Homeಮುಖಪುಟಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು ಹೊಡೆದು ಪಂಜಾಬ್‌ನಲ್ಲಿ ಹೊಸ ಕಾನೂನುಗಳನ್ನು ಅಮರಿಂದರ್ ಸಿಂಗ್ ಅಂಗೀಕರಿಸಿದ್ದರು.

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಮ್ಮ ರಾಜ್ಯವನ್ನು “ರಾಷ್ಟ್ರ ವಿರೋಧಿ” ಎಂದು ಕರೆದವರ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ದೇಶದ ಶಾಂತಿಯನ್ನು ಕಾಪಾಡಲು, ದೇಶ ರಕ್ಷಣೆಗಾಗಿ ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಸಾವಿರಾರು ಪಂಜಾಬಿ ಸೈನಿಕರು ಸೇವೆ ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ.

ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ, ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ಪಂಜಾಬ್‌ನ ಶಾಸಕರು ಪ್ರಾರಂಭಿಸಿರುವ ಪ್ರತಿಭಟನೆಯಲ್ಲಿ ಅವರು ಮಾತನಾಡಿದ್ದಾರೆ.

“ದಯವಿಟ್ಟು, ದೇಶದ ಶಾಂತಿಯನ್ನು ಭಂಗಗೊಳಿಸಲು ಪಂಜಾಬ್ ಹೊರಟಿದೆ ಎಂದು ಭಾವಿಸಬೇಡಿ. ಅದು ನಿಜವಲ್ಲ. ದೇಶದ ಶಾಂತಿಯನ್ನು ಕಾಪಾಡಲು ನಾವಿದ್ದೇವೆ. ನಾವು ಈ ಹಿಂದೆ ಹಲವು ಬಾರಿ ದೇಶಕ್ಕಾಗಿ ರಕ್ತ ಹರಿಸಿದ್ದೇವೆ ಮತ್ತು ಭವಿಷ್ಯದಲ್ಲಿ ಕೂಡ ನಾವು ದೇಶಕ್ಕಾಗಿ ರಕ್ತ ಹರಿಸಲು, ಜೀವ ನೀಡಲು ಎಂದಿಗೂ ನಾಚಿಕೆಪಡಿಸುವುದಿಲ್ಲ ’ಎಂದು ಅಮರಿಂದರ್ ಸಿಂಗ್ ಹೇಳಿದರು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ನಿರಾಕರಣೆ: ರಾಷ್ಟ್ರಪತಿಗಳ ವಿರುದ್ಧ ಪ್ರತಿಭಟನೆಗೆ ಮುಂದಾದ ಪಂಜಾಬ್ ಸಿಎಂ ಅಮರಿಂದರ್ ಸಿಂಗ್

ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು ಹೊಡೆದು ಪಂಜಾಬ್‌ನಲ್ಲಿ ಹೊಸ ಕಾನೂನುಗಳನ್ನು ಅಮರಿಂದರ್ ಸಿಂಗ್ ಅಂಗೀಕರಿಸಿದ್ದರು. ವಿವಾದಿತ ಮೂರು ಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ಅವಕಾಶ ನೀಡದೆ, ರಾಜ್ಯ ವಿಧಾನಸಭೆ ಅಂಗೀಕರಿಸಿದ ಮೂರು ಕೃಷಿ ಮಸೂದೆಗಳ ಕುರಿತು ಸಿಎಂ ನೇತೃತ್ವದ ರಾಜ್ಯದ ನಿಯೋಗವನ್ನು ಭೇಟಿ ಮಾಡಲು ರಾಷ್ಟ್ರಪತಿ ರಾಮ‌ನಾಥ್ ಕೋವಿಂದ್ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ  ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಪಂಜಾಬ್ ರಾಷ್ಟ್ರ ವಿರೋಧಿ ಚಟುವಟಿಕೆ ಮಾಡುತ್ತದೆ ಎಂದು ಎಂದಿಗೂ ಯೋಚಿಸಬೇಡಿ. ನಮ್ಮ ನೆರೆಯ ರಾಷ್ಟ್ರ ಪಾಕಿಸ್ತಾನ, ಮೂರು ಡ್ರೋನ್‌ಗಳ ಮೂಲಕ ಮದ್ದುಗುಂಡುಗಳನ್ನು ಹಾಕಿ, ನಮ್ಮನ್ನು ಪ್ರಚೋದಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ಶಸ್ತ್ರಾಸ್ತ್ರಗಳು ಅಪರಾಧಿಗಳು ಮತ್ತು ರಾಷ್ಟ್ರ ವಿರೋಧಿಗಳ ಕೈಗೆ ಹೋಗುವ ಸಾಧ್ಯತೆಯಿದೆ. ನಾವು ಈ ವಿಷಯಗಳನ್ನು ಮತ್ತು ನಮ್ಮ ಆತಂಕವನ್ನು ಕೇಂದ್ರ ಸರ್ಕಾರದೊಂದಿಗೆ ಹಂಚಿಕೊಂಡಿದ್ದೇವೆ. ನಮ್ಮದು ಗಡಿ ರಾಜ್ಯವಾದ್ದರಿಂದ ಪಂಜಾಬ್‌ನಲ್ಲಿ ನಾವು ಯಾವುದೇ ತೊಂದರೆ ಬಯಸುವುದಿಲ್ಲ. ಪಂಜಾಬ್‌ನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದು ದೇಶದ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ ”ಎಂದು ಅಮರಿಂದರ್ ಸಿಂಗ್ ಹೇಳಿದರು.

“ಮಸೂದೆಗಳು ರಾಜಭವನ ತಲುಪಿವೆ. ಈ ಮಸೂದೆಗಳನ್ನು ರಾಜ್ಯಪಾಲರು ಏಕೆ ತಡೆಹಿಡಿಯುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಅವರಿಗೆ ಇದರಲ್ಲಿ ಯಾವುದೇ ಪಾತ್ರವಿಲ್ಲ. ರಾಜ್ಯಪಾಲರು ಕೇವಲ ಪೋಸ್ಟ್ ಬಾಕ್ಸ್ ಆಗಿದ್ದು, ಮಸೂದೆಯನ್ನು ರಾಷ್ಟ್ರಪತಿಗೆ ರವಾನಿಸುವುದು ಮಾತ್ರ ಅವರ ಕರ್ತವ್ಯವಾಗಿದೆ. ಅವರು ಯಾವುದೇ ಪ್ರತಿಕ್ರಿಯೆಗಳನ್ನು ನೀಡಬೇಕಾಗಿಲ್ಲ”ಎಂದು ಸಿಎಂ ಹೇಳಿದರು.

ಇತ್ತೀಚಿನ ಕೃಷಿ ಮಸೂದೆಗಳ ವಿರುದ್ಧ ಕಾಂಗ್ರೆಸ್ ಸೇರಿದಂತೆ ಇತರ ಹಲವು ವಿರೋಧ ಪಕ್ಷಗಳು, ಹಲವಾರು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಇವು ರೈತರ ಹಿತಾಸಕ್ತಿಗೆ ಧಕ್ಕೆ ತರುತ್ತವೆ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ಪ್ರಯೋಜನ ನೀಡುತ್ತವೆ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ನಿರಾಕರಿಸಿದೆ.


ಇದನ್ನೂ ಓದಿ: MSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...