Homeಮುಖಪುಟ’ಕೃಷಿ ಮಸೂದೆ’ಗೆ ರೈತ ಬಲಿ: ಕಾಯ್ದೆಗಳ ಬಗ್ಗೆ ಹರ್ಸಿಮ್ರತ್ ಕೌರ್‌ ಯೂಟರ್ನ್!

’ಕೃಷಿ ಮಸೂದೆ’ಗೆ ರೈತ ಬಲಿ: ಕಾಯ್ದೆಗಳ ಬಗ್ಗೆ ಹರ್ಸಿಮ್ರತ್ ಕೌರ್‌ ಯೂಟರ್ನ್!

ನಾನು ಅವುಗಳನ್ನು ರೈತ ವಿರೋಧಿ ಮಸೂದೆಗಳು ಎಂದು ಕರೆಯುತ್ತಿಲ್ಲ. ರೈತರು ಅವನ್ನು ರೈತ ವಿರೋಧಿ ಎಂದು ಕರೆಯುತ್ತಿದ್ದಾರೆ. ರೈತರ ಅನುಕೂಲಕ್ಕಾಗಿ ಮಸೂದೆಗಳು ಬಂದಿವೆ - ಹರ್ಸಿಮ್ರತ್ ಕೌರ್ ಬಾದಲ್

- Advertisement -
- Advertisement -

ಕೃಷಿ ಮಸೂದೆಗಳ ಅಂಗೀಕಾರದ ವಿರುದ್ಧ ಪಂಜಾಬ್‌ನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದ್ದು, ಇಂದು 70 ವರ್ಷದ ರೈತರೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಮಾನ್ಸಾ ಜಿಲ್ಲೆಯ ಅಕ್ಕನ್‌ವಾಲಿ ಗ್ರಾಮದ ನಿವಾಸಿ ಪ್ರೀತಮ್ ಸಿಂಗ್ ಪ್ರತಿಭಟನೆಯಲ್ಲಿ ನಿನ್ನೆ ವಿಷ ಸೇವಿಸಿದ್ದರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 15 ರಿಂದ ಪಂಜಾಬ್‌ನ ಮುಕ್ತರ್‌ ಜಿಲ್ಲೆಯ ಬಾದಲ್ ಗ್ರಾಮದಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಹಣ್) ಆಯೋಜಿಸಿರುವ ಪ್ರತಿಭಟನೆಯಲ್ಲಿ ಪ್ರೀತಮ್ ಸಿಂಗ್ ಭಾಗವಹಿಸುತ್ತಿದ್ದರು. ಬಾದಲ್ ಗ್ರಾಮ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಸ್ವಗ್ರಾಮ.

ಆಡಳಿತವು ಮೃತರ ಕುಟುಂಬಕ್ಕೆ ಪರಿಹಾರವನ್ನು ನೀಡುವಂತೆ ಏಕ್ತಾ ಉಗ್ರಾಹಣ್ ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಒತ್ತಾಯಿಸಿದ್ದಾರೆ. ಪಂಜಾಬ್‌ನಲ್ಲಿ ಕಿಸಾನ್ ಮಜ್ದೂರ್‌ ಸಂಘರ್ಷ್ ಸಂಘಟನೆ ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 26 ರವರೆಗೆ ರಾಜ್ಯಾದ್ಯಂತ ‘ರೈಲ್ ರೋಕೊ’ ಆಂದೋಲನಕ್ಕೆ ಕರೆ ನೀಡಿದೆ. ಇತರ ರೈತ ಸಂಘಟನೆಗಳು ಸೆಪ್ಟೆಂಬರ್ 25ಕ್ಕೆ ಪಂಜಾಬ್ ಬಂದ್‌ಗೆ ಕರೆ ನೀಡಿವೆ.

ದೇಶದಲ್ಲಿ ಕಳೆದ ಒಂದು ವಾರದಿಂದ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಹೊಸ ಕೃಷಿ ಮಸೂದೆಗಳು ರೈತರನ್ನು, ಕೃಷಿ ಕ್ಷೇತ್ರವನ್ನು ಕಾಪೋರೇಟ್ ಶಕ್ತಿಗಳ ಸೆರೆಯಾಗುವಂತೆ ಮಾಡುತ್ತವೆ ಎಂದು ಆರೋಪಿಸಿವೆ.

ಇದನ್ನೂ ಓದಿ: ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ: ಪ್ರಧಾನಿ ಮೋದಿ

ಈ ನಡುವೆ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜೀನಾಮೆ ನೀಡಿದ್ದ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸಂಸದೆ ಮತ್ತು ಮಾಜಿ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ತಮ್ಮ ಹೇಳಿಕೆಯಲ್ಲಿ ಯೂಟರ್ನ್‌ ಹೊಡೆದಿದ್ದಾರೆ.

ಇಂಡಿಯಾ ಟುಡೇ ಸಂದರ್ಶನದಲ್ಲಿ ಮಾತನಾಡಿದ ಹರ್ಸಿಮ್ರತ್ ಕೌರ್ ಬಾದಲ್ ಈ ಮೂರು ಮಸೂದೆಗಳನ್ನು “ರೈತ ವಿರೋಧಿ” ಎಂದು ಕರೆಯುತ್ತಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

“ನಾನು ಅವುಗಳನ್ನು ರೈತ ವಿರೋಧಿ ಮಸೂದೆಗಳು ಎಂದು ಕರೆಯುತ್ತಿಲ್ಲ. ರೈತರು ಅವರನ್ನು ರೈತ ವಿರೋಧಿ ಎಂದು ಕರೆಯುತ್ತಿದ್ದಾರೆ. ರೈತರ ಅನುಕೂಲಕ್ಕಾಗಿ ಮಸೂದೆಗಳು ಬಂದಿವೆ. ಅದು ಅವರ ಲಾಭದಲ್ಲಿದೆ ಎಂದು ರೈತರು ನಂಬಬೇಕು” ಎಂದಿದ್ದಾರೆ.

ಆದರೆ, ಗುರುವಾರ ರಾಜೀನಾಮೆ ಘೋಷಿಸಿದ ನಂತರ, ಹರ್ಸಿಮ್ರತ್ ಕೌರ್ ಬಾದಲ್ “ರೈತ ವಿರೋಧಿ ಸುಗ್ರೀವಾಜ್ಞೆಗಳು ಮತ್ತು ಶಾಸನಗಳನ್ನು ವಿರೋಧಿಸಿ ನಾನು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...