Homeಚಳವಳಿವಿವಾದಿತ ಕೃಷಿ ಕಾಯ್ದೆಗಳ ಬಗ್ಗೆ ಅಧ್ಯಯನ: ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಿದ ಸ್ಥಾಯಿ ಸಮಿತಿ

ವಿವಾದಿತ ಕೃಷಿ ಕಾಯ್ದೆಗಳ ಬಗ್ಗೆ ಅಧ್ಯಯನ: ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಿದ ಸ್ಥಾಯಿ ಸಮಿತಿ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿದ್ದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಅಧ್ಯಯನ ಮಾಡಲು ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ನಾಲ್ವರು ಸದಸ್ಯರ ಸ್ಥಾಯಿ ಸಮಿತಿಯು ಕಾನೂನುಗಳ ಬಗ್ಗೆ ತನ್ನ ವರದಿಯನ್ನು ಮೊಹರು ಮಾಡಿದ ಕವರ್‌ನಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಸಮಿತಿಯ ಸದಸ್ಯರಲ್ಲೊಬ್ಬರಾದ ಅನಿಲ್ ಘನ್ವಾತ್, “ಮಾರ್ಚ್ 19 ರಂದು ವರದಿಯನ್ನು ಮೊಹರು ಮಾಡಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ” ಎಂದು ಹೇಳಿದ್ದಾರೆ. ಸುಮಾರು 85 ರೈತ ಸಂಘಟನೆಗಳೊಂದಿಗೆ ಸಭೆ ನಡೆಸಿ ಕೆಲವು ತಿಂಗಳುಗಳವರೆಗೆ ಈ ವಿಷಯದ ಬಗ್ಗೆ ಚರ್ಚಿಸಿದ ನಂತರ ಸಮಿತಿ ತನ್ನ ವರದಿಯನ್ನು ಸಲ್ಲಿಸಿದೆ ಎಂದು ಹೇಳಲಾಗಿದೆ

ಸಮಿತಿ ಸಲ್ಲಿಸಿರುವ ವರದಿಯ ವಿಷಯವು ಗೌಪ್ಯವಾಗಿರುವುದರಿಂದ ಅದರಲ್ಲಿನ ವಿಷಯಗಳು ಇದುವರೆಗೂ ಬಹಿರಂಗಗೊಂಡಿಲ್ಲ ಮತ್ತು ನ್ಯಾಯಾಲಯವು ಏಪ್ರಿಲ್ 5 ರಂದು ವಿಚಾರಣೆ ನಡೆಸಲಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಜನವರಿ 12 ರಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್ ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರು ಮೂರು ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಿದ್ದರು. ಈ ಬಿಕ್ಕಟ್ಟನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ನಾಲ್ವರು ಸದಸ್ಯರ ಅಧ್ಯಯನ ಸಮಿತಿಯನ್ನೂ ನೇಮಕ ಮಾಡಿತ್ತು.

ಇದನ್ನೂ ಓದಿ: ಸ್ಥಾಯಿ ಸಮಿತಿ ವರದಿ ಒಪ್ಪದ ಕಾಂಗ್ರೆಸ್ – ಮೂರೂ ಕೃಷಿ ಕಾಯ್ದೆ ರದ್ಧುಪಡಿಸಲು ರಾಹುಲ್ ಒತ್ತಾಯ

ನ್ಯಾಯಾಲಯ ನೇಮಕ ಮಾಡಿದ ಸಮಿತಿಯಲ್ಲಿ ಭೂಪಿಂದರ್ ಸಿಂಗ್ ಮನ್ (ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ), ಪ್ರಮೋದ್ ಕುಮಾರ್ ಜೋಶಿ (ಕೃಷಿ ಅರ್ಥಶಾಸ್ತ್ರಜ್ಞ), ಅಶೋಕ್ ಗುಲಾಟಿ (ಕೃಷಿ ಅರ್ಥಶಾಸ್ತ್ರಜ್ಞ ಮತ್ತು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಮಾಜಿ ಅಧ್ಯಕ್ಷರು) ಮತ್ತು ಅನಿಲ್ ಘನ್ವತ್ (ಶೆಟ್ಕಾರಿ ಸಂಘಟನೆಯ ಅಧ್ಯಕ್ಷ ) ಇದ್ದರು. ಈ ಸದಸ್ಯರೆಲ್ಲರೂ ಬಿಜೆಪಿ ಮತ್ತು ಕೃಷಿ ಕಾಯ್ದೆಗಳ ಪರವಾಗಿರುವವರು ಎಂದು ದೊಡ್ಡ ಆರೋಪ ವ್ಯಕ್ತವಾಗಿತ್ತು. ಹಾಗಾಗಿ ಸಂಯುಕ್ತ ಕಿಸಾನ್ ಮೋರ್ಚಾ ಈ ಅಧ್ಯಯನದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಿಸಿತ್ತು.

ಕೆಲವು ದಿನಗಳ ನಂತರ, ಸಮಿತಿ ಸದಸ್ಯರಲ್ಲೊಬ್ಬರಾದ ಭೂಪಿಂದರ್ ಸಿಂಗ್ ಮನ್ ಅವರು ದೇಶದ ರೈತರ ಹಿತಾಸಕ್ತಿಗಳಿಗೆ ಧಕ್ಕೆಯುಂಟುಮಾಡಲು ಬಯಸುವುದಿಲ್ಲ ಎಂದು ಹೇಳಿ ಸದಸ್ಯತ್ವದಿಂದ ಹಿಂದೆ ಸರಿದಿದ್ದರು. “ಅಗತ್ಯ ಸರಕು ತಿದ್ದುಪಡಿ ಕಾಯ್ದೆ 2020” ಅನ್ನು ಜಾರಿಗೆ ತರಲು ಸರ್ಕಾರವನ್ನು ಕೇಳಿದ ಸ್ಥಾಯಿ ಸಮಿತಿಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ ನಂತರ, ಸಮಿತಿಯ ಭಾಗವಾಗಿರುವ ಕಾಂಗ್ರೆಸ್ ಸಂಸದರು ಅದರಿಂದ ಅಂತರ ಕಾಪಾಡಿಕೊಳ್ಳಲು ಯತ್ನಿಸಿದ್ದರು.

ಸಮಿತಿ ರಚನೆಯ ನಂತರವು ಅನೇಕ ರೈತ ಮುಖಂಡರು ಯಾವುದೇ ಸಮಿತಿಯ ನಡಾವಳಿಗಳಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದರು. ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸುವವರೆಗೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಪ್ರತ್ಯೇಕ ಶಾಸನವನ್ನು ಜಾರಿಗೆ ತರುವವರೆಗೆ ಅವರು ತಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದಿದ್ದರು.


ಇದನ್ನೂ ಓದಿ: ಅಗತ್ಯ ಸರಕು ಕಾಯ್ದೆ ಪರ ಸ್ಥಾಯಿ ಸಮಿತಿ: ರೈತ ವಿರೋಧಿ ನಡೆ ಎಂದು ಕಿಸಾನ್‌ ಸಭಾ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...