೀಡಿದೆ. ಮಾದಕವಸ್ತು ವ್ಯಾಪಾರದ ಮೇಲೆ ಸಂಘಟಿತ ಕ್ರಮ ಕೈಗೊಳ್ಳಲು ಧೀರ ತಂಡ ಪಳಯಂಗಡಿ ಪೊಲೀಸರು ಮತ್ತು ಜಿಲ್ಲಾ ಅಬಕಾರಿ ತಂಡದೊಂದಿಗೆ ನಿಕಟವಾಗಿ ಸಹಕರಿಸುತ್ತಿದೆ.

ಮಾದಕವಸ್ತು ವಿರುದ್ದ ಬೀದಿಗಳಿದ ಬಳಿಕ ಫರೀಷಾ ಅವರಿಗೆ ಹಲವಾರು ಬೆದರಿಕೆ ಕರೆಗಳು ಬಂದಿವೆಯಂತೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿ ಅವರ ಮಾನಹಾನಿ ಮಾಡುವ ಪ್ರಯತ್ನಗಳು ಆಗಿವೆ. ಕೆಲವರು ಫರೀಷಾ ಅವರ ಮಕ್ಕಳು ಮತ್ತು ಕುಟುಂಬಸ್ಥರ ಮೇಲೆ ದಾಳಿ ಮಾಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಫರೀಷಾ ಈಗಾಗಲೇ ಪಳಯಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೊಸ ಗಾಜಾ ಕದನ ವಿರಾಮ ಪ್ರಸ್ತಾವನೆಗೆ ಒಪ್ಪಿದ ಹಮಾಸ್: ಪ್ರತಿ-ಪ್ರಸ್ತಾಪ ಸಲ್ಲಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...