Homeಮುಖಪುಟಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಮುಂದಿನ ತಿಂಗಳು ಪಂಜಾಬಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿದ್ದು, ಈ ನಡುವೆ ಕಳೆದ 10 ದಿನಗಳಲ್ಲಿ 15 ಕ್ಕೂ ಹೆಚ್ಚು ಬಿಜೆಪಿ ನಾಯಕರು ಪಕ್ಷ ತೊರೆದು ಅಕಾಲಿ ದಳ ಸೇರಿದ್ದಾರೆ.

- Advertisement -
- Advertisement -

ರೈತರ ಆಂದೋಲನಕ್ಕೆ ಶೀಘ್ರ ಅಂತ್ಯವಂತೂ ಕಾಣುತ್ತಿಲ್ಲ. ಸರ್ಕಾರದೊಂದಿಗಿನ ಮಾತುಕತೆ ಸ್ಥಗಿತಗೊಂಡಿದ್ದರಿಂದ, ಪಂಜಾಬ್ ಬಿಜೆಪಿಯ ಉನ್ನತ ನಾಯಕರಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಹಿರಿಯ ಬಿಜೆಪಿ ನಾಯಕಿ ಮತ್ತು ರಾಷ್ಟ್ರೀಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕಾಂತಾ ಚಾವ್ಲಾ “ಆಂದೋಲನ ಇಷ್ಟು ದಿನ ನಡೆಯಲು ಅವಕಾಶ ನೀಡಬಾರದಿತ್ತು ಮತ್ತು ಪ್ರಧಾನಿ ಅವರು ಬಯಸಿದಲ್ಲಿ ‘ಒಂದು ದಿನದಲ್ಲಿ’ ಪರಿಸ್ಥಿತಿಯನ್ನು ಪರಿಹರಿಸಬಹುದು ಎಂದು ಶನಿವಾರ ಹೇಳಿದ್ದಾರೆ.

ಮುಂದಿನ ತಿಂಗಳು ಪಂಜಾಬಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿದ್ದು ಇದು ಅಲ್ಲಿನ ಬಿಜೆಪಿಯಲ್ಲಿ ಆತಂಕ ಮೂಡಿಸಿದೆ. ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆಯಬಹುದೆಂದು ಪಂಜಾಬ್ ಬಿಜೆಪಿಯ ಹಲವು ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.
ಇಷ್ಟು ದಿನ ಪ್ರತಿಭಟನೆ ನಡೆಯುತ್ತಿದ್ದರೂ ಶಾಂತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ರೈತರು “ಜಗತ್ತಿಗೆ ಒಂದು ಮಾದರಿಯನ್ನು ನೀಡಿದ್ದಾರೆ” ಎಂದು ಬಿಜೆಪಿ ನಾಯಕಿ ಲಕ್ಷ್ಮೀ ಕಾಂತಾ ಚಾವ್ಲಾ ಶನಿವಾರದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಮಾಜಿ ಸಚಿವೆ, 78 ವರ್ಷದ ಚಾವ್ಲಾ ಅವರು ದಿ ಸಂಡೇ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ, “ಭಾರತದ ಪ್ರಜೆಯಾಗಿ ಮಾತನಾಡುತ್ತಿದ್ದೇನೆ, ಬಿಜೆಪಿ ನಾಯಕಿಯಾಗಿ ಅಲ್ಲ. ಯಾವುದೇ ಪ್ರತಿಭಟನೆ ಇಷ್ಟು ದಿನ ನಡೆಯಬಾರದು ಎಂದು ನಾನು ಭಾವಿಸುತ್ತೇನೆ. ಅದಕ್ಕೆ ಪರಿಹಾರವನ್ನು ಬೇಗನೆ ಕಂಡುಹಿಡಿಯಬೇಕು. ಡಿಸೆಂಬರ್ ಮಧ್ಯದಲ್ಲಿ, ಶೀತ ಅಥವಾ ಆತ್ಮಹತ್ಯೆಯಿಯ ಕಾರಣಕ್ಕೆ ಸಾಯುತ್ತಿರುವ ರೈತರ ಸಂಖ್ಯೆ 30 ಕ್ಕೆ ತಲುಪಿದ ನಂತರ, ನಾನು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ. ಕೃಷಿ ಸಚಿವರಿಗೆ ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗದಿದ್ದರೆ, ಪ್ರಧಾನಿ ಈ ವಿಷಯವನ್ನು ಕೈಗೆತ್ತಿಕೊಂಡು ಪರಿಹರಿಸಬೇಕು’ ಎಂದು ಅವರು ಹೇಳಿದ್ದಾರೆ.

