Homeಮುಖಪುಟಕೇಂದ್ರ ಚರ್ಚೆ ನಡೆಸಲು ಬಯಸಿದರೆ, ರೈತರಿಗೆ ಷರತ್ತು ವಿಧಿಸುವಂತಿಲ್ಲ- ರಾಕೇಶ್ ಟಿಕಾಯತ್

ಕೇಂದ್ರ ಚರ್ಚೆ ನಡೆಸಲು ಬಯಸಿದರೆ, ರೈತರಿಗೆ ಷರತ್ತು ವಿಧಿಸುವಂತಿಲ್ಲ- ರಾಕೇಶ್ ಟಿಕಾಯತ್

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳ ಕುರಿತು ಒಕ್ಕೂಟ ಸರ್ಕಾರ ಚರ್ಚಿಸಲು ಬಯಸಿದರೆ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಯಾವುದೇ ಷರತ್ತು ವಿಧಿಸಬಾರದು ಎಂದು ಭಾರತೀಯ ಕಿಸಾನ್ ಯೂನಿಯನ್  ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

“ಕೃಷಿ ಕಾನೂನುಗಳನ್ನು ಹಿಂಪಡೆಯದ ಸರ್ಕಾರ, ರೈತ ಪ್ರತಿಭಟನೆಯನ್ನು ಕೊನೆಗೊಳಿಸಲು ಹೇಳುತ್ತಿದ್ದಾರೆ. ರೈತರು 8 ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವುದು ಸರ್ಕಾರದ ಆದೇಶಗಳನ್ನು ಪಾಲಿಸಲು ಅಲ್ಲ” ಎಂದಿದ್ದಾರೆ.

“ಸರ್ಕಾರ ಮಾತನಾಡಲು ಬಯಸಿದರೆ, ರೈತರ ಜೊತೆಗೆ ಮಾತನಾಡಬಹುದು, ಆದರೆ ಯಾವುದೇ ಷರತ್ತು ವಿಧಿಸಬಾರದು” ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದಿಲ್ಲ. ಪ್ರತಿಭಟನೆಯನ್ನು ಬಿಟ್ಟು ಚರ್ಚೆಗೆ ಬರಲು ರೈತರನ್ನು ಆಹ್ವಾನಿಸಿದ ಬಳಿಕ ಟಿಕಾಯತ್ ಈ ಹೇಳಿಕೆ ನೀಡಿದ್ದಾರೆ

ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

“ಎಪಿಎಂಸಿಗಳನ್ನು ಮುಚ್ಚುವುದಿಲ್ಲ. ಎಪಿಎಂಸಿಗಳು 1 ಲಕ್ಷ ಕೋಟಿ ರೂಪಾಯಿಯ ಮೂಲಸೌಕರ್ಯ ನಿಧಿಯ ಭಾಗವಾಗಲಿದೆ ಎಂದು ಒಕ್ಕೂಟ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದೆ. ಸಾಲಗಳು, ಬಡ್ಡಿ ಮನ್ನಾ ಮೂಲಕ ಎಪಿಎಂಸಿ ನಿಧಿಯಿಂದ ರೈತರು ಲಾಭ ಪಡೆಯಬಹುದು”ಎಂದು ಸಚಿವ ತೋಮರ್ ಹೇಳಿದ್ದಾರೆ.

“ಆತ್ಮನಿರ್ಭರ ಭಾರತ ಅಡಿಯಲ್ಲಿ ರೈತ ಮೂಲಸೌಕರ್ಯ ನಿಧಿಗೆ ನಿಗದಿಪಡಿಸಿದ 1 ಲಕ್ಷ ಕೋಟಿ ರೂಪಾಯಿಗಳನ್ನು ಎಪಿಎಂಸಿಗಳು ಬಳಸಬಹುದು” ಎಂದು ಹೇಳಿದ್ದಾರೆ.

ಈ ಮಾತುಗಳನ್ನು ಮತ್ತು ಸರ್ಕಾರದ ಯೋಜನೆಯನ್ನು ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ. “ವ್ಯಾಪಾರವಿಲ್ಲದಿದ್ದರೂ ಎಪಿಎಂಸಿಗಳು ಮುಂದುವರಿಯುವ ಈ ಸೂತ್ರ ಯಾವುದು?. “ಎಪಿಎಂಸಿಗಳು ಹೇಗೆ ಉಳಿಯುತ್ತವೆ ಎಂಬುದನ್ನು ಅವರು ನಮಗೆ ತಿಳಿಸಬೇಕು. ಉತ್ಪನ್ನಗಳನ್ನು ಎಪಿಎಂಸಿಗಳ ಹೊರಗೆ ಖರೀದಿಸಿದರೆ, ಎಪಿಎಂಸಿಗಳು ಮುಚ್ಚಲ್ಪಡುತ್ತವೆ. ಮಧ್ಯಪ್ರದೇಶದ 40 ಕ್ಕೂ ಹೆಚ್ಚು ಎಪಿಎಂಸಿಗಳಲ್ಲಿ 0% ಉತ್ಪನ್ನಗಳ ಮಾರಾಟವಾಗಿದೆ. ಅಲ್ಲಿ ಎಪಿಎಂಸಿಗಳು ಮುಚ್ಚುವ ಹಂತದಲ್ಲಿವೆ. ಉತ್ತರ ಪ್ರದೇಶ, ಬಿಹಾರದಲ್ಲಿ ಎಪಿಎಂಸಿಗಳನ್ನು ಮುಚ್ಚಲಾಗಿದೆ” ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ವರ್ಷ ನವೆಂಬರ್‌ನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳ ಮುಖಂಡರು ಮತ್ತು ಸರ್ಕಾರದ ನಡುವೆ ಹತ್ತಕ್ಕೂ ಹೆಚ್ಚು ಸುತ್ತಿನ ಚರ್ಚೆಗಳು ನಡೆದಿವೆ, ಆದರೆ ಇಲ್ಲಿಯವರೆಗೂ ಸರ್ಕಾರದ ಯಾವುದೇ ಷರತ್ತುಗಳಿಗೂ ರೈತರು ಒಪ್ಪಿಲ್ಲ.


ಇದನ್ನೂ ಓದಿ: ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...