Homeಮುಖಪುಟಕೃಷಿ ಕಾನೂನುಗಳ ರದ್ಧತಿ ಮಸೂದೆ -2021 ಹುತಾತ್ಮ ರೈತರಿಗೆ ಅರ್ಪಣೆ: ರಾಕೇಶ್ ಟಿಕಾಯತ್

ಕೃಷಿ ಕಾನೂನುಗಳ ರದ್ಧತಿ ಮಸೂದೆ -2021 ಹುತಾತ್ಮ ರೈತರಿಗೆ ಅರ್ಪಣೆ: ರಾಕೇಶ್ ಟಿಕಾಯತ್

- Advertisement -
- Advertisement -

ಲೋಕಸಭಾ ಅಧಿವೇಶನದಲ್ಲಿ ಕೃಷಿ ಕಾನೂನುಗಳ ರದ್ಧತಿ ಮಸೂದೆ -2021 ಯನ್ನು ಸೋಮವಾರ ಅಂಗೀಕರಿಸುತ್ತಿದ್ದಂತೆ, ಭಾರತೀಯ ಕಿಸಾನ್ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್ ಟಿಕಾಯತ್, ಈ ಕಾಯ್ದೆಯನ್ನು ಕಳೆದ ವರ್ಷ ನವೆಂಬರ್‌ನಿಂದ ಈವರೆಗೂ ರೈತ ಹೋರಾಟದಲ್ಲಿ ಹುತಾತ್ಮರಾದ 750 ರೈತರಿಗೆ ಅರ್ಪಿಸುತ್ತೇವೆ ಎಂದು ಹೇಳಿದ್ದಾರೆ.

ಸರ್ಕಾರದ ರದ್ದತಿ ಕ್ರಮದ ಬಗ್ಗೆ ಮಾತನಾಡಿದ ಟಿಕಾಯತ್, ರೈತರ ಆಂದೋಲನ ಮುಂದುವರಿಯುತ್ತದೆ. “ಕೃಷಿ ಕಾನೂನು ರದ್ದತಿ ಮಸೂದೆಯು ಆಂದೋಲನದ ಸಮಯದಲ್ಲಿ ಮಡಿದ 750 ರೈತರಿಗೆ ಶ್ರದ್ಧಾಂಜಲಿಯಾಗಿದೆ. ನಮಗಿನ್ನು MSP (ಕನಿಷ್ಠ ಬೆಂಬಲ ಬೆಲೆ) ಖಾತ್ರಿಯ ಕಾನೂನು ಜಾರಿಯಾಗಿಲ್ಲ. ಎಂಎಸ್ಪಿ ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ’’ ಎಂದು ಟಿಕಾಯತ್ ಹೇಳಿದ್ದಾರೆ.

ಭಾನುವಾರವಷ್ಟೆ ಬಿಕೆಯು ಮುಖಂಡರಾದ ಟಿಕಾಯತ್ ರೈತ ಸಂಘಟನೆಗಳು ಕೇಂದ್ರದೊಂದಿಗೆ ಮಾತನಾಡದೇ, ದೆಹಲಿ ಗಡಿಗಳಲ್ಲಿರುವ ಪ್ರತಿಭಟನಾ ಸ್ಥಳಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಲೋಕಸಭೆಯಲ್ಲಿ ಚರ್ಚೆಯಿಲ್ಲದೆ ಕೃಷಿ ಕಾಯ್ದೆಗಳ ರದ್ದತಿ ಮಸೂದೆ ಅಂಗೀಕಾರ

ಕೇಂದ್ರದೊಂದಿಗೆ ಮಾತುಕತೆ ನಡೆಸಲು ರೈತ ಸಂಘಟನೆಗಳು ಮುಕ್ತವಾಗಿವೆ ಎಂದು ಹೇಳಿದ ಟಿಕಾಯತ್, ರೈತರು ಸರ್ಕಾರದ ಮಧ್ಯಪ್ರವೇಶವಿಲ್ಲದೇ ಆಂದೋಲನವನ್ನು ಕೊನೆಗೊಳಿಸಬೇಕೆಂದು ಕೇಂದ್ರವು ಬಯಸುತ್ತದೆ ಎಂದು ತಿಳಿಸಿದರು.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ಪರಿಹಾರ ಕಂಡುಕೊಂಡಿರುವ ಕೇಂದ್ರವು ಕಳೆದ ಒಂದು ವರ್ಷದಲ್ಲಿ ಆಗಿರುವ ಹಾನಿಯ ಬಗ್ಗೆ ಈಗ ಮಾತನಾಡಬೇಕು. ಸರ್ಕಾರವು ಮೋಸ, ಸುಳ್ಳು ಹೇಳಿಕೆಗಳೊಂದಿಗೆ ವಿಷಯವನ್ನು ಇತ್ಯರ್ಥಗೊಳಿಸಲು ಬಯಸಿದರೆ ಸಮಸ್ಯೆ ಕೊನೆಗೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರದಂದು ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ಅಧಿಕೃತವಾಗಿ ಹಿಂಪಡೆಯುವ ಉದ್ದೇಶದಿಂದ ಕೃಷಿ ಕಾನೂನುಗಳ ರದ್ಧತಿ ಮಸೂದೆ-2021 ಅನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರು ಮಂಡಿಸಿದರು. ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಯಾವುದೇ ಚರ್ಚೆಯಿಲ್ಲದೆ ಮಸೂದೆಯನ್ನು ಕೇವಲ ನಾಲ್ಕು ನಿಮಿಷದಲ್ಲಿ ಅಂಗೀಕರಿಸಲಾಯಿತು.


ಇದನ್ನೂ ಓದಿ: ರೈತನ ಬೆತ್ತಲೆ ಸುಲಿದು ಪುಟಗೋಸಿ ಎಸೆವ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....