Homeಮುಖಪುಟಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ಈ ಮಸೂದೆಗಳ ಕುರಿತಾಗಿ ಪ್ರತಿಪಕ್ಷಗಳು ಸುಳ್ಳು ಹೇಳುತ್ತಿವೆ. ಇವು 21ನೇ ಶತಮಾನಕ್ಕೆ ಅತೀ ಅಗತ್ಯವಿದ್ದರಿಂದ ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಮೋದಿಯವರು ತಿಳಿಸಿದ್ದಾರೆ.

- Advertisement -
- Advertisement -

ರಾಜ್ಯಸಭೆಯಲ್ಲಿ ಗದ್ದಲದ ನಡುವೆಯೇ ಅಂಗೀಕಾರಗೊಂಡ ಕೃಷಿ ಮಸೂದೆಗಳನ್ನು ವಿರೋಧ ಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದರೆ ಪ್ರಧಾನಿ ಮೋದಿಯವರು ‘ಈ ಮಸೂದೆಗಳು ರೈತರು ತಮ್ಮ ಬೆಳೆಗಳನ್ನು ಎಲ್ಲಿ ಬೇಕಾದರೂ ಮಾರುವ ಶಕ್ತಿ ನೀಡಲಿವೆ’ ಎಂದು ಬಣ್ಣಿಸಿದ್ದಾರೆ.

ಬಿಹಾರದ ‘ಘರ್ ತಕ್ ಫೈಬರ್’ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಮೋದಿಯವರು “ಈ ರೈತ ಮಸೂದೆಗಳು ರೈತರ ಮಂಡಿ ಮಾರುಕಟ್ಟೆಗೆ ವಿರುದ್ಧವಿವೆ ಎಂಬುದು ಸುಳ್ಳು ಎಂದು ನಾನು ಸ್ಪಷ್ಟಪಡಿಸುತ್ತೇನೆ. ಇದು ಕೃಷಿಮಂಡಿಗಳನ್ನು ಮತ್ತಷ್ಟು ಅಭಿವೃದ್ದಿಪಡಿಸಲಿದೆ. ಈ ಸಂದರ್ಭಕ್ಕೆ ತುರ್ತು ಅಗತ್ಯವಿದ್ದ ಕಾರಣಕ್ಕೆ ನಮ್ಮ ಸರ್ಕಾರ ಇವುಗಳನ್ನು ಅಂಗೀಕರಿಸಿದೆ. ಈಗ ರೈತರು ಎಲ್ಲಿ ಬೇಕಾದರೂ ತಮ್ಮ ಬೆಳೆಗಳನ್ನು ಲಾಭದ ದರಕ್ಕೆ ಮಾರುವ ಅಧಿಕಾರ ಹೊಂದಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಮಸೂದೆಗಳಿಗೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ. ಮಂಡಿ ಮಾರುಕಟ್ಟೆ ವ್ಯವಸ್ಥೆ ನಶಿಸಿಹೋಗಲಿದೆ ಎಂದು ಕೆಲವರು ಹೆದುರಿಸುತ್ತಿದ್ದಾರೆ. ಆದರೆ ಹಾಗೆ ಆಗುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ಕನಿಷ್ಟ ಬೆಂಬಲ ಬೆಲೆ ಪದ್ಧತಿಯು (ಎಂಎಸ್‌ಪಿ) ಈ ಹಿಂದಿನಂತಯೇ ಮುಂದುವರೆಯಲಿದೆ ಎಂದು ಈ ದೇಶದ ಪ್ರತಿ ರೈತರಿಗೂ ಭರವಸೆ ನೀಡುತ್ತೇನೆ ಎಂದು ಪ್ರಧಾನಿ ಮೋದಿಯವರು ಇದೇ ಸಂದರ್ಭದಲ್ಲಿ ಘೋಷಿಸಿದ್ದಾರೆ.

ಈ ಮಸೂದೆಗಳ ಕುರಿತಾಗಿ ಪ್ರತಿಪಕ್ಷಗಳು ಸುಳ್ಳು ಹೇಳುತ್ತಿವೆ. ಇವು 21ನೇ ಶತಮಾನಕ್ಕೆ ಅತೀ ಅಗತ್ಯವಿದ್ದರಿಂದ ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಮೋದಿಯವರು ತಿಳಿಸಿದ್ದಾರೆ.

ಆದರೆ ಕೃಷಿ ಮಸೂದೆಗಳ ವಿರುದ್ಧ ರೈತರ ಹೋರಾಟ ತೀವ್ರಗೊಂಡಿದೆ. ದೇಶದ ಹಲವು ರಾಜ್ಯಗಳಲ್ಲಿ ರೈತರು ಈ ಕಾಯ್ದೆಗಳನ್ನು ತಿರಸ್ಕರಿಸಿದ್ದಾರೆ. ಇಂದು ಕರ್ನಾಟಕದಲ್ಲಿಯೂ ಸಹ ಸಾವಿರಾರು ರೈತರು ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಿದ್ದಾರೆ. ಇಂದಿನಿಂದ ಆರಂಭವಾಗಿರುವ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ ಜನತಾ ಅಧಿವೇಶನ ನಡೆಸಲು ತೀರ್ಮಾನಿಸಿದ್ದಾರೆ.

ಇನ್ನು ನಿನ್ನೆ ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳ ಅಂಗೀಕಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ 8 ಪ್ರತಿಪಕ್ಷಗಳ ಸಂಸದರನ್ನು ಒಂದು ವಾರಗಳ ಕಾಲ ಅಧಿವೇಶನದಿಂದ ಅಮಾನತ್ತು ಮಾಡಲಾಗಿದೆ.


ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...