Homeಮುಖಪುಟಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಮುಂದಿನ ತಿಂಗಳು ಪಂಜಾಬಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿದ್ದು, ಈ ನಡುವೆ ಕಳೆದ 10 ದಿನಗಳಲ್ಲಿ 15 ಕ್ಕೂ ಹೆಚ್ಚು ಬಿಜೆಪಿ ನಾಯಕರು ಪಕ್ಷ ತೊರೆದು ಅಕಾಲಿ ದಳ ಸೇರಿದ್ದಾರೆ.

- Advertisement -
- Advertisement -

ರೈತರ ಆಂದೋಲನಕ್ಕೆ ಶೀಘ್ರ ಅಂತ್ಯವಂತೂ ಕಾಣುತ್ತಿಲ್ಲ. ಸರ್ಕಾರದೊಂದಿಗಿನ ಮಾತುಕತೆ ಸ್ಥಗಿತಗೊಂಡಿದ್ದರಿಂದ, ಪಂಜಾಬ್ ಬಿಜೆಪಿಯ ಉನ್ನತ ನಾಯಕರಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಹಿರಿಯ ಬಿಜೆಪಿ ನಾಯಕಿ ಮತ್ತು ರಾಷ್ಟ್ರೀಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕಾಂತಾ ಚಾವ್ಲಾ “ಆಂದೋಲನ ಇಷ್ಟು ದಿನ ನಡೆಯಲು ಅವಕಾಶ ನೀಡಬಾರದಿತ್ತು ಮತ್ತು ಪ್ರಧಾನಿ ಅವರು ಬಯಸಿದಲ್ಲಿ ‘ಒಂದು ದಿನದಲ್ಲಿ’ ಪರಿಸ್ಥಿತಿಯನ್ನು ಪರಿಹರಿಸಬಹುದು ಎಂದು ಶನಿವಾರ ಹೇಳಿದ್ದಾರೆ.

ಮುಂದಿನ ತಿಂಗಳು ಪಂಜಾಬಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿದ್ದು ಇದು ಅಲ್ಲಿನ ಬಿಜೆಪಿಯಲ್ಲಿ ಆತಂಕ ಮೂಡಿಸಿದೆ. ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆಯಬಹುದೆಂದು ಪಂಜಾಬ್ ಬಿಜೆಪಿಯ ಹಲವು ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.
ಇಷ್ಟು ದಿನ ಪ್ರತಿಭಟನೆ ನಡೆಯುತ್ತಿದ್ದರೂ ಶಾಂತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ರೈತರು “ಜಗತ್ತಿಗೆ ಒಂದು ಮಾದರಿಯನ್ನು ನೀಡಿದ್ದಾರೆ” ಎಂದು ಬಿಜೆಪಿ ನಾಯಕಿ ಲಕ್ಷ್ಮೀ ಕಾಂತಾ ಚಾವ್ಲಾ ಶನಿವಾರದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಮಾಜಿ ಸಚಿವೆ, 78 ವರ್ಷದ ಚಾವ್ಲಾ ಅವರು ದಿ ಸಂಡೇ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ, “ಭಾರತದ ಪ್ರಜೆಯಾಗಿ ಮಾತನಾಡುತ್ತಿದ್ದೇನೆ, ಬಿಜೆಪಿ ನಾಯಕಿಯಾಗಿ ಅಲ್ಲ. ಯಾವುದೇ ಪ್ರತಿಭಟನೆ ಇಷ್ಟು ದಿನ ನಡೆಯಬಾರದು ಎಂದು ನಾನು ಭಾವಿಸುತ್ತೇನೆ. ಅದಕ್ಕೆ ಪರಿಹಾರವನ್ನು ಬೇಗನೆ ಕಂಡುಹಿಡಿಯಬೇಕು. ಡಿಸೆಂಬರ್ ಮಧ್ಯದಲ್ಲಿ, ಶೀತ ಅಥವಾ ಆತ್ಮಹತ್ಯೆಯಿಯ ಕಾರಣಕ್ಕೆ ಸಾಯುತ್ತಿರುವ ರೈತರ ಸಂಖ್ಯೆ 30 ಕ್ಕೆ ತಲುಪಿದ ನಂತರ, ನಾನು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ. ಕೃಷಿ ಸಚಿವರಿಗೆ ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗದಿದ್ದರೆ, ಪ್ರಧಾನಿ ಈ ವಿಷಯವನ್ನು ಕೈಗೆತ್ತಿಕೊಂಡು ಪರಿಹರಿಸಬೇಕು’ ಎಂದು ಅವರು ಹೇಳಿದ್ದಾರೆ.

