Homeಮುಖಪುಟಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಮುಂದಿನ ತಿಂಗಳು ಪಂಜಾಬಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿದ್ದು, ಈ ನಡುವೆ ಕಳೆದ 10 ದಿನಗಳಲ್ಲಿ 15 ಕ್ಕೂ ಹೆಚ್ಚು ಬಿಜೆಪಿ ನಾಯಕರು ಪಕ್ಷ ತೊರೆದು ಅಕಾಲಿ ದಳ ಸೇರಿದ್ದಾರೆ.

- Advertisement -
- Advertisement -

ರೈತರ ಆಂದೋಲನಕ್ಕೆ ಶೀಘ್ರ ಅಂತ್ಯವಂತೂ ಕಾಣುತ್ತಿಲ್ಲ. ಸರ್ಕಾರದೊಂದಿಗಿನ ಮಾತುಕತೆ ಸ್ಥಗಿತಗೊಂಡಿದ್ದರಿಂದ, ಪಂಜಾಬ್ ಬಿಜೆಪಿಯ ಉನ್ನತ ನಾಯಕರಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಹಿರಿಯ ಬಿಜೆಪಿ ನಾಯಕಿ ಮತ್ತು ರಾಷ್ಟ್ರೀಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕಾಂತಾ ಚಾವ್ಲಾ “ಆಂದೋಲನ ಇಷ್ಟು ದಿನ ನಡೆಯಲು ಅವಕಾಶ ನೀಡಬಾರದಿತ್ತು ಮತ್ತು ಪ್ರಧಾನಿ ಅವರು ಬಯಸಿದಲ್ಲಿ ‘ಒಂದು ದಿನದಲ್ಲಿ’ ಪರಿಸ್ಥಿತಿಯನ್ನು ಪರಿಹರಿಸಬಹುದು ಎಂದು ಶನಿವಾರ ಹೇಳಿದ್ದಾರೆ.

ಮುಂದಿನ ತಿಂಗಳು ಪಂಜಾಬಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿದ್ದು ಇದು ಅಲ್ಲಿನ ಬಿಜೆಪಿಯಲ್ಲಿ ಆತಂಕ ಮೂಡಿಸಿದೆ. ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆಯಬಹುದೆಂದು ಪಂಜಾಬ್ ಬಿಜೆಪಿಯ ಹಲವು ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.
ಇಷ್ಟು ದಿನ ಪ್ರತಿಭಟನೆ ನಡೆಯುತ್ತಿದ್ದರೂ ಶಾಂತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ರೈತರು “ಜಗತ್ತಿಗೆ ಒಂದು ಮಾದರಿಯನ್ನು ನೀಡಿದ್ದಾರೆ” ಎಂದು ಬಿಜೆಪಿ ನಾಯಕಿ ಲಕ್ಷ್ಮೀ ಕಾಂತಾ ಚಾವ್ಲಾ ಶನಿವಾರದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಮಾಜಿ ಸಚಿವೆ, 78 ವರ್ಷದ ಚಾವ್ಲಾ ಅವರು ದಿ ಸಂಡೇ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ, “ಭಾರತದ ಪ್ರಜೆಯಾಗಿ ಮಾತನಾಡುತ್ತಿದ್ದೇನೆ, ಬಿಜೆಪಿ ನಾಯಕಿಯಾಗಿ ಅಲ್ಲ. ಯಾವುದೇ ಪ್ರತಿಭಟನೆ ಇಷ್ಟು ದಿನ ನಡೆಯಬಾರದು ಎಂದು ನಾನು ಭಾವಿಸುತ್ತೇನೆ. ಅದಕ್ಕೆ ಪರಿಹಾರವನ್ನು ಬೇಗನೆ ಕಂಡುಹಿಡಿಯಬೇಕು. ಡಿಸೆಂಬರ್ ಮಧ್ಯದಲ್ಲಿ, ಶೀತ ಅಥವಾ ಆತ್ಮಹತ್ಯೆಯಿಯ ಕಾರಣಕ್ಕೆ ಸಾಯುತ್ತಿರುವ ರೈತರ ಸಂಖ್ಯೆ 30 ಕ್ಕೆ ತಲುಪಿದ ನಂತರ, ನಾನು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ. ಕೃಷಿ ಸಚಿವರಿಗೆ ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗದಿದ್ದರೆ, ಪ್ರಧಾನಿ ಈ ವಿಷಯವನ್ನು ಕೈಗೆತ್ತಿಕೊಂಡು ಪರಿಹರಿಸಬೇಕು’ ಎಂದು ಅವರು ಹೇಳಿದ್ದಾರೆ.

