Homeಮುಖಪುಟಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಎದೆಗೆ ನೇರಾನೇರಾ ಚೂರಿ ಹಾಕಿ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟಕ್ಕೆ ಕಿವಿಗೊಡದೆ, ಕನಿಷ್ಟ ಪ್ರಜಾತಾಂತ್ರಿಕ ವಿಧಾನವನ್ನು ಅನುಸರಿಸದೆ, ಸರ್ವಾಧಿಕಾರಿ ವಿಧಾನದಲ್ಲಿ ಈ ಸರ್ಕಾರ ಬಡಜನರ ಮರಣ ಶಾಸನಗಳನ್ನು ಅನುಮೋದಿಸಿದೆ. ಆ ಮೂಲಕ ಕೊನೆಗೂ ಯಡಿಯೂರಪ್ಪ ಸರ್ಕಾರ ಜನತೆಯ ವಿಶ್ವಾಸಕ್ಕೆ ದ್ರೋಹ ಬಗೆದಿದೆ. ಹಾಗಾಗಿ ಈ ಜನದ್ರೋಹಿ ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಲು ಎಂದು ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ನಿರ್ಧರಿಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಐಕ್ಯಹೋರಾಟ ಸಮಿತಿಯ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ, ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಎದೆಗೆ ನೇರಾನೇರಾ ಚೂರಿ ಹಾಕಿ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಉಳುವವರಿಗೇ ಭೂಮಿ” ಎಂಬ ಸಮಾಜವಾದಿ ಆಶಯದ ಕೊಲೆಗೈದು ” ಉಳ್ಳವರದೇ ಎಲ್ಲಾ ಭೂಮಿ” ಎಂಬ ಬಲಾಢ್ಯ ಹಿತಾಸಕ್ತಿಯನ್ನು ಎತ್ತಿಹಿಡಿದಿದ್ದಾರೆ. ಕಾರ್ಪೋರೇಟ್ ಮತ್ತು ರಿಯಲ್ ಎಸ್ಟೇಟ್ ಲಾಭಿಗೆ ನಮ್ಮ ಬಡಜನರ ಬದುಕನ್ನು ಬಲಿ ಕೊಟ್ಟಿದ್ದಾರೆ ಎಂದು ರೈತ ಮುಖಂಡರು ದೂರಿದ್ದಾರೆ.

ಪತ್ರಿಕಾಗೋಷ್ಟಿಯ ಲೈವ್ ನೋಡಿ

ಐಕ್ಯ ಹೋರಾಟ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡಸಿಲಾಯಿತು….

Posted by Naanu Gauri on Saturday, September 26, 2020

ಎಪಿಎಂಸಿ ಮಾರುಕಟ್ಟೆಯನ್ನು ನಿರ್ನಾಮ ಮಾಡಿ ಕಾರ್ಪೊರೇಟ್ ಮಾರುಕಟ್ಟೆಗೆ ರತ್ನಗಂಬಳಿ ಹಾಸಲಾಗಿದೆ. ರೈತರನ್ನು ಕಾರ್ಪೊರೇಟ್ ಕಣ್ಕಟ್ಟಿನ ಜಾಲಕ್ಕೆ ಸಿಲುಕಿಸಲಾಗಿದೆ. ಸ್ಥಳೀಯ ವರ್ತಕರನ್ನು ದಿವಾಳಿ ಮಾಡಲಾಗುತ್ತದೆ ಮತ್ತು ಸಹಸ್ರಾರು ಹಮಾಲಿ ಮತ್ತು ಇತರೆ ಉದ್ಯೋಗಿಗಳನ್ನು ಬೀದಿಪಾಲು ಮಾಡಲಾಗುತ್ತಿದೆ. ಇದಲ್ಲದೆ, ಕೈಗಾರಿಕಾ ಸ್ನೇಹಿ ವಾತಾವರಣ ಸೃಷ್ಟಿಸುವ ಹೆಸರಿನಲ್ಲಿ ಕಾರ್ಮಿಕ ಅನೇಕ ನ್ಯಾಯಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

ಲಕ್ಷಾಂತರ ಜನರ ಹೋರಾಟದ ನಡುವೆಯೂ ಈ ಮಸೂದೆಗಳಿಗೆ ವಿಧಾನಸಭಾ ಒಪ್ಪಿಗೆ ಪಡೆದಿದ್ದರೂ ಅದನ್ನು ಜಾರಿಯಾಗಲು ಬಿಡುವುದಿಲ್ಲ. ಇದುವರೆಗೆ ನಡೆಸಿದ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ದುಡಿಯುವ ಜನರ ಜನ ಸಂಗ್ರಾಮವನ್ನಾಗಿ ಪರಿವರ್ತಿಸುತ್ತದೆ. ನಿಮ್ಮ ಜನದ್ರೋಹದ ಹಿಂದಿರುವ ಹುನ್ನಾರವನ್ನು ಹಳ್ಳಿಹಳ್ಳಿಗೆ ತಲುಪಿಸುತ್ತೇವೆ. ಈ ದುಷ್ಟ ಮಸೂದೆಗಳ ಹಿಂದಿರುವ ಒಂದು ಲಕ್ಷ ಕೋಟಿಯ ಹಗರಣವನ್ನು ಜನರ ಎದುರು ಬಯಲುಗೊಳಿಸುತ್ತೇವೆ ಎಂದು ಮುಖಂಡರು ಪಣ ತೊಟ್ಟಿದ್ದಾರೆ.

 

ಸೆಪ್ಟಂಬರ್ 28ರ ಬಂದ್‌ ಅನ್ನು ಯಶಸ್ವಿಗೊಳಿಸುತ್ತೇವೆ. ಜೊತೆಗೆ ಮುಖ್ಯಮಂತ್ರಿಗಳನ್ನು ಕಂಡ ಕಂಡಲ್ಲಿ ಘೇರಾವ್ ಮಾಡಿ ಮಸೂದೆಗಳ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಗುರುಪ್ರಸಾದ್ ಕೆರಗೋಡು, ಕರ್ನಾಟಕ ರಾಜ್ಯರೈತ ಸಂಘದ ರಾಜ್ಯಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರಾದ ಕುರುಬೂರು ಶಾಂತಕುಮಾರ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ಸಿಐಟಿಯು ರಾಜ್ಯಾ‍ಧ್ಯಕ್ಷೆ ವರಲಕ್ಷ್ಮಿ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....