Homeಮುಖಪುಟಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ಕೃಷಿ ಮಸೂದೆಗಳ ಬಗ್ಗೆ ಮಾತಾಡಿದ್ದಕ್ಕಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ನನ್ನನ್ನು ಪಾಕಿಸ್ತಾನಿ ಎಂದು ಕರೆದರು. - ಮಾಲ್ವಿಂದರ್ ಸಿಂಗ್ ಕಾಂಗ್

- Advertisement -
- Advertisement -

ಭಾರತೀಯ ಜನತಾ ಪಾರ್ಟಿಯ ಪಂಜಾಬ್‌ನ ಕೆಲವೇ ಕೆಲವು ಸಿಖ್ ಮುಖಂಡರುಗಳಲ್ಲಿ ಒಬ್ಬರಾದ ಪಂಜಾಬ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲ್ವಿಂದರ್ ಸಿಂಗ್ ಕಾಂಗ್ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಷ್ಟ್ರವ್ಯಾಪಿ ತೀವ್ರ ಟೀಕೆಗೆ ಗುರಿಯಾಗಿರುವ ಕೃಷಿ ಕಾನೂನುಗಳ ಬಗ್ಗೆ ಚರ್ಚಿಸಲು ಬಿಜೆಪಿಯಲ್ಲಿ ಯಾರೂ ಸಿದ್ಧರಿಲ್ಲ, ಜೊತೆಗೆ ಪಕ್ಷದ ಹಿರಿಯ ನಾಯಕರು ಪಂಜಾಬ್ ಪರ ಮನೋಭಾವವನ್ನು ಹೊಂದಿಲ್ಲ ಎಂದು ಮಾಲ್ವಿಂದರ್ ಸಿಂಗ್ ಕಾಂಗ್ ಹೇಳಿದ್ದಾರೆ.

“ಸುಗ್ರೀವಾಜ್ಞೆಗಳನ್ನು ಅಂಗೀಕರಿಸಿದಾಗ ನಾನು ರೈತರ ಪ್ರತಿಭಟನೆಯ ವಿಷಯವನ್ನು ಎತ್ತಿದ್ದೇನೆ. ಪಕ್ಷದ ಪ್ರಮುಖ ಸಮಿತಿಯ ಸದಸ್ಯನಾಗಿ, ಪ್ರತಿ ಸಭೆಯಲ್ಲೂ ನಾನು ಕೃಷಿ ಮಸೂದೆಗಳ ಬಗ್ಗೆ ಮಾತಾಡುವ ಪ್ರಯತ್ನ ಮಾಡಿದ್ದೇನೆ. ಆದರೆ ಪಕ್ಷದಲ್ಲಿ ನನ್ನನ್ನು ದೂಷಿಸಲಾಯಿತು” ಎಂದಿದ್ದಾರೆ.

“ಕೃಷಿ ಮಸೂದೆಗಳ ಬಗ್ಗೆ ಮಾತಾಡಿದ್ದಕ್ಕಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ನನ್ನನ್ನು ಪಾಕಿಸ್ತಾನಿ ಎಂದು ಕರೆದರು. ಅವರ ಭಾಷಾಪ್ರಯೋಗದ ವಿರುದ್ಧ ನಾನು ಪ್ರತಿಭಟಿಸಿದಾಗ ಅವರು ಕ್ಷಮೆಯಾಚಿಸಬೇಕಾಯಿತು. ರೈತರ ಪರವಾಗಿ ಮಾತನಾಡುವವರ ಬಗ್ಗೆ ಬಿಜೆಪಿ ಈ ರೀತಿಯ ಮನೋಭಾವವನ್ನು ಹೊಂದಿದೆ ”ಎಂದು ಕಾಂಗ್ ಹೇಳಿದ್ದಾರೆ.

ಇದನ್ನೂ ಓದಿ: ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾಗಿದ್ದ ಕಾಂಗ್, ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಾಗಿ ಬಂದವರು. ಕೆಲವೇ ವರ್ಷಗಳಲ್ಲಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಏರಿದ್ದರು. ಪಂಜಾಬ್‌ನಲ್ಲಿ ಬಿಜೆಪಿ ಹೊಂದಿದ್ದ ಬೆರಳೆಣಿಕೆಯಷ್ಟು ಸಿಖ್ ನಾಯಕರಲ್ಲಿ ಅವರು ಕೂಡ ಒಬ್ಬರು.

“ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಪಕ್ಷದ ಪ್ರಮುಖ ಗುಂಪಿನ ಸದಸ್ಯರಾಗಿ, ಪಕ್ಷದ ವೇದಿಕೆಯಲ್ಲಿ ಪ್ರತಿಭಟನಾ ನಿರತ ರೈತರು, ಸಣ್ಣ ವ್ಯಾಪಾರಿಗಳು ಮತ್ತು ಕಾರ್ಮಿಕ ಸಂಘಟನೆಗಳನ್ನು ಬೆಂಬಲಿಸಿ ನಾನು ಧ್ವನಿ ಎತ್ತಿದೆ. ರೈತರ ಆಂದೋಲನವನ್ನು ಬೆಂಬಲಿಸುವ ಸಲುವಾಗಿ ನಾನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ, ”ಎಂದು ಹೇಳಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಅಶ್ವನಿ ಶರ್ಮಾ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, “ಕೇಂದ್ರ ಸರ್ಕಾರವು ಅಂಗೀಕರಿಸಿದ ಹೊಸ ಕಾಯಿದೆಗಳ ವಿರುದ್ಧ ರೈತರು, ಸಣ್ಣ ವ್ಯಾಪಾರಿಗಳು ಮತ್ತು ಕಾರ್ಮಿಕ ಸಂಘಟನೆಗಳು ಪ್ರಜಾಸತ್ತಾತ್ಮಕವಾಗಿ ಮತ್ತು ಸರಿಯಾಗಿ ಪ್ರತಿಭಟಿಸುತ್ತಿವೆ” ಎಂದು ಹೇಳಿದ್ದಾರೆ.

ಕಾಂಗ್ ಅವರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಅಶ್ವನಿ ಶರ್ಮಾ, ತಮ್ಮ ರಾಜಕೀಯ ಮಾರ್ಗವನ್ನು ಆಯ್ಕೆ ಮಾಡುವ ಹಕ್ಕು ಎಲ್ಲರಿಗೂ ಇದೆ ಎಂದು ಹೇಳಿದ್ದಾರೆ. “ಆದರೆ ಅವರ ಹಕ್ಕುಗಳಿಗೆ ಸಂಬಂಧಿಸಿದಂತೆ, ಎಲ್ಲಾ ವೇದಿಕೆಗಳಲ್ಲಿ ಧ್ವನಿ ಎತ್ತಬಹುದಾದ ಏಕೈಕ ಪಕ್ಷ ಬಿಜೆಪಿ. ಆದರೆ ಪಕ್ಷವು ಎಲ್ಲಾ ಧ್ವನಿಗಳನ್ನು ಒಪ್ಪಿಕೊಳ್ಳುವುದು ಅನಿವಾರ್ಯವಲ್ಲ” ಎಂದಿದ್ದಾರೆ.

ಹೊಸ ಕಾನೂನುಗಳು ರೈತರ ಪರವಾಗಿವೆ ಎಂದು ಮನವರಿಕೆ ಮಾಡಿಕೊಡಲು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಪಂಜಾಬ್‌ನಲ್ಲಿ ಮಾತುಕತೆ ನಡೆಸಲು ತನ್ನ ಹಲವಾರು ಮಂತ್ರಿಗಳನ್ನು ನಿಯೋಜಿಸಿರುವ ಸಮಯದಲ್ಲಿ ಕಾಂಗ್ ರಾಜೀನಾಮೆ ನೀಡಿದ್ದಾರೆ.


ಇದನ್ನೂ ಓದಿ: ರೈತರನ್ನು ಸಭೆಗೆ ಕರೆದ ಕೇಂದ್ರದ ಕೃಷಿ ಸಚಿವರೇ ನಾಪತ್ತೆ: ಮಸೂದೆ ಹರಿದು ರೈತರ ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...