Homeಮುಖಪುಟಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ...

ಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ ಆರೋಪ

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಸೇರಿದಂತೆ ದೇಶಾದ್ಯಂತ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಈ ಬೆನ್ನಲ್ಲೆ ಆ ಕಾಯ್ದೆಗಳನ್ನು ಈಗಾಗಲೇ ಜಾರಿಗೊಳಿಸುತ್ತಿರುವ ಮಧ್ಯಪ್ರದೇಶ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗುವ ಬೆಳವಣಿಗೆಯೊಂದು ನಡೆದಿದೆ. ಅಲ್ಲಿನ 250ಕ್ಕೂ ಹೆಚ್ಚು ರೈತರಿಂದ ವರ್ತಕರು 2600 ಕ್ವಿಂಟಾಲ್ ಬೆಳಗಳನ್ನು ಕೊಂಡು ಹಣ ನೀಡದೇ ಸುಮಾರು 5 ಕೋಟಿ ರೂ ವಂಚಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ. ಆದರೆ ಈ ರೀತಿಯಾಗಿ ಮಂಡಿಯಿಂದ ಹೊರಗೆ ಮಾರಾಟ ಮಾಡಿದ್ದ ರೈತರಿಗೆ ವರ್ತಕರು ಹಣ ನೀಡದೇ ವಂಚಿಸಿದ್ದಾರೆ ಎಂದು ಹಲವು ರೈತರು ದಿವಾಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ರೈತರು ತಮಗೆ ವಂಚನೆಯಾಗಿದೆ ಎಂದು ದೂರು ಸಲ್ಲಿಸಿದ್ದಾರೆ. ಅದರ ಪ್ರಕಾರ ರಾಜ್ಯದ ಮುಖ್ಯಮಂತ್ರಿ ಮತ್ತು ಕೃಷಿ ಸಚಿವರ ತವರು ಜಿಲ್ಲೆಗಳ ರೈತರಿಂದ ವರ್ತಕರು ಬೆಳೆಗಳನ್ನು ಖರೀದಿಸಿ ಚೆಕ್ ನೀಡಿದ್ದಾರೆ. ಆದರೆ ಆ ಚೆಕ್‌ಗಳೆಲ್ಲವೂ ಬೌನ್ಸ್ ಆಗಿವೆ. ದಿವಾಸ್‌ನ ಮಂಡಿಗಳಿಂದ ಅವರಿಗೆ ಅವಧಿ ಮೀರಿದ ಲೈಸೆನ್ಸ್‌ ನೀಡಿದ್ದಾರೆ ಎಂದು ಆರೋಪಿಸಿ ರೈತರು ಮಂಡಿಗೆ ಹೋಗಿ ವಿಚಾರಿಸಿದರೆ ಅಲ್ಲಿಂದ ಅವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ನಾವು ಮಾತುಕತೆಯಾದ ದರಕ್ಕೆ ನಮ್ಮ ಬೆಳೆಗಳನ್ನು ಮಾರಿದ್ದೇವೆ. ಶೆಹೋರ್, ಹರ್ಡಾ, ಹೋಶಾಂಗ್‌ಬಾದ್‌ನ ಹಲವು ರೈತರು ಸಹ ಮಾರಿದ್ದಾರೆ. ಆದರೆ ನಮ್ಮಿಂದ ಬೆಳೆ ಪಡೆದವರು ಹಣ ನೀಡದೆ ಪರಾರಿಯಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಆರೋಪಿಗಳನ್ನು ಬಂಧಿಸಿ, ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ನಮ್ಮ ಹಣ ನೀಡಬೇಕೆಂದು ರೈತರೊಬ್ಬರು ಒತ್ತಾಯಿಸಿದ್ದಾರೆ.

ಹಾರ್ಡಾ, ಗ್ವಾಲಿಯರ್, ಬಮೋರಿ ಸೇರಿದಂತೆ ಹಲವೆಡೆ ನೂರಾರು ರೈತರು ಇದೇ ರೀತಿಯ ದೂರುಗಳನ್ನು ಸಲ್ಲಿಸಿದ್ದಾರೆ.

“ಈಗ ಮೋಸ ಮಾಡಿರುವ ಹಲವು ಕಂಪನಿಗಳು ಈ ಹಿಂದೆ ಮಂಡಿಗಳಲ್ಲಿ ನಮ್ಮಿಂದ ಖರೀದಿಸುತ್ತಿದ್ದರು. ಆದರೆ ಅಲ್ಲಿ ನಮಗೆ ಪಾವತಿಯ ಗ್ಯಾರಂಟಿಯಿತ್ತು. ಆದರೆ ಹೊಸ ಮಾದರಿ ಮಂಡಿ ಕಾಯ್ದೆಗಳಿಂದ ಆ ಗ್ಯಾರಂಟಿ ಇಲ್ಲವಾಗಿದೆ” ಎಂದು ರೈತರು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಸಚಿವ ಕಮಲ್ ಪಟೇಲ್ “ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಮತ್ತು ರೈತರಿಗೆ ಅವರ ಹಣವನ್ನು ಮರಳಿ ಕೊಡಿಸಲಾಗುತ್ತದೆ. ಇನ್ನು ಮುಂದೆ ರೈತರು ಕೇವಲ ನಗದು ವ್ಯವಹಾರದಲ್ಲಿ ಮಾತ್ರ ತಮ್ಮ ಬೆಳೆಗಳನ್ನು ಮಾರಬೇಕು. ಅದು ಕಷ್ಟವಾದರೂ ಸಾಧ್ಯ” ಎಂದಿದ್ದಾರೆ.

ಈ ಪ್ರಕರಣದಲ್ಲಿ ನ್ಯಾಯಾಲಯ ನಮ್ಮ ಪರವಿರುತ್ತದೆ ಎಂದು ಹೇಳಲು ಬರುವುದಿಲ್ಲ. ಸರ್ಕಾರ ರಚಿಸುವ ಸಮಿತಿಯು ನೀಡುವ ಪರಿಹಾರವನ್ನು ಸ್ವೀಕರಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಗಳಿಲ್ಲ ಎಂದು ರೈತರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಈ ಕೃಷಿ ಕಾಯ್ದೆಗಳಿಂದ ನಿಧಾನವಾಗಿ ಮಂಡಿಗಳು ನಶಿಸುವುದರಿಂದ ರೈತರು ವರ್ತಕರು ಕೇಳಿದ ಬೆಲೆಗೆ, ಅವರು ಕೊಡುವ ಚೆಕ್ ಅಥವಾ ಮತ್ತಿತರ ವಿಧಾನಗಳ ಮೂಲಕವೇ ಮಾರಬೇಕಾದ ಪರಿಸ್ಥಿತಿ ರೈತರಿಗೆ ಬರುತ್ತದೆ ಎಂಬುದನ್ನು ಈ ಮೇಲಿನ ಪ್ರಕರಣಗಳು ಸೂಚಿಸುತ್ತವೆ. ಏಕೆಂದರೆ ರೈತರ ಬಳಿ ಬೆಳೆಗಳನ್ನು ಹಲವು ದಿನ ಇಟ್ಟುಕೊಳ್ಳುವ ವ್ಯವಸ್ಥೆ ಇಲ್ಲ. ಇದು ದೊಡ್ಡ ದೊಡ್ಡ ಕಾರ್ಪೊರೇಟ್‌ಗಳಿಗಷ್ಟೇ ಲಾಭ ತಂದುಕೊಡುತ್ತದೆ ಎಂಬುದು ರೈತರ ಆರೋಪ.


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...