Homeಮುಖಪುಟಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಎದೆಗೆ ನೇರಾನೇರಾ ಚೂರಿ ಹಾಕಿ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟಕ್ಕೆ ಕಿವಿಗೊಡದೆ, ಕನಿಷ್ಟ ಪ್ರಜಾತಾಂತ್ರಿಕ ವಿಧಾನವನ್ನು ಅನುಸರಿಸದೆ, ಸರ್ವಾಧಿಕಾರಿ ವಿಧಾನದಲ್ಲಿ ಈ ಸರ್ಕಾರ ಬಡಜನರ ಮರಣ ಶಾಸನಗಳನ್ನು ಅನುಮೋದಿಸಿದೆ. ಆ ಮೂಲಕ ಕೊನೆಗೂ ಯಡಿಯೂರಪ್ಪ ಸರ್ಕಾರ ಜನತೆಯ ವಿಶ್ವಾಸಕ್ಕೆ ದ್ರೋಹ ಬಗೆದಿದೆ. ಹಾಗಾಗಿ ಈ ಜನದ್ರೋಹಿ ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಲು ಎಂದು ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ನಿರ್ಧರಿಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಐಕ್ಯಹೋರಾಟ ಸಮಿತಿಯ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ, ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಎದೆಗೆ ನೇರಾನೇರಾ ಚೂರಿ ಹಾಕಿ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಉಳುವವರಿಗೇ ಭೂಮಿ” ಎಂಬ ಸಮಾಜವಾದಿ ಆಶಯದ ಕೊಲೆಗೈದು ” ಉಳ್ಳವರದೇ ಎಲ್ಲಾ ಭೂಮಿ” ಎಂಬ ಬಲಾಢ್ಯ ಹಿತಾಸಕ್ತಿಯನ್ನು ಎತ್ತಿಹಿಡಿದಿದ್ದಾರೆ. ಕಾರ್ಪೋರೇಟ್ ಮತ್ತು ರಿಯಲ್ ಎಸ್ಟೇಟ್ ಲಾಭಿಗೆ ನಮ್ಮ ಬಡಜನರ ಬದುಕನ್ನು ಬಲಿ ಕೊಟ್ಟಿದ್ದಾರೆ ಎಂದು ರೈತ ಮುಖಂಡರು ದೂರಿದ್ದಾರೆ.

ಪತ್ರಿಕಾಗೋಷ್ಟಿಯ ಲೈವ್ ನೋಡಿ

ಐಕ್ಯ ಹೋರಾಟ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡಸಿಲಾಯಿತು….

Posted by Naanu Gauri on Saturday, September 26, 2020

ಎಪಿಎಂಸಿ ಮಾರುಕಟ್ಟೆಯನ್ನು ನಿರ್ನಾಮ ಮಾಡಿ ಕಾರ್ಪೊರೇಟ್ ಮಾರುಕಟ್ಟೆಗೆ ರತ್ನಗಂಬಳಿ ಹಾಸಲಾಗಿದೆ. ರೈತರನ್ನು ಕಾರ್ಪೊರೇಟ್ ಕಣ್ಕಟ್ಟಿನ ಜಾಲಕ್ಕೆ ಸಿಲುಕಿಸಲಾಗಿದೆ. ಸ್ಥಳೀಯ ವರ್ತಕರನ್ನು ದಿವಾಳಿ ಮಾಡಲಾಗುತ್ತದೆ ಮತ್ತು ಸಹಸ್ರಾರು ಹಮಾಲಿ ಮತ್ತು ಇತರೆ ಉದ್ಯೋಗಿಗಳನ್ನು ಬೀದಿಪಾಲು ಮಾಡಲಾಗುತ್ತಿದೆ. ಇದಲ್ಲದೆ, ಕೈಗಾರಿಕಾ ಸ್ನೇಹಿ ವಾತಾವರಣ ಸೃಷ್ಟಿಸುವ ಹೆಸರಿನಲ್ಲಿ ಕಾರ್ಮಿಕ ಅನೇಕ ನ್ಯಾಯಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

ಲಕ್ಷಾಂತರ ಜನರ ಹೋರಾಟದ ನಡುವೆಯೂ ಈ ಮಸೂದೆಗಳಿಗೆ ವಿಧಾನಸಭಾ ಒಪ್ಪಿಗೆ ಪಡೆದಿದ್ದರೂ ಅದನ್ನು ಜಾರಿಯಾಗಲು ಬಿಡುವುದಿಲ್ಲ. ಇದುವರೆಗೆ ನಡೆಸಿದ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ದುಡಿಯುವ ಜನರ ಜನ ಸಂಗ್ರಾಮವನ್ನಾಗಿ ಪರಿವರ್ತಿಸುತ್ತದೆ. ನಿಮ್ಮ ಜನದ್ರೋಹದ ಹಿಂದಿರುವ ಹುನ್ನಾರವನ್ನು ಹಳ್ಳಿಹಳ್ಳಿಗೆ ತಲುಪಿಸುತ್ತೇವೆ. ಈ ದುಷ್ಟ ಮಸೂದೆಗಳ ಹಿಂದಿರುವ ಒಂದು ಲಕ್ಷ ಕೋಟಿಯ ಹಗರಣವನ್ನು ಜನರ ಎದುರು ಬಯಲುಗೊಳಿಸುತ್ತೇವೆ ಎಂದು ಮುಖಂಡರು ಪಣ ತೊಟ್ಟಿದ್ದಾರೆ.

 

ಸೆಪ್ಟಂಬರ್ 28ರ ಬಂದ್‌ ಅನ್ನು ಯಶಸ್ವಿಗೊಳಿಸುತ್ತೇವೆ. ಜೊತೆಗೆ ಮುಖ್ಯಮಂತ್ರಿಗಳನ್ನು ಕಂಡ ಕಂಡಲ್ಲಿ ಘೇರಾವ್ ಮಾಡಿ ಮಸೂದೆಗಳ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಗುರುಪ್ರಸಾದ್ ಕೆರಗೋಡು, ಕರ್ನಾಟಕ ರಾಜ್ಯರೈತ ಸಂಘದ ರಾಜ್ಯಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರಾದ ಕುರುಬೂರು ಶಾಂತಕುಮಾರ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ಸಿಐಟಿಯು ರಾಜ್ಯಾ‍ಧ್ಯಕ್ಷೆ ವರಲಕ್ಷ್ಮಿ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...