ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಮಸೂದೆಗಳ ವಿರುದ್ದ ದೇಶಾದ್ಯಂತ ಭಾರತ್ ಬಂದ್ಗೆ ಕರೆ ನೀಡಲಾಗಿತ್ತು. ರಾಜ್ಯದಲ್ಲೂ ಕೃಷಿ ಮಸೂದೆಗಳು ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ರೈತರು ಬೀದಿಗಿಳಿದಿದ್ದಾರೆ. ಪಂಜಾಬ್ನಲ್ಲಿ ‘ರೈಲ್ ರೋಕೋ’ ಚಳುವಳಿ ನಡೆಸುತ್ತಿದ್ದಾರೆ.
ಇಂದು ಸಂಜೆ ಮುಖ್ಯಮಂತ್ರಿಗಳು ಮತ್ತು ರೈತ ಮುಖಂಡರ ಸಭೆ ನಡೆದಿದ್ದು, ರೈತರ ಮನವೊಲಿಸುವಲ್ಲಿ ಸಿಎಂ ವಿಫಲರಾಗಿದ್ದಾರೆ. ಹಾಗಾಗಿ ರೈತನಾಯಕರು ಎಪಿಎಂಸಿ, ಭೂಸುಧಾರಣಾ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದಿದ್ದು, ಸೆ.28ರಂದು ಕರ್ನಾಟಕ ಬಂದ್ ನಡೆಸಲು ನಿರ್ಧಾರ ಕೈಗೊಂಡಿದ್ದಾರೆ. ಯಡಿಯೂರಪ್ಪ ಅವರು ಬಿಲ್ಗಳನ್ನು ವಾಪಸ್ ಪಡೆಯುವ ಬಗ್ಗೆ ಯಾವುದೇ ಭರವಸೆ ನೀಡಲಿಲ್ಲ. ಅವರು ಪ್ರಧಾನಿ ಮೋದಿ ಮಾತು ಮೀರಲು ಸಿದ್ಧರಿಲ್ಲ. ಹಾಗಾಗಿ ನಾವು ಸೋಮವಾರ ಬಂದ್ ನಡೆಸುತ್ತೇವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ಅನ್ನದಾತ ರೈತರ ಹಿತರಕ್ಷಣೆ ಮತ್ತು ಸುಧಾರಣೆ ನಿಟ್ಟಿನಲ್ಲಿ ರಾಜ್ಯಸರ್ಕಾರ ಸಂಪೂರ್ಣ ಬದ್ಧವಾಗಿದೆ. ರೈತ ಮುಖಂಡರೊಂದಿಗೆ ಅವರ ಬೇಡಿಕೆಗಳ ಕುರಿತು ಇಂದು ವಿಧಾನಸೌಧದಲ್ಲಿ ಚರ್ಚೆ ನಡೆಸಲಾಯಿತು.
ಕಂದಾಯ ಸಚಿವರು, ಕೃಷಿ ಸಚಿವರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/VWkPBJKR1c
— B.S. Yediyurappa (@BSYBJP) September 25, 2020
ಇದನ್ನೂ ಓದಿ: ಸೆ.27 ರಂದು ಉಡುಪಿಯಲ್ಲಿ ‘ಪೂನಾ ಒಪ್ಪಂದ ದಿನ’ದ ನೆನಪಿನ ಕಾರ್ಯಕ್ರಮ
ಇತ್ತ ಮಸೂದೆಗಳಿಗೆ ತೀವ್ರ ವಿರೋಧ ಮತ್ತು ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆಸುತ್ತಿರುವ ಪಂಜಾಬ್ನಲ್ಲಿ ರೈಲು ಹಳಿಗಳ ಮೇಲೆ ಕುಳಿತು ರೈಲ್ ರೋಕೋ ಚಳವಳಿ ನಡೆಸುತ್ತಿದ್ದಾರೆ. ಈ ಚಳುವಳಿಯನ್ನು ಸೆ.29ರವರೆಗೂ ಮುಂದುವರೆಸುತ್ತೇವೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ. ಈಗಾಗಲೇ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. ಪಂಜಾಂಬ್ ಸಿಎಂ ಅಮರೀಂದರ್ ಸಿಂಗ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರತಿಭಟನಾಕಾರಲ್ಲಿ ಮನವಿ ಮಾಡಿದ್ದಾರೆ.
Farmers extend ‘rail roko’ protest till September 29
Mohammed Ghazali reports pic.twitter.com/KOnwFuoRR7
— NDTV (@ndtv) September 25, 2020
ಕೃಷಿ ಮಸೂದೆಗಳನ್ನು ರೈತರು ವಿರೋಧಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ವಿರೋಧ ಪಕ್ಷಗಳು ಮಸೂದೆಗಳ ವಿರುದ್ಧ ಸುಳ್ಳು ವದಂತಿ ಹರಡುತ್ತಿವೆ ಎನ್ನುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ರೈತರಿಗೆ ಈ ಕಾಯ್ದೆಗಳ ಮಹತ್ವ ತಿಳಿಸಿ ಎಂದು ಸಲಹೆ ನೀಡುತ್ತಿದ್ದಾರೆ.
ಮೋದಿ ಸರ್ಕಾರದ ತಪ್ಪಾದ ಜಿಎಸ್ಟಿಯು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು (ಎಂಎಸ್ಎಂಇ) ನಾಶಪಡಿಸಿತು. ಈಗ ಹೊಸ ಕೃಷಿ ಕಾನೂನುಗಳು ನಮ್ಮ ರೈತರನ್ನು ಗುಲಾಮರನ್ನಾಗಿ ಮಾಡುತ್ತವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.