Homeಮುಖಪುಟಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ...

ಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ ಆರೋಪ

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಸೇರಿದಂತೆ ದೇಶಾದ್ಯಂತ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಈ ಬೆನ್ನಲ್ಲೆ ಆ ಕಾಯ್ದೆಗಳನ್ನು ಈಗಾಗಲೇ ಜಾರಿಗೊಳಿಸುತ್ತಿರುವ ಮಧ್ಯಪ್ರದೇಶ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗುವ ಬೆಳವಣಿಗೆಯೊಂದು ನಡೆದಿದೆ. ಅಲ್ಲಿನ 250ಕ್ಕೂ ಹೆಚ್ಚು ರೈತರಿಂದ ವರ್ತಕರು 2600 ಕ್ವಿಂಟಾಲ್ ಬೆಳಗಳನ್ನು ಕೊಂಡು ಹಣ ನೀಡದೇ ಸುಮಾರು 5 ಕೋಟಿ ರೂ ವಂಚಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ. ಆದರೆ ಈ ರೀತಿಯಾಗಿ ಮಂಡಿಯಿಂದ ಹೊರಗೆ ಮಾರಾಟ ಮಾಡಿದ್ದ ರೈತರಿಗೆ ವರ್ತಕರು ಹಣ ನೀಡದೇ ವಂಚಿಸಿದ್ದಾರೆ ಎಂದು ಹಲವು ರೈತರು ದಿವಾಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ರೈತರು ತಮಗೆ ವಂಚನೆಯಾಗಿದೆ ಎಂದು ದೂರು ಸಲ್ಲಿಸಿದ್ದಾರೆ. ಅದರ ಪ್ರಕಾರ ರಾಜ್ಯದ ಮುಖ್ಯಮಂತ್ರಿ ಮತ್ತು ಕೃಷಿ ಸಚಿವರ ತವರು ಜಿಲ್ಲೆಗಳ ರೈತರಿಂದ ವರ್ತಕರು ಬೆಳೆಗಳನ್ನು ಖರೀದಿಸಿ ಚೆಕ್ ನೀಡಿದ್ದಾರೆ. ಆದರೆ ಆ ಚೆಕ್‌ಗಳೆಲ್ಲವೂ ಬೌನ್ಸ್ ಆಗಿವೆ. ದಿವಾಸ್‌ನ ಮಂಡಿಗಳಿಂದ ಅವರಿಗೆ ಅವಧಿ ಮೀರಿದ ಲೈಸೆನ್ಸ್‌ ನೀಡಿದ್ದಾರೆ ಎಂದು ಆರೋಪಿಸಿ ರೈತರು ಮಂಡಿಗೆ ಹೋಗಿ ವಿಚಾರಿಸಿದರೆ ಅಲ್ಲಿಂದ ಅವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ನಾವು ಮಾತುಕತೆಯಾದ ದರಕ್ಕೆ ನಮ್ಮ ಬೆಳೆಗಳನ್ನು ಮಾರಿದ್ದೇವೆ. ಶೆಹೋರ್, ಹರ್ಡಾ, ಹೋಶಾಂಗ್‌ಬಾದ್‌ನ ಹಲವು ರೈತರು ಸಹ ಮಾರಿದ್ದಾರೆ. ಆದರೆ ನಮ್ಮಿಂದ ಬೆಳೆ ಪಡೆದವರು ಹಣ ನೀಡದೆ ಪರಾರಿಯಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಆರೋಪಿಗಳನ್ನು ಬಂಧಿಸಿ, ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ನಮ್ಮ ಹಣ ನೀಡಬೇಕೆಂದು ರೈತರೊಬ್ಬರು ಒತ್ತಾಯಿಸಿದ್ದಾರೆ.

ಹಾರ್ಡಾ, ಗ್ವಾಲಿಯರ್, ಬಮೋರಿ ಸೇರಿದಂತೆ ಹಲವೆಡೆ ನೂರಾರು ರೈತರು ಇದೇ ರೀತಿಯ ದೂರುಗಳನ್ನು ಸಲ್ಲಿಸಿದ್ದಾರೆ.

“ಈಗ ಮೋಸ ಮಾಡಿರುವ ಹಲವು ಕಂಪನಿಗಳು ಈ ಹಿಂದೆ ಮಂಡಿಗಳಲ್ಲಿ ನಮ್ಮಿಂದ ಖರೀದಿಸುತ್ತಿದ್ದರು. ಆದರೆ ಅಲ್ಲಿ ನಮಗೆ ಪಾವತಿಯ ಗ್ಯಾರಂಟಿಯಿತ್ತು. ಆದರೆ ಹೊಸ ಮಾದರಿ ಮಂಡಿ ಕಾಯ್ದೆಗಳಿಂದ ಆ ಗ್ಯಾರಂಟಿ ಇಲ್ಲವಾಗಿದೆ” ಎಂದು ರೈತರು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಸಚಿವ ಕಮಲ್ ಪಟೇಲ್ “ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಮತ್ತು ರೈತರಿಗೆ ಅವರ ಹಣವನ್ನು ಮರಳಿ ಕೊಡಿಸಲಾಗುತ್ತದೆ. ಇನ್ನು ಮುಂದೆ ರೈತರು ಕೇವಲ ನಗದು ವ್ಯವಹಾರದಲ್ಲಿ ಮಾತ್ರ ತಮ್ಮ ಬೆಳೆಗಳನ್ನು ಮಾರಬೇಕು. ಅದು ಕಷ್ಟವಾದರೂ ಸಾಧ್ಯ” ಎಂದಿದ್ದಾರೆ.

ಈ ಪ್ರಕರಣದಲ್ಲಿ ನ್ಯಾಯಾಲಯ ನಮ್ಮ ಪರವಿರುತ್ತದೆ ಎಂದು ಹೇಳಲು ಬರುವುದಿಲ್ಲ. ಸರ್ಕಾರ ರಚಿಸುವ ಸಮಿತಿಯು ನೀಡುವ ಪರಿಹಾರವನ್ನು ಸ್ವೀಕರಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಗಳಿಲ್ಲ ಎಂದು ರೈತರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಈ ಕೃಷಿ ಕಾಯ್ದೆಗಳಿಂದ ನಿಧಾನವಾಗಿ ಮಂಡಿಗಳು ನಶಿಸುವುದರಿಂದ ರೈತರು ವರ್ತಕರು ಕೇಳಿದ ಬೆಲೆಗೆ, ಅವರು ಕೊಡುವ ಚೆಕ್ ಅಥವಾ ಮತ್ತಿತರ ವಿಧಾನಗಳ ಮೂಲಕವೇ ಮಾರಬೇಕಾದ ಪರಿಸ್ಥಿತಿ ರೈತರಿಗೆ ಬರುತ್ತದೆ ಎಂಬುದನ್ನು ಈ ಮೇಲಿನ ಪ್ರಕರಣಗಳು ಸೂಚಿಸುತ್ತವೆ. ಏಕೆಂದರೆ ರೈತರ ಬಳಿ ಬೆಳೆಗಳನ್ನು ಹಲವು ದಿನ ಇಟ್ಟುಕೊಳ್ಳುವ ವ್ಯವಸ್ಥೆ ಇಲ್ಲ. ಇದು ದೊಡ್ಡ ದೊಡ್ಡ ಕಾರ್ಪೊರೇಟ್‌ಗಳಿಗಷ್ಟೇ ಲಾಭ ತಂದುಕೊಡುತ್ತದೆ ಎಂಬುದು ರೈತರ ಆರೋಪ.


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...