Homeಮುಖಪುಟ’ಕೃಷಿ ಮಸೂದೆ’ಗೆ ರೈತ ಬಲಿ: ಕಾಯ್ದೆಗಳ ಬಗ್ಗೆ ಹರ್ಸಿಮ್ರತ್ ಕೌರ್‌ ಯೂಟರ್ನ್!

’ಕೃಷಿ ಮಸೂದೆ’ಗೆ ರೈತ ಬಲಿ: ಕಾಯ್ದೆಗಳ ಬಗ್ಗೆ ಹರ್ಸಿಮ್ರತ್ ಕೌರ್‌ ಯೂಟರ್ನ್!

ನಾನು ಅವುಗಳನ್ನು ರೈತ ವಿರೋಧಿ ಮಸೂದೆಗಳು ಎಂದು ಕರೆಯುತ್ತಿಲ್ಲ. ರೈತರು ಅವನ್ನು ರೈತ ವಿರೋಧಿ ಎಂದು ಕರೆಯುತ್ತಿದ್ದಾರೆ. ರೈತರ ಅನುಕೂಲಕ್ಕಾಗಿ ಮಸೂದೆಗಳು ಬಂದಿವೆ - ಹರ್ಸಿಮ್ರತ್ ಕೌರ್ ಬಾದಲ್

- Advertisement -
- Advertisement -

ಕೃಷಿ ಮಸೂದೆಗಳ ಅಂಗೀಕಾರದ ವಿರುದ್ಧ ಪಂಜಾಬ್‌ನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದ್ದು, ಇಂದು 70 ವರ್ಷದ ರೈತರೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಮಾನ್ಸಾ ಜಿಲ್ಲೆಯ ಅಕ್ಕನ್‌ವಾಲಿ ಗ್ರಾಮದ ನಿವಾಸಿ ಪ್ರೀತಮ್ ಸಿಂಗ್ ಪ್ರತಿಭಟನೆಯಲ್ಲಿ ನಿನ್ನೆ ವಿಷ ಸೇವಿಸಿದ್ದರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 15 ರಿಂದ ಪಂಜಾಬ್‌ನ ಮುಕ್ತರ್‌ ಜಿಲ್ಲೆಯ ಬಾದಲ್ ಗ್ರಾಮದಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಹಣ್) ಆಯೋಜಿಸಿರುವ ಪ್ರತಿಭಟನೆಯಲ್ಲಿ ಪ್ರೀತಮ್ ಸಿಂಗ್ ಭಾಗವಹಿಸುತ್ತಿದ್ದರು. ಬಾದಲ್ ಗ್ರಾಮ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಸ್ವಗ್ರಾಮ.

ಆಡಳಿತವು ಮೃತರ ಕುಟುಂಬಕ್ಕೆ ಪರಿಹಾರವನ್ನು ನೀಡುವಂತೆ ಏಕ್ತಾ ಉಗ್ರಾಹಣ್ ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಒತ್ತಾಯಿಸಿದ್ದಾರೆ. ಪಂಜಾಬ್‌ನಲ್ಲಿ ಕಿಸಾನ್ ಮಜ್ದೂರ್‌ ಸಂಘರ್ಷ್ ಸಂಘಟನೆ ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 26 ರವರೆಗೆ ರಾಜ್ಯಾದ್ಯಂತ ‘ರೈಲ್ ರೋಕೊ’ ಆಂದೋಲನಕ್ಕೆ ಕರೆ ನೀಡಿದೆ. ಇತರ ರೈತ ಸಂಘಟನೆಗಳು ಸೆಪ್ಟೆಂಬರ್ 25ಕ್ಕೆ ಪಂಜಾಬ್ ಬಂದ್‌ಗೆ ಕರೆ ನೀಡಿವೆ.

ದೇಶದಲ್ಲಿ ಕಳೆದ ಒಂದು ವಾರದಿಂದ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಹೊಸ ಕೃಷಿ ಮಸೂದೆಗಳು ರೈತರನ್ನು, ಕೃಷಿ ಕ್ಷೇತ್ರವನ್ನು ಕಾಪೋರೇಟ್ ಶಕ್ತಿಗಳ ಸೆರೆಯಾಗುವಂತೆ ಮಾಡುತ್ತವೆ ಎಂದು ಆರೋಪಿಸಿವೆ.

ಇದನ್ನೂ ಓದಿ: ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ: ಪ್ರಧಾನಿ ಮೋದಿ

ಈ ನಡುವೆ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜೀನಾಮೆ ನೀಡಿದ್ದ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸಂಸದೆ ಮತ್ತು ಮಾಜಿ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ತಮ್ಮ ಹೇಳಿಕೆಯಲ್ಲಿ ಯೂಟರ್ನ್‌ ಹೊಡೆದಿದ್ದಾರೆ.

ಇಂಡಿಯಾ ಟುಡೇ ಸಂದರ್ಶನದಲ್ಲಿ ಮಾತನಾಡಿದ ಹರ್ಸಿಮ್ರತ್ ಕೌರ್ ಬಾದಲ್ ಈ ಮೂರು ಮಸೂದೆಗಳನ್ನು “ರೈತ ವಿರೋಧಿ” ಎಂದು ಕರೆಯುತ್ತಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

“ನಾನು ಅವುಗಳನ್ನು ರೈತ ವಿರೋಧಿ ಮಸೂದೆಗಳು ಎಂದು ಕರೆಯುತ್ತಿಲ್ಲ. ರೈತರು ಅವರನ್ನು ರೈತ ವಿರೋಧಿ ಎಂದು ಕರೆಯುತ್ತಿದ್ದಾರೆ. ರೈತರ ಅನುಕೂಲಕ್ಕಾಗಿ ಮಸೂದೆಗಳು ಬಂದಿವೆ. ಅದು ಅವರ ಲಾಭದಲ್ಲಿದೆ ಎಂದು ರೈತರು ನಂಬಬೇಕು” ಎಂದಿದ್ದಾರೆ.

ಆದರೆ, ಗುರುವಾರ ರಾಜೀನಾಮೆ ಘೋಷಿಸಿದ ನಂತರ, ಹರ್ಸಿಮ್ರತ್ ಕೌರ್ ಬಾದಲ್ “ರೈತ ವಿರೋಧಿ ಸುಗ್ರೀವಾಜ್ಞೆಗಳು ಮತ್ತು ಶಾಸನಗಳನ್ನು ವಿರೋಧಿಸಿ ನಾನು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...