Homeಮುಖಪುಟಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ 'ಫರೀಷಾ ಆಬಿದ್': ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

- Advertisement -
- Advertisement -

‘ಮಾದಕ ವಸ್ತು’ ಯಾವುದೋ ವಿದೇಶಿ ವಿಷಯ ಎನ್ನುವ ಕಾಲವೊಂದಿತ್ತು. ಆದರೆ, ಈಗ ಭಾರತದ ಮಟ್ಟಿಗೆ ಮಾದಕ ವಸ್ತು ದೊಡ್ಡ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದೆ. ನಮ್ಮ ಊರುಗಳ ಗಲ್ಲಿ ಗಲ್ಲಿಗೂ ಮಾದಕ ವಸ್ತುಗಳು ಕಾಲಿಟ್ಟಿದೆ. ಯುವಜನರು ಅವುಗಳಿಗೆ ದಾಸರಾಗಿ ಜೀವನ, ಜೀವ ಕಳೆದುಕೊಳ್ಳುತ್ತಿದ್ದಾರೆ.

ಕೇರಳದಲ್ಲಿ ಮಾದಕ ವಸ್ತುಗಳು ಮಕ್ಕಳ ಪೋಷಕರಿಂದ ಹಿಡಿದು ಸರ್ಕಾರದವರೆಗೆ ಎಲ್ಲರಿಗೂ ದೊಡ್ಡ ತಲೆನೋವಾಗಿ ಮಾರ್ಪಟ್ಟಿದೆ. ಯುವಜನರು ಮಾದಕ ವಸ್ತುಗಳಿಗೆ ದಾಸರಾಗಿ ಹೆತ್ತ ತಂದೆ-ತಾಯಿಯನ್ನು ಕೊಲೆ ಮಾಡುವಂತಹ ಪ್ರಕರಣಗಳು ವರದಿಯಾಗುತ್ತಿವೆ.

ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕಣ್ಣೂರು ಜಿಲ್ಲೆಯ ಮಾಟೂಲ್ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಫರೀಷಾ ಆಬಿದ್ ಅವರು ಪ್ರಾರಂಭಿಸಿದ ಕಾರ್ಯಕ್ರಮವೊಂದು ದೊಡ್ಡ ಅಭಿಯಾನವಾಗಿ ಮಾರ್ಪಟ್ಟಿದೆ. ಎಲ್ಲಾ ವರ್ಗದ ಜನ ಸಮೂಹ ಫರೀಷಾ ಅವರ ಬೆನ್ನಿಗೆ ನಿಂತಿದ್ದಾರೆ.

ಈ ಹಿಂದೆ ಶಿಕ್ಷಕಿಯಾಗಿದ್ದ ಈಗ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿರುವ ಫರೀಷಾ ಆಬಿದ್ ಅವರು, ಕಳೆದ ಎರಡು ತಿಂಗಳ ಹಿಂದೆ ಮಾದಕ ವಸ್ತುಗಳ ವಿರುದ್ದ ‘ಧೀರ’ ಎಂಬ ಹೆಸರಿನ ಕಾರ್ಯಕ್ರಮ ಆರಂಭಿಸಿದ್ದಾರೆ. ಆರಂಭದಲ್ಲಿ ಕೆಲ ಯುವಕರನ್ನು ಸೇರಿಸಿ ವಾಟ್ಸಾಪ್‌ ಗ್ರೂಪ್‌ ಮೂಲಕ ಆರಂಭವಾದ ಈ ಕಾರ್ಯಕ್ರಮ ಈಗ ದೊಡ್ಡ ಅಭಿಯಾನವಾಗಿ ಮಾರ್ಪಟ್ಟಿದೆ. ಜನ ಸಮುದಾಯ ಈ ಅಭಿಯಾನಕ್ಕೆ ಅಪೂರ್ವ ಬೆಂಬಲ ವ್ಯಕ್ತಪಡಿಸಿದ್ದು, ಮಾಟೂಲ್‌ನ ಪಕ್ಕದ ಮಾಡಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯವರೂ ಸೇರಿದಂತೆ 800 ಸ್ವಯಂ ಸೇವಕರ ಪಡೆ ರಚನೆಯಾಗಿದೆ.

