Homeಮುಖಪುಟಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ...

ಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ ಆರೋಪ

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಸೇರಿದಂತೆ ದೇಶಾದ್ಯಂತ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಈ ಬೆನ್ನಲ್ಲೆ ಆ ಕಾಯ್ದೆಗಳನ್ನು ಈಗಾಗಲೇ ಜಾರಿಗೊಳಿಸುತ್ತಿರುವ ಮಧ್ಯಪ್ರದೇಶ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗುವ ಬೆಳವಣಿಗೆಯೊಂದು ನಡೆದಿದೆ. ಅಲ್ಲಿನ 250ಕ್ಕೂ ಹೆಚ್ಚು ರೈತರಿಂದ ವರ್ತಕರು 2600 ಕ್ವಿಂಟಾಲ್ ಬೆಳಗಳನ್ನು ಕೊಂಡು ಹಣ ನೀಡದೇ ಸುಮಾರು 5 ಕೋಟಿ ರೂ ವಂಚಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ. ಆದರೆ ಈ ರೀತಿಯಾಗಿ ಮಂಡಿಯಿಂದ ಹೊರಗೆ ಮಾರಾಟ ಮಾಡಿದ್ದ ರೈತರಿಗೆ ವರ್ತಕರು ಹಣ ನೀಡದೇ ವಂಚಿಸಿದ್ದಾರೆ ಎಂದು ಹಲವು ರೈತರು ದಿವಾಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ರೈತರು ತಮಗೆ ವಂಚನೆಯಾಗಿದೆ ಎಂದು ದೂರು ಸಲ್ಲಿಸಿದ್ದಾರೆ. ಅದರ ಪ್ರಕಾರ ರಾಜ್ಯದ ಮುಖ್ಯಮಂತ್ರಿ ಮತ್ತು ಕೃಷಿ ಸಚಿವರ ತವರು ಜಿಲ್ಲೆಗಳ ರೈತರಿಂದ ವರ್ತಕರು ಬೆಳೆಗಳನ್ನು ಖರೀದಿಸಿ ಚೆಕ್ ನೀಡಿದ್ದಾರೆ. ಆದರೆ ಆ ಚೆಕ್‌ಗಳೆಲ್ಲವೂ ಬೌನ್ಸ್ ಆಗಿವೆ. ದಿವಾಸ್‌ನ ಮಂಡಿಗಳಿಂದ ಅವರಿಗೆ ಅವಧಿ ಮೀರಿದ ಲೈಸೆನ್ಸ್‌ ನೀಡಿದ್ದಾರೆ ಎಂದು ಆರೋಪಿಸಿ ರೈತರು ಮಂಡಿಗೆ ಹೋಗಿ ವಿಚಾರಿಸಿದರೆ ಅಲ್ಲಿಂದ ಅವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ನಾವು ಮಾತುಕತೆಯಾದ ದರಕ್ಕೆ ನಮ್ಮ ಬೆಳೆಗಳನ್ನು ಮಾರಿದ್ದೇವೆ. ಶೆಹೋರ್, ಹರ್ಡಾ, ಹೋಶಾಂಗ್‌ಬಾದ್‌ನ ಹಲವು ರೈತರು ಸಹ ಮಾರಿದ್ದಾರೆ. ಆದರೆ ನಮ್ಮಿಂದ ಬೆಳೆ ಪಡೆದವರು ಹಣ ನೀಡದೆ ಪರಾರಿಯಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಆರೋಪಿಗಳನ್ನು ಬಂಧಿಸಿ, ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ನಮ್ಮ ಹಣ ನೀಡಬೇಕೆಂದು ರೈತರೊಬ್ಬರು ಒತ್ತಾಯಿಸಿದ್ದಾರೆ.

ಹಾರ್ಡಾ, ಗ್ವಾಲಿಯರ್, ಬಮೋರಿ ಸೇರಿದಂತೆ ಹಲವೆಡೆ ನೂರಾರು ರೈತರು ಇದೇ ರೀತಿಯ ದೂರುಗಳನ್ನು ಸಲ್ಲಿಸಿದ್ದಾರೆ.

“ಈಗ ಮೋಸ ಮಾಡಿರುವ ಹಲವು ಕಂಪನಿಗಳು ಈ ಹಿಂದೆ ಮಂಡಿಗಳಲ್ಲಿ ನಮ್ಮಿಂದ ಖರೀದಿಸುತ್ತಿದ್ದರು. ಆದರೆ ಅಲ್ಲಿ ನಮಗೆ ಪಾವತಿಯ ಗ್ಯಾರಂಟಿಯಿತ್ತು. ಆದರೆ ಹೊಸ ಮಾದರಿ ಮಂಡಿ ಕಾಯ್ದೆಗಳಿಂದ ಆ ಗ್ಯಾರಂಟಿ ಇಲ್ಲವಾಗಿದೆ” ಎಂದು ರೈತರು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಸಚಿವ ಕಮಲ್ ಪಟೇಲ್ “ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಮತ್ತು ರೈತರಿಗೆ ಅವರ ಹಣವನ್ನು ಮರಳಿ ಕೊಡಿಸಲಾಗುತ್ತದೆ. ಇನ್ನು ಮುಂದೆ ರೈತರು ಕೇವಲ ನಗದು ವ್ಯವಹಾರದಲ್ಲಿ ಮಾತ್ರ ತಮ್ಮ ಬೆಳೆಗಳನ್ನು ಮಾರಬೇಕು. ಅದು ಕಷ್ಟವಾದರೂ ಸಾಧ್ಯ” ಎಂದಿದ್ದಾರೆ.

ಈ ಪ್ರಕರಣದಲ್ಲಿ ನ್ಯಾಯಾಲಯ ನಮ್ಮ ಪರವಿರುತ್ತದೆ ಎಂದು ಹೇಳಲು ಬರುವುದಿಲ್ಲ. ಸರ್ಕಾರ ರಚಿಸುವ ಸಮಿತಿಯು ನೀಡುವ ಪರಿಹಾರವನ್ನು ಸ್ವೀಕರಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಗಳಿಲ್ಲ ಎಂದು ರೈತರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಈ ಕೃಷಿ ಕಾಯ್ದೆಗಳಿಂದ ನಿಧಾನವಾಗಿ ಮಂಡಿಗಳು ನಶಿಸುವುದರಿಂದ ರೈತರು ವರ್ತಕರು ಕೇಳಿದ ಬೆಲೆಗೆ, ಅವರು ಕೊಡುವ ಚೆಕ್ ಅಥವಾ ಮತ್ತಿತರ ವಿಧಾನಗಳ ಮೂಲಕವೇ ಮಾರಬೇಕಾದ ಪರಿಸ್ಥಿತಿ ರೈತರಿಗೆ ಬರುತ್ತದೆ ಎಂಬುದನ್ನು ಈ ಮೇಲಿನ ಪ್ರಕರಣಗಳು ಸೂಚಿಸುತ್ತವೆ. ಏಕೆಂದರೆ ರೈತರ ಬಳಿ ಬೆಳೆಗಳನ್ನು ಹಲವು ದಿನ ಇಟ್ಟುಕೊಳ್ಳುವ ವ್ಯವಸ್ಥೆ ಇಲ್ಲ. ಇದು ದೊಡ್ಡ ದೊಡ್ಡ ಕಾರ್ಪೊರೇಟ್‌ಗಳಿಗಷ್ಟೇ ಲಾಭ ತಂದುಕೊಡುತ್ತದೆ ಎಂಬುದು ರೈತರ ಆರೋಪ.


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...