Homeಮುಖಪುಟಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ಈ ಮಸೂದೆಗಳ ಕುರಿತಾಗಿ ಪ್ರತಿಪಕ್ಷಗಳು ಸುಳ್ಳು ಹೇಳುತ್ತಿವೆ. ಇವು 21ನೇ ಶತಮಾನಕ್ಕೆ ಅತೀ ಅಗತ್ಯವಿದ್ದರಿಂದ ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಮೋದಿಯವರು ತಿಳಿಸಿದ್ದಾರೆ.

- Advertisement -
- Advertisement -

ರಾಜ್ಯಸಭೆಯಲ್ಲಿ ಗದ್ದಲದ ನಡುವೆಯೇ ಅಂಗೀಕಾರಗೊಂಡ ಕೃಷಿ ಮಸೂದೆಗಳನ್ನು ವಿರೋಧ ಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದರೆ ಪ್ರಧಾನಿ ಮೋದಿಯವರು ‘ಈ ಮಸೂದೆಗಳು ರೈತರು ತಮ್ಮ ಬೆಳೆಗಳನ್ನು ಎಲ್ಲಿ ಬೇಕಾದರೂ ಮಾರುವ ಶಕ್ತಿ ನೀಡಲಿವೆ’ ಎಂದು ಬಣ್ಣಿಸಿದ್ದಾರೆ.

ಬಿಹಾರದ ‘ಘರ್ ತಕ್ ಫೈಬರ್’ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಮೋದಿಯವರು “ಈ ರೈತ ಮಸೂದೆಗಳು ರೈತರ ಮಂಡಿ ಮಾರುಕಟ್ಟೆಗೆ ವಿರುದ್ಧವಿವೆ ಎಂಬುದು ಸುಳ್ಳು ಎಂದು ನಾನು ಸ್ಪಷ್ಟಪಡಿಸುತ್ತೇನೆ. ಇದು ಕೃಷಿಮಂಡಿಗಳನ್ನು ಮತ್ತಷ್ಟು ಅಭಿವೃದ್ದಿಪಡಿಸಲಿದೆ. ಈ ಸಂದರ್ಭಕ್ಕೆ ತುರ್ತು ಅಗತ್ಯವಿದ್ದ ಕಾರಣಕ್ಕೆ ನಮ್ಮ ಸರ್ಕಾರ ಇವುಗಳನ್ನು ಅಂಗೀಕರಿಸಿದೆ. ಈಗ ರೈತರು ಎಲ್ಲಿ ಬೇಕಾದರೂ ತಮ್ಮ ಬೆಳೆಗಳನ್ನು ಲಾಭದ ದರಕ್ಕೆ ಮಾರುವ ಅಧಿಕಾರ ಹೊಂದಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಮಸೂದೆಗಳಿಗೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ. ಮಂಡಿ ಮಾರುಕಟ್ಟೆ ವ್ಯವಸ್ಥೆ ನಶಿಸಿಹೋಗಲಿದೆ ಎಂದು ಕೆಲವರು ಹೆದುರಿಸುತ್ತಿದ್ದಾರೆ. ಆದರೆ ಹಾಗೆ ಆಗುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ಕನಿಷ್ಟ ಬೆಂಬಲ ಬೆಲೆ ಪದ್ಧತಿಯು (ಎಂಎಸ್‌ಪಿ) ಈ ಹಿಂದಿನಂತಯೇ ಮುಂದುವರೆಯಲಿದೆ ಎಂದು ಈ ದೇಶದ ಪ್ರತಿ ರೈತರಿಗೂ ಭರವಸೆ ನೀಡುತ್ತೇನೆ ಎಂದು ಪ್ರಧಾನಿ ಮೋದಿಯವರು ಇದೇ ಸಂದರ್ಭದಲ್ಲಿ ಘೋಷಿಸಿದ್ದಾರೆ.

ಈ ಮಸೂದೆಗಳ ಕುರಿತಾಗಿ ಪ್ರತಿಪಕ್ಷಗಳು ಸುಳ್ಳು ಹೇಳುತ್ತಿವೆ. ಇವು 21ನೇ ಶತಮಾನಕ್ಕೆ ಅತೀ ಅಗತ್ಯವಿದ್ದರಿಂದ ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಮೋದಿಯವರು ತಿಳಿಸಿದ್ದಾರೆ.

ಆದರೆ ಕೃಷಿ ಮಸೂದೆಗಳ ವಿರುದ್ಧ ರೈತರ ಹೋರಾಟ ತೀವ್ರಗೊಂಡಿದೆ. ದೇಶದ ಹಲವು ರಾಜ್ಯಗಳಲ್ಲಿ ರೈತರು ಈ ಕಾಯ್ದೆಗಳನ್ನು ತಿರಸ್ಕರಿಸಿದ್ದಾರೆ. ಇಂದು ಕರ್ನಾಟಕದಲ್ಲಿಯೂ ಸಹ ಸಾವಿರಾರು ರೈತರು ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಿದ್ದಾರೆ. ಇಂದಿನಿಂದ ಆರಂಭವಾಗಿರುವ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ ಜನತಾ ಅಧಿವೇಶನ ನಡೆಸಲು ತೀರ್ಮಾನಿಸಿದ್ದಾರೆ.

ಇನ್ನು ನಿನ್ನೆ ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳ ಅಂಗೀಕಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ 8 ಪ್ರತಿಪಕ್ಷಗಳ ಸಂಸದರನ್ನು ಒಂದು ವಾರಗಳ ಕಾಲ ಅಧಿವೇಶನದಿಂದ ಅಮಾನತ್ತು ಮಾಡಲಾಗಿದೆ.


ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...