‘ಪ್ರಧಾನಿ ಸ್ವತಃ ರೈತರೊಂದಿಗೆ ಕುಳಿತು ಪರಿಹಾರ ಕಂಡುಕೊಳ್ಳಬೇಕು. ಪ್ರಧಾನಮಂತ್ರಿ ಬಯಸಿದರೆ, ಒಂದು ದಿನದಲ್ಲಿ ಪರಿಹಾರವನ್ನು ಕಂಡುಹಿಡಿಯಬಹುದು ಎಂದು ನಾನು ಭಾವಿಸುತ್ತೇನೆ’ ಎಂದು ಲಕ್ಷ್ಮೀ ಕಾಂತಾ ಚಾವ್ಲಾ ಹೇಳಿದ್ದಾರೆ.

ಮಾಲ್ವಾ ಮೂಲದ ಬಿಜೆಪಿ ನಾಯಕರೊಬ್ಬರು ಪ್ರತಿಭಟನೆಯ ನಿಜವಾದ ಚಿತ್ರಣವನ್ನು ದೆಹಲಿ ನಾಯಕತ್ವಕ್ಕೆ ಪ್ರಸ್ತುತಪಡಿಸಲು ರಾಜ್ಯ ಘಟಕ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆಯ ಹೊರತಾಗಿಯೂ ಸಂಸತ್ತಿನಲ್ಲಿ ಕೃಷಿ ಸುಗ್ರೀವಾಜ್ಞೆಗಳನ್ನು ಅಂಗೀಕರಿಸಲಾಯಿತು. ನಂತರ, ಅಕಾಲಿ ದಳವು ನಮ್ಮೊಂದಿಗಿನ 27 ವರ್ಷಗಳ ಮೈತ್ರಿಯನ್ನು ಮುರಿದುಕೊಂಡಿತು. ಆಗಲೂ ನಮ್ಮ ಪಕ್ಷವು ಎಚ್ಚರಗೊಳ್ಳಲಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ, ರೈತರು ರೈಲ್ ರೋಕೊ ಮತ್ತು ಅನಿರ್ದಿಷ್ಟ ಪ್ರತಿಭಟನೆಗಳನ್ನು ಅಕ್ಟೋಬರ್‌ನಲ್ಲಿ ಪ್ರಾರಂಭಿಸಿದರೂ, ಕೇಂದ್ರ ಸಚಿವರೊಂದಿಗೆ ಮೊದಲ ಸಭೆಯನ್ನು ತುಂಬ ತಡವಾಗಿ, (ನವೆಂಬರ್ 13 ರಂದು) ಏರ್ಪಡಿಸಲಾಯಿತು. ರೈತರು ದೆಹಲಿ ಗಡಿಗಳಿಗೆ ತಲುಪಿದಾಗಿನಿಂದ ಹತ್ತು ಸುತ್ತಿನ ಸಭೆಗಳು ನಡೆದಿವೆ, ಆದರೆ ಯಾವುದೇ ಪ್ರಗತಿಯಿಲ್ಲ’ ಎಂದು ಬಿಜೆಪಿ ನಾಯಕ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆಗಳ ಕುರಿತ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಅಕ್ಟೋಬರ್ 15 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮಾಜಿ ರಾಜ್ಯ ಕಾರ್ಯದರ್ಶಿ ಮಂಜಿಂದರ್ ಸಿಂಗ್, ರಾಜ್ಯದ ಹಿರಿಯ ನಾಯಕತ್ವ ಎಂದಿಗೂ ಆಂದೋಲನವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹೇಳುತ್ತಾರೆ.

