Homeಮುಖಪುಟ’ಕೃಷಿ ಮಸೂದೆ’ಗೆ ರೈತ ಬಲಿ: ಕಾಯ್ದೆಗಳ ಬಗ್ಗೆ ಹರ್ಸಿಮ್ರತ್ ಕೌರ್‌ ಯೂಟರ್ನ್!

’ಕೃಷಿ ಮಸೂದೆ’ಗೆ ರೈತ ಬಲಿ: ಕಾಯ್ದೆಗಳ ಬಗ್ಗೆ ಹರ್ಸಿಮ್ರತ್ ಕೌರ್‌ ಯೂಟರ್ನ್!

ನಾನು ಅವುಗಳನ್ನು ರೈತ ವಿರೋಧಿ ಮಸೂದೆಗಳು ಎಂದು ಕರೆಯುತ್ತಿಲ್ಲ. ರೈತರು ಅವನ್ನು ರೈತ ವಿರೋಧಿ ಎಂದು ಕರೆಯುತ್ತಿದ್ದಾರೆ. ರೈತರ ಅನುಕೂಲಕ್ಕಾಗಿ ಮಸೂದೆಗಳು ಬಂದಿವೆ - ಹರ್ಸಿಮ್ರತ್ ಕೌರ್ ಬಾದಲ್

- Advertisement -
- Advertisement -

ಕೃಷಿ ಮಸೂದೆಗಳ ಅಂಗೀಕಾರದ ವಿರುದ್ಧ ಪಂಜಾಬ್‌ನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದ್ದು, ಇಂದು 70 ವರ್ಷದ ರೈತರೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಮಾನ್ಸಾ ಜಿಲ್ಲೆಯ ಅಕ್ಕನ್‌ವಾಲಿ ಗ್ರಾಮದ ನಿವಾಸಿ ಪ್ರೀತಮ್ ಸಿಂಗ್ ಪ್ರತಿಭಟನೆಯಲ್ಲಿ ನಿನ್ನೆ ವಿಷ ಸೇವಿಸಿದ್ದರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 15 ರಿಂದ ಪಂಜಾಬ್‌ನ ಮುಕ್ತರ್‌ ಜಿಲ್ಲೆಯ ಬಾದಲ್ ಗ್ರಾಮದಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಹಣ್) ಆಯೋಜಿಸಿರುವ ಪ್ರತಿಭಟನೆಯಲ್ಲಿ ಪ್ರೀತಮ್ ಸಿಂಗ್ ಭಾಗವಹಿಸುತ್ತಿದ್ದರು. ಬಾದಲ್ ಗ್ರಾಮ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಸ್ವಗ್ರಾಮ.

ಆಡಳಿತವು ಮೃತರ ಕುಟುಂಬಕ್ಕೆ ಪರಿಹಾರವನ್ನು ನೀಡುವಂತೆ ಏಕ್ತಾ ಉಗ್ರಾಹಣ್ ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಒತ್ತಾಯಿಸಿದ್ದಾರೆ. ಪಂಜಾಬ್‌ನಲ್ಲಿ ಕಿಸಾನ್ ಮಜ್ದೂರ್‌ ಸಂಘರ್ಷ್ ಸಂಘಟನೆ ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 26 ರವರೆಗೆ ರಾಜ್ಯಾದ್ಯಂತ ‘ರೈಲ್ ರೋಕೊ’ ಆಂದೋಲನಕ್ಕೆ ಕರೆ ನೀಡಿದೆ. ಇತರ ರೈತ ಸಂಘಟನೆಗಳು ಸೆಪ್ಟೆಂಬರ್ 25ಕ್ಕೆ ಪಂಜಾಬ್ ಬಂದ್‌ಗೆ ಕರೆ ನೀಡಿವೆ.

ದೇಶದಲ್ಲಿ ಕಳೆದ ಒಂದು ವಾರದಿಂದ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಹೊಸ ಕೃಷಿ ಮಸೂದೆಗಳು ರೈತರನ್ನು, ಕೃಷಿ ಕ್ಷೇತ್ರವನ್ನು ಕಾಪೋರೇಟ್ ಶಕ್ತಿಗಳ ಸೆರೆಯಾಗುವಂತೆ ಮಾಡುತ್ತವೆ ಎಂದು ಆರೋಪಿಸಿವೆ.

ಇದನ್ನೂ ಓದಿ: ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ: ಪ್ರಧಾನಿ ಮೋದಿ

ಈ ನಡುವೆ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜೀನಾಮೆ ನೀಡಿದ್ದ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸಂಸದೆ ಮತ್ತು ಮಾಜಿ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ತಮ್ಮ ಹೇಳಿಕೆಯಲ್ಲಿ ಯೂಟರ್ನ್‌ ಹೊಡೆದಿದ್ದಾರೆ.

ಇಂಡಿಯಾ ಟುಡೇ ಸಂದರ್ಶನದಲ್ಲಿ ಮಾತನಾಡಿದ ಹರ್ಸಿಮ್ರತ್ ಕೌರ್ ಬಾದಲ್ ಈ ಮೂರು ಮಸೂದೆಗಳನ್ನು “ರೈತ ವಿರೋಧಿ” ಎಂದು ಕರೆಯುತ್ತಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

“ನಾನು ಅವುಗಳನ್ನು ರೈತ ವಿರೋಧಿ ಮಸೂದೆಗಳು ಎಂದು ಕರೆಯುತ್ತಿಲ್ಲ. ರೈತರು ಅವರನ್ನು ರೈತ ವಿರೋಧಿ ಎಂದು ಕರೆಯುತ್ತಿದ್ದಾರೆ. ರೈತರ ಅನುಕೂಲಕ್ಕಾಗಿ ಮಸೂದೆಗಳು ಬಂದಿವೆ. ಅದು ಅವರ ಲಾಭದಲ್ಲಿದೆ ಎಂದು ರೈತರು ನಂಬಬೇಕು” ಎಂದಿದ್ದಾರೆ.

ಆದರೆ, ಗುರುವಾರ ರಾಜೀನಾಮೆ ಘೋಷಿಸಿದ ನಂತರ, ಹರ್ಸಿಮ್ರತ್ ಕೌರ್ ಬಾದಲ್ “ರೈತ ವಿರೋಧಿ ಸುಗ್ರೀವಾಜ್ಞೆಗಳು ಮತ್ತು ಶಾಸನಗಳನ್ನು ವಿರೋಧಿಸಿ ನಾನು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...