‘ಪ್ರಧಾನಿ ಸ್ವತಃ ರೈತರೊಂದಿಗೆ ಕುಳಿತು ಪರಿಹಾರ ಕಂಡುಕೊಳ್ಳಬೇಕು. ಪ್ರಧಾನಮಂತ್ರಿ ಬಯಸಿದರೆ, ಒಂದು ದಿನದಲ್ಲಿ ಪರಿಹಾರವನ್ನು ಕಂಡುಹಿಡಿಯಬಹುದು ಎಂದು ನಾನು ಭಾವಿಸುತ್ತೇನೆ’ ಎಂದು ಲಕ್ಷ್ಮೀ ಕಾಂತಾ ಚಾವ್ಲಾ ಹೇಳಿದ್ದಾರೆ.

ಮಾಲ್ವಾ ಮೂಲದ ಬಿಜೆಪಿ ನಾಯಕರೊಬ್ಬರು ಪ್ರತಿಭಟನೆಯ ನಿಜವಾದ ಚಿತ್ರಣವನ್ನು ದೆಹಲಿ ನಾಯಕತ್ವಕ್ಕೆ ಪ್ರಸ್ತುತಪಡಿಸಲು ರಾಜ್ಯ ಘಟಕ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆಯ ಹೊರತಾಗಿಯೂ ಸಂಸತ್ತಿನಲ್ಲಿ ಕೃಷಿ ಸುಗ್ರೀವಾಜ್ಞೆಗಳನ್ನು ಅಂಗೀಕರಿಸಲಾಯಿತು. ನಂತರ, ಅಕಾಲಿ ದಳವು ನಮ್ಮೊಂದಿಗಿನ 27 ವರ್ಷಗಳ ಮೈತ್ರಿಯನ್ನು ಮುರಿದುಕೊಂಡಿತು. ಆಗಲೂ ನಮ್ಮ ಪಕ್ಷವು ಎಚ್ಚರಗೊಳ್ಳಲಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ, ರೈತರು ರೈಲ್ ರೋಕೊ ಮತ್ತು ಅನಿರ್ದಿಷ್ಟ ಪ್ರತಿಭಟನೆಗಳನ್ನು ಅಕ್ಟೋಬರ್‌ನಲ್ಲಿ ಪ್ರಾರಂಭಿಸಿದರೂ, ಕೇಂದ್ರ ಸಚಿವರೊಂದಿಗೆ ಮೊದಲ ಸಭೆಯನ್ನು ತುಂಬ ತಡವಾಗಿ, (ನವೆಂಬರ್ 13 ರಂದು) ಏರ್ಪಡಿಸಲಾಯಿತು. ರೈತರು ದೆಹಲಿ ಗಡಿಗಳಿಗೆ ತಲುಪಿದಾಗಿನಿಂದ ಹತ್ತು ಸುತ್ತಿನ ಸಭೆಗಳು ನಡೆದಿವೆ, ಆದರೆ ಯಾವುದೇ ಪ್ರಗತಿಯಿಲ್ಲ’ ಎಂದು ಬಿಜೆಪಿ ನಾಯಕ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆಗಳ ಕುರಿತ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಅಕ್ಟೋಬರ್ 15 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮಾಜಿ ರಾಜ್ಯ ಕಾರ್ಯದರ್ಶಿ ಮಂಜಿಂದರ್ ಸಿಂಗ್, ರಾಜ್ಯದ ಹಿರಿಯ ನಾಯಕತ್ವ ಎಂದಿಗೂ ಆಂದೋಲನವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹೇಳುತ್ತಾರೆ.