‘ಪ್ರಧಾನಿ ಸ್ವತಃ ರೈತರೊಂದಿಗೆ ಕುಳಿತು ಪರಿಹಾರ ಕಂಡುಕೊಳ್ಳಬೇಕು. ಪ್ರಧಾನಮಂತ್ರಿ ಬಯಸಿದರೆ, ಒಂದು ದಿನದಲ್ಲಿ ಪರಿಹಾರವನ್ನು ಕಂಡುಹಿಡಿಯಬಹುದು ಎಂದು ನಾನು ಭಾವಿಸುತ್ತೇನೆ’ ಎಂದು ಲಕ್ಷ್ಮೀ ಕಾಂತಾ ಚಾವ್ಲಾ ಹೇಳಿದ್ದಾರೆ.

ಮಾಲ್ವಾ ಮೂಲದ ಬಿಜೆಪಿ ನಾಯಕರೊಬ್ಬರು ಪ್ರತಿಭಟನೆಯ ನಿಜವಾದ ಚಿತ್ರಣವನ್ನು ದೆಹಲಿ ನಾಯಕತ್ವಕ್ಕೆ ಪ್ರಸ್ತುತಪಡಿಸಲು ರಾಜ್ಯ ಘಟಕ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆಯ ಹೊರತಾಗಿಯೂ ಸಂಸತ್ತಿನಲ್ಲಿ ಕೃಷಿ ಸುಗ್ರೀವಾಜ್ಞೆಗಳನ್ನು ಅಂಗೀಕರಿಸಲಾಯಿತು. ನಂತರ, ಅಕಾಲಿ ದಳವು ನಮ್ಮೊಂದಿಗಿನ 27 ವರ್ಷಗಳ ಮೈತ್ರಿಯನ್ನು ಮುರಿದುಕೊಂಡಿತು. ಆಗಲೂ ನಮ್ಮ ಪಕ್ಷವು ಎಚ್ಚರಗೊಳ್ಳಲಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ, ರೈತರು ರೈಲ್ ರೋಕೊ ಮತ್ತು ಅನಿರ್ದಿಷ್ಟ ಪ್ರತಿಭಟನೆಗಳನ್ನು ಅಕ್ಟೋಬರ್‌ನಲ್ಲಿ ಪ್ರಾರಂಭಿಸಿದರೂ, ಕೇಂದ್ರ ಸಚಿವರೊಂದಿಗೆ ಮೊದಲ ಸಭೆಯನ್ನು ತುಂಬ ತಡವಾಗಿ, (ನವೆಂಬರ್ 13 ರಂದು) ಏರ್ಪಡಿಸಲಾಯಿತು. ರೈತರು ದೆಹಲಿ ಗಡಿಗಳಿಗೆ ತಲುಪಿದಾಗಿನಿಂದ ಹತ್ತು ಸುತ್ತಿನ ಸಭೆಗಳು ನಡೆದಿವೆ, ಆದರೆ ಯಾವುದೇ ಪ್ರಗತಿಯಿಲ್ಲ’ ಎಂದು ಬಿಜೆಪಿ ನಾಯಕ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆಗಳ ಕುರಿತ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಅಕ್ಟೋಬರ್ 15 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮಾಜಿ ರಾಜ್ಯ ಕಾರ್ಯದರ್ಶಿ ಮಂಜಿಂದರ್ ಸಿಂಗ್, ರಾಜ್ಯದ ಹಿರಿಯ ನಾಯಕತ್ವ ಎಂದಿಗೂ ಆಂದೋಲನವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹೇಳುತ್ತಾರೆ.

