Homeಮುಖಪುಟಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ಈ ಮಸೂದೆಗಳ ಕುರಿತಾಗಿ ಪ್ರತಿಪಕ್ಷಗಳು ಸುಳ್ಳು ಹೇಳುತ್ತಿವೆ. ಇವು 21ನೇ ಶತಮಾನಕ್ಕೆ ಅತೀ ಅಗತ್ಯವಿದ್ದರಿಂದ ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಮೋದಿಯವರು ತಿಳಿಸಿದ್ದಾರೆ.

- Advertisement -
- Advertisement -

ರಾಜ್ಯಸಭೆಯಲ್ಲಿ ಗದ್ದಲದ ನಡುವೆಯೇ ಅಂಗೀಕಾರಗೊಂಡ ಕೃಷಿ ಮಸೂದೆಗಳನ್ನು ವಿರೋಧ ಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದರೆ ಪ್ರಧಾನಿ ಮೋದಿಯವರು ‘ಈ ಮಸೂದೆಗಳು ರೈತರು ತಮ್ಮ ಬೆಳೆಗಳನ್ನು ಎಲ್ಲಿ ಬೇಕಾದರೂ ಮಾರುವ ಶಕ್ತಿ ನೀಡಲಿವೆ’ ಎಂದು ಬಣ್ಣಿಸಿದ್ದಾರೆ.

ಬಿಹಾರದ ‘ಘರ್ ತಕ್ ಫೈಬರ್’ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಮೋದಿಯವರು “ಈ ರೈತ ಮಸೂದೆಗಳು ರೈತರ ಮಂಡಿ ಮಾರುಕಟ್ಟೆಗೆ ವಿರುದ್ಧವಿವೆ ಎಂಬುದು ಸುಳ್ಳು ಎಂದು ನಾನು ಸ್ಪಷ್ಟಪಡಿಸುತ್ತೇನೆ. ಇದು ಕೃಷಿಮಂಡಿಗಳನ್ನು ಮತ್ತಷ್ಟು ಅಭಿವೃದ್ದಿಪಡಿಸಲಿದೆ. ಈ ಸಂದರ್ಭಕ್ಕೆ ತುರ್ತು ಅಗತ್ಯವಿದ್ದ ಕಾರಣಕ್ಕೆ ನಮ್ಮ ಸರ್ಕಾರ ಇವುಗಳನ್ನು ಅಂಗೀಕರಿಸಿದೆ. ಈಗ ರೈತರು ಎಲ್ಲಿ ಬೇಕಾದರೂ ತಮ್ಮ ಬೆಳೆಗಳನ್ನು ಲಾಭದ ದರಕ್ಕೆ ಮಾರುವ ಅಧಿಕಾರ ಹೊಂದಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಮಸೂದೆಗಳಿಗೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ. ಮಂಡಿ ಮಾರುಕಟ್ಟೆ ವ್ಯವಸ್ಥೆ ನಶಿಸಿಹೋಗಲಿದೆ ಎಂದು ಕೆಲವರು ಹೆದುರಿಸುತ್ತಿದ್ದಾರೆ. ಆದರೆ ಹಾಗೆ ಆಗುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ಕನಿಷ್ಟ ಬೆಂಬಲ ಬೆಲೆ ಪದ್ಧತಿಯು (ಎಂಎಸ್‌ಪಿ) ಈ ಹಿಂದಿನಂತಯೇ ಮುಂದುವರೆಯಲಿದೆ ಎಂದು ಈ ದೇಶದ ಪ್ರತಿ ರೈತರಿಗೂ ಭರವಸೆ ನೀಡುತ್ತೇನೆ ಎಂದು ಪ್ರಧಾನಿ ಮೋದಿಯವರು ಇದೇ ಸಂದರ್ಭದಲ್ಲಿ ಘೋಷಿಸಿದ್ದಾರೆ.

ಈ ಮಸೂದೆಗಳ ಕುರಿತಾಗಿ ಪ್ರತಿಪಕ್ಷಗಳು ಸುಳ್ಳು ಹೇಳುತ್ತಿವೆ. ಇವು 21ನೇ ಶತಮಾನಕ್ಕೆ ಅತೀ ಅಗತ್ಯವಿದ್ದರಿಂದ ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಮೋದಿಯವರು ತಿಳಿಸಿದ್ದಾರೆ.

ಆದರೆ ಕೃಷಿ ಮಸೂದೆಗಳ ವಿರುದ್ಧ ರೈತರ ಹೋರಾಟ ತೀವ್ರಗೊಂಡಿದೆ. ದೇಶದ ಹಲವು ರಾಜ್ಯಗಳಲ್ಲಿ ರೈತರು ಈ ಕಾಯ್ದೆಗಳನ್ನು ತಿರಸ್ಕರಿಸಿದ್ದಾರೆ. ಇಂದು ಕರ್ನಾಟಕದಲ್ಲಿಯೂ ಸಹ ಸಾವಿರಾರು ರೈತರು ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಿದ್ದಾರೆ. ಇಂದಿನಿಂದ ಆರಂಭವಾಗಿರುವ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ ಜನತಾ ಅಧಿವೇಶನ ನಡೆಸಲು ತೀರ್ಮಾನಿಸಿದ್ದಾರೆ.

ಇನ್ನು ನಿನ್ನೆ ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳ ಅಂಗೀಕಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ 8 ಪ್ರತಿಪಕ್ಷಗಳ ಸಂಸದರನ್ನು ಒಂದು ವಾರಗಳ ಕಾಲ ಅಧಿವೇಶನದಿಂದ ಅಮಾನತ್ತು ಮಾಡಲಾಗಿದೆ.


ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...