Homeಮುಖಪುಟಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು ಹೊಡೆದು ಪಂಜಾಬ್‌ನಲ್ಲಿ ಹೊಸ ಕಾನೂನುಗಳನ್ನು ಅಮರಿಂದರ್ ಸಿಂಗ್ ಅಂಗೀಕರಿಸಿದ್ದರು.

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಮ್ಮ ರಾಜ್ಯವನ್ನು “ರಾಷ್ಟ್ರ ವಿರೋಧಿ” ಎಂದು ಕರೆದವರ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ದೇಶದ ಶಾಂತಿಯನ್ನು ಕಾಪಾಡಲು, ದೇಶ ರಕ್ಷಣೆಗಾಗಿ ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಸಾವಿರಾರು ಪಂಜಾಬಿ ಸೈನಿಕರು ಸೇವೆ ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ.

ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ, ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ಪಂಜಾಬ್‌ನ ಶಾಸಕರು ಪ್ರಾರಂಭಿಸಿರುವ ಪ್ರತಿಭಟನೆಯಲ್ಲಿ ಅವರು ಮಾತನಾಡಿದ್ದಾರೆ.

“ದಯವಿಟ್ಟು, ದೇಶದ ಶಾಂತಿಯನ್ನು ಭಂಗಗೊಳಿಸಲು ಪಂಜಾಬ್ ಹೊರಟಿದೆ ಎಂದು ಭಾವಿಸಬೇಡಿ. ಅದು ನಿಜವಲ್ಲ. ದೇಶದ ಶಾಂತಿಯನ್ನು ಕಾಪಾಡಲು ನಾವಿದ್ದೇವೆ. ನಾವು ಈ ಹಿಂದೆ ಹಲವು ಬಾರಿ ದೇಶಕ್ಕಾಗಿ ರಕ್ತ ಹರಿಸಿದ್ದೇವೆ ಮತ್ತು ಭವಿಷ್ಯದಲ್ಲಿ ಕೂಡ ನಾವು ದೇಶಕ್ಕಾಗಿ ರಕ್ತ ಹರಿಸಲು, ಜೀವ ನೀಡಲು ಎಂದಿಗೂ ನಾಚಿಕೆಪಡಿಸುವುದಿಲ್ಲ ’ಎಂದು ಅಮರಿಂದರ್ ಸಿಂಗ್ ಹೇಳಿದರು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ನಿರಾಕರಣೆ: ರಾಷ್ಟ್ರಪತಿಗಳ ವಿರುದ್ಧ ಪ್ರತಿಭಟನೆಗೆ ಮುಂದಾದ ಪಂಜಾಬ್ ಸಿಎಂ ಅಮರಿಂದರ್ ಸಿಂಗ್

ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು ಹೊಡೆದು ಪಂಜಾಬ್‌ನಲ್ಲಿ ಹೊಸ ಕಾನೂನುಗಳನ್ನು ಅಮರಿಂದರ್ ಸಿಂಗ್ ಅಂಗೀಕರಿಸಿದ್ದರು. ವಿವಾದಿತ ಮೂರು ಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ಅವಕಾಶ ನೀಡದೆ, ರಾಜ್ಯ ವಿಧಾನಸಭೆ ಅಂಗೀಕರಿಸಿದ ಮೂರು ಕೃಷಿ ಮಸೂದೆಗಳ ಕುರಿತು ಸಿಎಂ ನೇತೃತ್ವದ ರಾಜ್ಯದ ನಿಯೋಗವನ್ನು ಭೇಟಿ ಮಾಡಲು ರಾಷ್ಟ್ರಪತಿ ರಾಮ‌ನಾಥ್ ಕೋವಿಂದ್ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ  ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಪಂಜಾಬ್ ರಾಷ್ಟ್ರ ವಿರೋಧಿ ಚಟುವಟಿಕೆ ಮಾಡುತ್ತದೆ ಎಂದು ಎಂದಿಗೂ ಯೋಚಿಸಬೇಡಿ. ನಮ್ಮ ನೆರೆಯ ರಾಷ್ಟ್ರ ಪಾಕಿಸ್ತಾನ, ಮೂರು ಡ್ರೋನ್‌ಗಳ ಮೂಲಕ ಮದ್ದುಗುಂಡುಗಳನ್ನು ಹಾಕಿ, ನಮ್ಮನ್ನು ಪ್ರಚೋದಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ಶಸ್ತ್ರಾಸ್ತ್ರಗಳು ಅಪರಾಧಿಗಳು ಮತ್ತು ರಾಷ್ಟ್ರ ವಿರೋಧಿಗಳ ಕೈಗೆ ಹೋಗುವ ಸಾಧ್ಯತೆಯಿದೆ. ನಾವು ಈ ವಿಷಯಗಳನ್ನು ಮತ್ತು ನಮ್ಮ ಆತಂಕವನ್ನು ಕೇಂದ್ರ ಸರ್ಕಾರದೊಂದಿಗೆ ಹಂಚಿಕೊಂಡಿದ್ದೇವೆ. ನಮ್ಮದು ಗಡಿ ರಾಜ್ಯವಾದ್ದರಿಂದ ಪಂಜಾಬ್‌ನಲ್ಲಿ ನಾವು ಯಾವುದೇ ತೊಂದರೆ ಬಯಸುವುದಿಲ್ಲ. ಪಂಜಾಬ್‌ನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದು ದೇಶದ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ ”ಎಂದು ಅಮರಿಂದರ್ ಸಿಂಗ್ ಹೇಳಿದರು.

“ಮಸೂದೆಗಳು ರಾಜಭವನ ತಲುಪಿವೆ. ಈ ಮಸೂದೆಗಳನ್ನು ರಾಜ್ಯಪಾಲರು ಏಕೆ ತಡೆಹಿಡಿಯುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಅವರಿಗೆ ಇದರಲ್ಲಿ ಯಾವುದೇ ಪಾತ್ರವಿಲ್ಲ. ರಾಜ್ಯಪಾಲರು ಕೇವಲ ಪೋಸ್ಟ್ ಬಾಕ್ಸ್ ಆಗಿದ್ದು, ಮಸೂದೆಯನ್ನು ರಾಷ್ಟ್ರಪತಿಗೆ ರವಾನಿಸುವುದು ಮಾತ್ರ ಅವರ ಕರ್ತವ್ಯವಾಗಿದೆ. ಅವರು ಯಾವುದೇ ಪ್ರತಿಕ್ರಿಯೆಗಳನ್ನು ನೀಡಬೇಕಾಗಿಲ್ಲ”ಎಂದು ಸಿಎಂ ಹೇಳಿದರು.

ಇತ್ತೀಚಿನ ಕೃಷಿ ಮಸೂದೆಗಳ ವಿರುದ್ಧ ಕಾಂಗ್ರೆಸ್ ಸೇರಿದಂತೆ ಇತರ ಹಲವು ವಿರೋಧ ಪಕ್ಷಗಳು, ಹಲವಾರು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಇವು ರೈತರ ಹಿತಾಸಕ್ತಿಗೆ ಧಕ್ಕೆ ತರುತ್ತವೆ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ಪ್ರಯೋಜನ ನೀಡುತ್ತವೆ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ನಿರಾಕರಿಸಿದೆ.


ಇದನ್ನೂ ಓದಿ: MSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...