ಈ ಸ್ವಯಂ ಸೇವಕರು ಮಾದಕ ವಸ್ತುಗಳ ಸಾಗಣೆ ಮತ್ತು ಸೇವನೆಯ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಫರೀಷಾ ಅವರ ತಂಡ ಮುಂದಿನ ದಿನಗಳಲ್ಲಿ ಗುಪ್ತ ಮಾದಕವಸ್ತು ಚಟುವಟಿಕೆಗಳನ್ನು ಪತ್ತೆಹಚ್ಚಲು ಥರ್ಮಲ್ ಸ್ಕ್ಯಾನಿಂಗ್‌ನೊಂದಿಗೆ ಡ್ರೋನ್ ಕಣ್ಗಾವಲು ಪರಿಚಯಿಸುವ ಯೋಚನೆಯಲ್ಲಿದೆ.

ಶಿಕ್ಷಕರು, ವಿದ್ಯಾರ್ಥಿಗಳು, ಉದ್ಯಮಿಗಳು, ವ್ಯಾಪಾರಸ್ಥರು, ವಕೀಲರು, ಪೊಲೀಸ್ ಅಧಿಕಾರಿಗಳು ಮತ್ತು ಇತರ ನಾಗರಿಕರು ಫರೀಷಾ ಅವರ ‘ಧೀರ’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಪರಿಣಾಮ ಮಾದಕವಸ್ತು ಪ್ರಕರಣಗಳಲ್ಲಿ ಭಾಗಿಯಾಗಿರುವ ಕನಿಷ್ಠ 13 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಮತ್ತು ವ್ಯಸನದಿಂದ ಬಳಲುತ್ತಿರುವ ಹಲವಾರು ಜನರನ್ನು ಗುರುತಿಸಿ ಅವರನ್ನು ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ.

ಯಾವುದೇ ಗಂಡು-ಹೆಣ್ಣಿನ ಮದುವೆಗೂ ಮುನ್ನ ಅವರನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಬೇಕು ಎಂದು ಧಾರ್ಮಿಕ ಸಂಸ್ಥೆಗಳು, ನಾಯಕರ ಮೂಲಕ ಸಾರ್ವಜನಿಕರಿಗೆ ಧೀರ ಅಭಿಯಾನ ಸಲಹೆ ನೀಡಿದೆ. ಈ ಮೂಲಕ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಕೌಟುಂಬಿಕ ಕಲಹಗಳನ್ನು ತಪ್ಪಿಸುವ ಪ್ರಯತ್ನದಲ್ಲಿದೆ.

ಆರಂಭದಲ್ಲಿ ಮಾಟೂಲ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡ ಧೀರ ಅಭಿಯಾನದೊಂದಿಗೆ ಈಗ ಪಕ್ಕದ ಮಾಡಾಯಿ ಗ್ರಾಮಸ್ಥರು ಕೈ ಜೋಡಿಸಿದ್ದಾರೆ. ಹಾಗಾಗಿ, ಧೀರ ತಂಡದ ಹೆಸರನ್ನು ಈಗ “ಧೀರ : ಮಾಟ್ಟೂಲ್-ಮಾಡಾಯಿ ಕೂಟಾಯಿಮ” (Dheera: Mattool-Madayi Collective) ಎಂದು ಬದಲಾಯಿಸಲಾಗಿದೆ.