‘ಕಳೆದ 10 ದಿನಗಳಲ್ಲಿ 15 ಕ್ಕೂ ಹೆಚ್ಚು ಬಿಜೆಪಿ ನಾಯಕರು ಪಕ್ಷ ತೊರೆದು ಅಕಾಲಿ ದಳ ಸೇರಿದ್ದಾರೆ. ಹಿಂದೆ ಹಲವು ಸಲ ಈ ಕಾಯ್ದೆಗಳ ಅಪಾಯದ ಕುರಿತು ನಮ್ಮ ಕೇಂದ್ರ ನಾಯಕರೊಂದಿಗೆ ಗಂಭೀರವಾಗಿ ಚರ್ಚಿಸಿದ್ದೇನೆ. ಆದರೆ ಕೇಂದ್ರ ನಾಯಕತ್ವಕ್ಕೆ ಹಠವೇ ಮುಖ್ಯವಾದ ಕಾರಣಕ್ಕೆ ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ ” ಎಂದು ಮಂಜಿಂದರ್ ಸಿಂಗ್ ಹೇಳಿದ್ದಾರೆ.

ಫೆಬ್ರವರಿ 15 ರಂದು ಪುರಸಭೆ ಚುನಾವಣೆಗಳು ನಡೆಯಲಿದ್ದು, ಕೃಷಿ ಕಾಯ್ದೆಗಳ ಕುರಿತಾದ ಕೇಂದ್ರದ ನಿಲುವಿಗೆ ಪಂಜಾಬ್ ಬಿಜೆಪಿಯಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಅಸಮಾಧಾನ ಭುಗಿಲೇಳುತ್ತಿದೆ.

ರಾಜ್ಯದ 31 ಬಿಜೆಪಿ ನಾಯಕರ ಮನೆಗಳ ಹೊರಗೆ ರೈತರ ಅನಿರ್ದಿಷ್ಟ ಆಂದೋಲನಗಳು ಮುಂದುವರಿದಿವೆ. ಸಾರ್ವಜನಿಕ ಸಮಾರಂಭಕ್ಕಾಗಿ ಬಿಜೆಪಿ ನಾಯಕರು ಮನೆಗಳಿಂದ ಹೊರಬಂದಾಗಲೆಲ್ಲಾ ರೈತರ ಪ್ರತಿರೋಧವನ್ನು ಎದುರಿಸುತ್ತಿದ್ದಾರೆ. ಪ್ರತಿಭಟನಾಕಾರರು ಬತಿಂಡಾ ಹೋಟೆಲ್ ಹೊರಗೆ ಶನಿವಾರ ಧರಣಿ ನಡೆಸಿದರು, ಅಲ್ಲಿ ಮಾಜಿ ಸಚಿವ, ಬಿಜೆಪಿಯ ಮನೋರಂಜನ್ ಕಲಿಯಾ ಸಭೆ ನಡೆಸಲು ನಿರ್ಧರಿಸಲಾಗಿತ್ತು.

ಇದೇ ವೇಳೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಬಿಜೆಪಿ ನಾಯಕರು ತಮ್ಮೊಂದಿಗೆ ಸೇರಲು ಸಜ್ಜಾಗಿದ್ದಾರೆ ಎಂದು ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಕೂಡ ಹೇಳಿದ್ದಾರೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಹಸಿದಾಗ ತಿನ್ನುವುದು ರೊಟ್ಟಿಯನ್ನೇ ವಿನಃ ಜಿಯೋ ಸಿಮ್‌‌ನಲ್ಲ: ಸಿಮರ್ ಬಲ್ ಸಿಂಗ್ಸಿಮರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...