Homeಮುಖಪುಟಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

"ರೈತರನ್ನು ಟೆರರಿಸ್ಟ್ ಎಂದ ಕಂಗನಾ ಹೊಟ್ಟೆಗೆ ತಿನ್ನೋದು ರೈತರು ಬೆಳೆದ ಅನ್ನ ಮತ್ತು ತರಕಾರಿಯನ್ನೇ!" ಎಂದು ಯುವ ಹೋರಾಟಗಾರ ಸರೋವರ್ ಬೆಂಕಿಕೆರೆ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ವಿವಾದಕ್ಕೆ ಒಳಗಾಗಿದ್ದ ನಟಿ ಕಂಗನಾ ರಾಣಾವತ್ ಈಗ ಕೃಷಿ ಮಸೂದೆಗಳನ್ನು ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದು ಕರೆಯುವ ಮೂಲಕ ಮತ್ತೆ ವಿವಾದಿತ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕೃಷಿ ಮಸೂದೆಗಳ ಬಗ್ಗೆ ಪ್ರಧಾನಿ ಮೋದಿಯವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ನಟಿ ಕಂಗನಾ ರಾಣಾವತ್ ‘ಮಸೂದೆಗಳನ್ನು ಪ್ರತಿಭಟಿಸುವ ರೈತರನ್ನು ಭಯೋತ್ಪಾದಕರು’ ಎಂದಿದ್ದಾರೆ.

ಕಂಗನಾ ಮಾಡಿದ ಟ್ವೀಟ್‌ನಲ್ಲಿ, “ಪ್ರಧಾನಿ ಮೋದಿಜೀ, ನಿದ್ರಿಸುತ್ತಿರುವವರನ್ನು ಎಚ್ಚರಗೊಳಿಸಬಹುದು. ತಪ್ಪು ತಿಳವಳಿಕೆ ಇದ್ದರೇ ಅದನ್ನು ಪರಿಹರಿಸಬಹುದು. ಆದರೆ ನಿದ್ದೆ ಮಾಡುವಂತೆ ನಟಿಸುವವರ, ಅರ್ಥ ಮಾಡಿಕೊಳ್ಳದಂತೆ ನಟಿಸುವವರರಿಗೆ ನೀವು ತಿಳಿಸಲು ಪ್ರಯತ್ನಸಿದರೆ ಏನು ಪ್ರಯೋಜನ..? ಇವರು ಅದೇ ಭಯೋತ್ಪಾದಕರು. ಸಿಎಎಯಿಂದ ಯಾರು ಪೌರತ್ವ ಕಳೆದುಕೊಳ್ಳದಿದ್ದರೂ ರಕ್ತದ ಕೋಡಿ ಹರಿಸಿದವರು” ಎಂದಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ಸಂಸತ್ತಿನಲ್ಲಿ ಅಂಗೀಕಾರವಾದ ಕೃಷಿ ಸುಗ್ರಿವಾಜ್ಞೆಗಳ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇವು ರೈತವಿರೋಧಿ ಕಾಯ್ದೆಗಳಾಗಿದ್ದು ಕಾರ್ಪೋರೇಟ್ ಕಂಪನಿಗಳ ಪರವಾಗಿವೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ರೈತರು ಮತ್ತು ವಿಮರ್ಶಕರ ಪ್ರಕಾರ ಈ ಮಸೂದೆಗಳು ಆಹಾರ ಭದ್ರತೆಯನ್ನು ಹಾಳುಮಾಡುತ್ತವೆ. ಈ ಹಿಂದೆ ಇದ್ದ ಕನಿಷ್ಟ ಬೆಂಬಲ ಬೆಲೆಯನ್ನು ನಾಶಗೊಳಿಸಿ, ವ್ಯಾಪಾರಿಗಳಿಗೆ ಲಾಭವನ್ನು ನೀಡುತ್ತವೆಯೇ ಹೊರತು ರೈತರಿಗಲ್ಲ ಎನ್ನುತ್ತಾರೆ. ಜೊತೆಗೆ ಬೆಲೆ ನಿಗದಿಗಾಗಿ ಯಾವುದೇ ಕಾರ್ಯವಿಧಾನವಿಲ್ಲ ಎಂದು ಆಕ್ಷೇಪಿಸಿದ್ದಾರೆ.

ದೇಶದಾದ್ಯಂತ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಪಂಜಾಬ್‌ನಲ್ಲಿ ಓರ್ವ ರೈತ ಮೃತಪಟ್ಟಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕಂಗನಾರ ಹೇಳಿಕೆ ರೈತರ ಆಕ್ರೋಶವನ್ನು ಇನ್ನಷ್ಟು ಹೆಚ್ಚಿಸಿವೆ.

ಇದನ್ನೂ ಓದಿ: ಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

“ಮುಷ್ಕರ ನಿರತ ಪಂಜಾಬ್ ನ ರೈತರನ್ನ ಟೆರರಿಸ್ಟ್ ಎಂದು ಕರೆದ ಬಿಜೆಪಿಯ ಅಘೋಷಿತ ಪ್ರವಕ್ತಾ ಪದ್ಮಶ್ರಿ ಕಂಗನಾ ರಾಣಾವತ್ ಅವರಿಗೆ ವೈ ಪ್ಲಸ್ (Y+) ಭದ್ರತೆ ನೀಡಿದರ ಬಗ್ಗೆ ಭಕ್ತರ ಅಭಿಪ್ರಾಯ ಏನು” ಎಂದು ಕವಿ ಚಿದಂಬರ ನರೇಂದ್ರ ಪ್ರಶ್ನಿಸಿದ್ದಾರೆ.

“ರೈತರನ್ನು ಟೆರರಿಸ್ಟ್ ಎಂದ ಕಂಗನಾ ಹೊಟ್ಟೆಗೆ ತಿನ್ನೋದು ರೈತರು ಬೆಳೆದ ಅನ್ನ ಮತ್ತು ತರಕಾರಿಯನ್ನೇ!” ಎಂದು ಯುವ ಹೋರಾಟಗಾರ ಸರೋವರ್ ಬೆಂಕಿಕೆರೆ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...