Homeಮುಖಪುಟಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಎದೆಗೆ ನೇರಾನೇರಾ ಚೂರಿ ಹಾಕಿ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟಕ್ಕೆ ಕಿವಿಗೊಡದೆ, ಕನಿಷ್ಟ ಪ್ರಜಾತಾಂತ್ರಿಕ ವಿಧಾನವನ್ನು ಅನುಸರಿಸದೆ, ಸರ್ವಾಧಿಕಾರಿ ವಿಧಾನದಲ್ಲಿ ಈ ಸರ್ಕಾರ ಬಡಜನರ ಮರಣ ಶಾಸನಗಳನ್ನು ಅನುಮೋದಿಸಿದೆ. ಆ ಮೂಲಕ ಕೊನೆಗೂ ಯಡಿಯೂರಪ್ಪ ಸರ್ಕಾರ ಜನತೆಯ ವಿಶ್ವಾಸಕ್ಕೆ ದ್ರೋಹ ಬಗೆದಿದೆ. ಹಾಗಾಗಿ ಈ ಜನದ್ರೋಹಿ ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಲು ಎಂದು ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ನಿರ್ಧರಿಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಐಕ್ಯಹೋರಾಟ ಸಮಿತಿಯ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ, ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಎದೆಗೆ ನೇರಾನೇರಾ ಚೂರಿ ಹಾಕಿ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಉಳುವವರಿಗೇ ಭೂಮಿ” ಎಂಬ ಸಮಾಜವಾದಿ ಆಶಯದ ಕೊಲೆಗೈದು ” ಉಳ್ಳವರದೇ ಎಲ್ಲಾ ಭೂಮಿ” ಎಂಬ ಬಲಾಢ್ಯ ಹಿತಾಸಕ್ತಿಯನ್ನು ಎತ್ತಿಹಿಡಿದಿದ್ದಾರೆ. ಕಾರ್ಪೋರೇಟ್ ಮತ್ತು ರಿಯಲ್ ಎಸ್ಟೇಟ್ ಲಾಭಿಗೆ ನಮ್ಮ ಬಡಜನರ ಬದುಕನ್ನು ಬಲಿ ಕೊಟ್ಟಿದ್ದಾರೆ ಎಂದು ರೈತ ಮುಖಂಡರು ದೂರಿದ್ದಾರೆ.

ಪತ್ರಿಕಾಗೋಷ್ಟಿಯ ಲೈವ್ ನೋಡಿ

ಐಕ್ಯ ಹೋರಾಟ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡಸಿಲಾಯಿತು….

Posted by Naanu Gauri on Saturday, September 26, 2020

ಎಪಿಎಂಸಿ ಮಾರುಕಟ್ಟೆಯನ್ನು ನಿರ್ನಾಮ ಮಾಡಿ ಕಾರ್ಪೊರೇಟ್ ಮಾರುಕಟ್ಟೆಗೆ ರತ್ನಗಂಬಳಿ ಹಾಸಲಾಗಿದೆ. ರೈತರನ್ನು ಕಾರ್ಪೊರೇಟ್ ಕಣ್ಕಟ್ಟಿನ ಜಾಲಕ್ಕೆ ಸಿಲುಕಿಸಲಾಗಿದೆ. ಸ್ಥಳೀಯ ವರ್ತಕರನ್ನು ದಿವಾಳಿ ಮಾಡಲಾಗುತ್ತದೆ ಮತ್ತು ಸಹಸ್ರಾರು ಹಮಾಲಿ ಮತ್ತು ಇತರೆ ಉದ್ಯೋಗಿಗಳನ್ನು ಬೀದಿಪಾಲು ಮಾಡಲಾಗುತ್ತಿದೆ. ಇದಲ್ಲದೆ, ಕೈಗಾರಿಕಾ ಸ್ನೇಹಿ ವಾತಾವರಣ ಸೃಷ್ಟಿಸುವ ಹೆಸರಿನಲ್ಲಿ ಕಾರ್ಮಿಕ ಅನೇಕ ನ್ಯಾಯಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

ಲಕ್ಷಾಂತರ ಜನರ ಹೋರಾಟದ ನಡುವೆಯೂ ಈ ಮಸೂದೆಗಳಿಗೆ ವಿಧಾನಸಭಾ ಒಪ್ಪಿಗೆ ಪಡೆದಿದ್ದರೂ ಅದನ್ನು ಜಾರಿಯಾಗಲು ಬಿಡುವುದಿಲ್ಲ. ಇದುವರೆಗೆ ನಡೆಸಿದ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ದುಡಿಯುವ ಜನರ ಜನ ಸಂಗ್ರಾಮವನ್ನಾಗಿ ಪರಿವರ್ತಿಸುತ್ತದೆ. ನಿಮ್ಮ ಜನದ್ರೋಹದ ಹಿಂದಿರುವ ಹುನ್ನಾರವನ್ನು ಹಳ್ಳಿಹಳ್ಳಿಗೆ ತಲುಪಿಸುತ್ತೇವೆ. ಈ ದುಷ್ಟ ಮಸೂದೆಗಳ ಹಿಂದಿರುವ ಒಂದು ಲಕ್ಷ ಕೋಟಿಯ ಹಗರಣವನ್ನು ಜನರ ಎದುರು ಬಯಲುಗೊಳಿಸುತ್ತೇವೆ ಎಂದು ಮುಖಂಡರು ಪಣ ತೊಟ್ಟಿದ್ದಾರೆ.

 

ಸೆಪ್ಟಂಬರ್ 28ರ ಬಂದ್‌ ಅನ್ನು ಯಶಸ್ವಿಗೊಳಿಸುತ್ತೇವೆ. ಜೊತೆಗೆ ಮುಖ್ಯಮಂತ್ರಿಗಳನ್ನು ಕಂಡ ಕಂಡಲ್ಲಿ ಘೇರಾವ್ ಮಾಡಿ ಮಸೂದೆಗಳ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಗುರುಪ್ರಸಾದ್ ಕೆರಗೋಡು, ಕರ್ನಾಟಕ ರಾಜ್ಯರೈತ ಸಂಘದ ರಾಜ್ಯಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರಾದ ಕುರುಬೂರು ಶಾಂತಕುಮಾರ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ಸಿಐಟಿಯು ರಾಜ್ಯಾ‍ಧ್ಯಕ್ಷೆ ವರಲಕ್ಷ್ಮಿ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...