“ಮಾದಕ ವಸ್ತುಗಳ ಸಾಗಣೆ ಮತ್ತು ಸೇವನೆ ಬಗ್ಗೆ ಮಾಹಿತಿಯಿದ್ದರೂ ಅದರ ಬಗ್ಗೆ ಮಾತನಾಡಲು ಜನರು ಹೆದರುತ್ತಿದ್ದರು. ನಮ್ಮ ಅಭಿಯಾನ, ಜನರು ಮುಂದೆ ಬಂದು ಮಾತನಾಡಲು ಪ್ರೋತ್ಸಾಹಿಸಿದೆ. ಮಾದಕವಸ್ತು ವಲಯಗಳು, ಮಾರಾಟಗಾರರು ಮತ್ತು ಬಳಕೆದಾರರ ಬಗ್ಗೆ ಪ್ರಮುಖ ಮಾಹಿತಿಯನ್ನು ಒದಗಿಸುತ್ತಿದ್ದಾರೆ” ಫರೀಷಾ ಹೇಳುತ್ತಾರೆ.

ಧೀರ ಅಭಿಯಾನ ಕೇವಲ ಮಾದಕ ವಸ್ತು ಪೂರೈಕೆ ಮಾಡುವವರನ್ನು ಹಿಡಿದು ಕೊಡುವ ಕೆಲಸ ಮಾತ್ರ ಮಾಡುತ್ತಿಲ್ಲ. ಅಭಿಯಾನದ ಭಾಗವಾಗಿ ಶಾಲೆ, ಪಂಚಾಯತ್ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕರಪತ್ರಗಳನ್ನು ವಿತರಿಸಿ ಜನರಿಗೆ ವಿಷಯದ ಗಂಭೀರತೆ ಅರ್ಥ ಮಾಡಿಸಲಾಗುತ್ತಿದೆ. ಇತ್ತೀಚೆಗೆ ವಲಸೆ ಕಾರ್ಮಿಕರು ಮಾದಕ ವಸ್ತು ಪೂರೈಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದ ಕಾರಣ, ಹಿಂದಿಯಲ್ಲಿ ಕರಪತ್ರ ಮುದ್ರಿಸಿ ವಲಸೆ ಕಾರ್ಮಿಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ.

ಮಾದಕವಸ್ತು ಸೇವನೆ ಮಾಡುವವರಿಗೆ ಜಾಗದ ವ್ಯವಸ್ಥೆ ಮಾಡಿಕೊಡುವ ಕೆಲ ಆಸ್ತಿ ಮಾಲೀಕರಿಗೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಧೀರ ತಂಡ ಎಚ್ಚರಿಕೆ ನೀಡಿದೆ. ಮಾದಕವಸ್ತು ವ್ಯಾಪಾರದ ಮೇಲೆ ಸಂಘಟಿತ ಕ್ರಮ ಕೈಗೊಳ್ಳಲು ಧೀರ ತಂಡ ಪಳಯಂಗಡಿ ಪೊಲೀಸರು ಮತ್ತು ಜಿಲ್ಲಾ ಅಬಕಾರಿ ತಂಡದೊಂದಿಗೆ ನಿಕಟವಾಗಿ ಸಹಕರಿಸುತ್ತಿದೆ.

ಮಾದಕವಸ್ತು ವಿರುದ್ದ ಬೀದಿಗಳಿದ ಬಳಿಕ ಫರೀಷಾ ಅವರಿಗೆ ಹಲವಾರು ಬೆದರಿಕೆ ಕರೆಗಳು ಬಂದಿವೆಯಂತೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿ ಅವರ ಮಾನಹಾನಿ ಮಾಡುವ ಪ್ರಯತ್ನಗಳು ಆಗಿವೆ. ಕೆಲವರು ಫರೀಷಾ ಅವರ ಮಕ್ಕಳು ಮತ್ತು ಕುಟುಂಬಸ್ಥರ ಮೇಲೆ ದಾಳಿ ಮಾಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಫರೀಷಾ ಈಗಾಗಲೇ ಪಳಯಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೊಸ ಗಾಜಾ ಕದನ ವಿರಾಮ ಪ್ರಸ್ತಾವನೆಗೆ ಒಪ್ಪಿದ ಹಮಾಸ್: ಪ್ರತಿ-ಪ್ರಸ್ತಾಪ ಸಲ್ಲಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...