‘ಕಳೆದ 10 ದಿನಗಳಲ್ಲಿ 15 ಕ್ಕೂ ಹೆಚ್ಚು ಬಿಜೆಪಿ ನಾಯಕರು ಪಕ್ಷ ತೊರೆದು ಅಕಾಲಿ ದಳ ಸೇರಿದ್ದಾರೆ. ಹಿಂದೆ ಹಲವು ಸಲ ಈ ಕಾಯ್ದೆಗಳ ಅಪಾಯದ ಕುರಿತು ನಮ್ಮ ಕೇಂದ್ರ ನಾಯಕರೊಂದಿಗೆ ಗಂಭೀರವಾಗಿ ಚರ್ಚಿಸಿದ್ದೇನೆ. ಆದರೆ ಕೇಂದ್ರ ನಾಯಕತ್ವಕ್ಕೆ ಹಠವೇ ಮುಖ್ಯವಾದ ಕಾರಣಕ್ಕೆ ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ ” ಎಂದು ಮಂಜಿಂದರ್ ಸಿಂಗ್ ಹೇಳಿದ್ದಾರೆ.

ಫೆಬ್ರವರಿ 15 ರಂದು ಪುರಸಭೆ ಚುನಾವಣೆಗಳು ನಡೆಯಲಿದ್ದು, ಕೃಷಿ ಕಾಯ್ದೆಗಳ ಕುರಿತಾದ ಕೇಂದ್ರದ ನಿಲುವಿಗೆ ಪಂಜಾಬ್ ಬಿಜೆಪಿಯಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಅಸಮಾಧಾನ ಭುಗಿಲೇಳುತ್ತಿದೆ.

ರಾಜ್ಯದ 31 ಬಿಜೆಪಿ ನಾಯಕರ ಮನೆಗಳ ಹೊರಗೆ ರೈತರ ಅನಿರ್ದಿಷ್ಟ ಆಂದೋಲನಗಳು ಮುಂದುವರಿದಿವೆ. ಸಾರ್ವಜನಿಕ ಸಮಾರಂಭಕ್ಕಾಗಿ ಬಿಜೆಪಿ ನಾಯಕರು ಮನೆಗಳಿಂದ ಹೊರಬಂದಾಗಲೆಲ್ಲಾ ರೈತರ ಪ್ರತಿರೋಧವನ್ನು ಎದುರಿಸುತ್ತಿದ್ದಾರೆ. ಪ್ರತಿಭಟನಾಕಾರರು ಬತಿಂಡಾ ಹೋಟೆಲ್ ಹೊರಗೆ ಶನಿವಾರ ಧರಣಿ ನಡೆಸಿದರು, ಅಲ್ಲಿ ಮಾಜಿ ಸಚಿವ, ಬಿಜೆಪಿಯ ಮನೋರಂಜನ್ ಕಲಿಯಾ ಸಭೆ ನಡೆಸಲು ನಿರ್ಧರಿಸಲಾಗಿತ್ತು.

ಇದೇ ವೇಳೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಬಿಜೆಪಿ ನಾಯಕರು ತಮ್ಮೊಂದಿಗೆ ಸೇರಲು ಸಜ್ಜಾಗಿದ್ದಾರೆ ಎಂದು ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಕೂಡ ಹೇಳಿದ್ದಾರೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಹಸಿದಾಗ ತಿನ್ನುವುದು ರೊಟ್ಟಿಯನ್ನೇ ವಿನಃ ಜಿಯೋ ಸಿಮ್‌‌ನಲ್ಲ: ಸಿಮರ್ ಬಲ್ ಸಿಂಗ್ಸಿಮರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...