‘ಕಳೆದ 10 ದಿನಗಳಲ್ಲಿ 15 ಕ್ಕೂ ಹೆಚ್ಚು ಬಿಜೆಪಿ ನಾಯಕರು ಪಕ್ಷ ತೊರೆದು ಅಕಾಲಿ ದಳ ಸೇರಿದ್ದಾರೆ. ಹಿಂದೆ ಹಲವು ಸಲ ಈ ಕಾಯ್ದೆಗಳ ಅಪಾಯದ ಕುರಿತು ನಮ್ಮ ಕೇಂದ್ರ ನಾಯಕರೊಂದಿಗೆ ಗಂಭೀರವಾಗಿ ಚರ್ಚಿಸಿದ್ದೇನೆ. ಆದರೆ ಕೇಂದ್ರ ನಾಯಕತ್ವಕ್ಕೆ ಹಠವೇ ಮುಖ್ಯವಾದ ಕಾರಣಕ್ಕೆ ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ ” ಎಂದು ಮಂಜಿಂದರ್ ಸಿಂಗ್ ಹೇಳಿದ್ದಾರೆ.

ಫೆಬ್ರವರಿ 15 ರಂದು ಪುರಸಭೆ ಚುನಾವಣೆಗಳು ನಡೆಯಲಿದ್ದು, ಕೃಷಿ ಕಾಯ್ದೆಗಳ ಕುರಿತಾದ ಕೇಂದ್ರದ ನಿಲುವಿಗೆ ಪಂಜಾಬ್ ಬಿಜೆಪಿಯಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಅಸಮಾಧಾನ ಭುಗಿಲೇಳುತ್ತಿದೆ.

ರಾಜ್ಯದ 31 ಬಿಜೆಪಿ ನಾಯಕರ ಮನೆಗಳ ಹೊರಗೆ ರೈತರ ಅನಿರ್ದಿಷ್ಟ ಆಂದೋಲನಗಳು ಮುಂದುವರಿದಿವೆ. ಸಾರ್ವಜನಿಕ ಸಮಾರಂಭಕ್ಕಾಗಿ ಬಿಜೆಪಿ ನಾಯಕರು ಮನೆಗಳಿಂದ ಹೊರಬಂದಾಗಲೆಲ್ಲಾ ರೈತರ ಪ್ರತಿರೋಧವನ್ನು ಎದುರಿಸುತ್ತಿದ್ದಾರೆ. ಪ್ರತಿಭಟನಾಕಾರರು ಬತಿಂಡಾ ಹೋಟೆಲ್ ಹೊರಗೆ ಶನಿವಾರ ಧರಣಿ ನಡೆಸಿದರು, ಅಲ್ಲಿ ಮಾಜಿ ಸಚಿವ, ಬಿಜೆಪಿಯ ಮನೋರಂಜನ್ ಕಲಿಯಾ ಸಭೆ ನಡೆಸಲು ನಿರ್ಧರಿಸಲಾಗಿತ್ತು.

ಇದೇ ವೇಳೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಬಿಜೆಪಿ ನಾಯಕರು ತಮ್ಮೊಂದಿಗೆ ಸೇರಲು ಸಜ್ಜಾಗಿದ್ದಾರೆ ಎಂದು ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಕೂಡ ಹೇಳಿದ್ದಾರೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಹಸಿದಾಗ ತಿನ್ನುವುದು ರೊಟ್ಟಿಯನ್ನೇ ವಿನಃ ಜಿಯೋ ಸಿಮ್‌‌ನಲ್ಲ: ಸಿಮರ್ ಬಲ್ ಸಿಂಗ್ಸಿಮರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...