Homeಚಳವಳಿಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

- Advertisement -
- Advertisement -

ನೀವು ಮೋದಿ ಸರ್ಕಾರ ಪಾಸು ಮಾಡಿರುವ ಮೂರು ಕೃಷಿ ಮಸೂದೆಗಳನ್ನು ಓದಿದರೆ ಅರ್ಥವಾಗುತ್ತದೆ: ಈ ಕಾಯ್ದೆಗಳು ಕೇವಲ ರೈತರಿಗಷ್ಟೇ ಮಾರಕವಲ್ಲ, ಬದಲಿಗೆ ನಮ್ಮ ನಿಮ್ಮಂತಹ ಸಾಮಾನ್ಯ ಜನರ ಬದುಕಿಗೂ ಕೊಳ್ಳಿ ಇಡಲಿವೆ ಎಂಬ ಸತ್ಯ. ಮಾರುಕಟ್ಟೆಗಳು ಬೃಹತ್ ಕಾರ್ಪೋರೇಟ್ ತಿಮಿಂಗಲುಗಳ ವಶವಾಗಲಿದ್ದು, ಈ ಮಾರುಕಟ್ಟೆಗಳು ಅವರ ಬಿಗಿ ಹಿಡಿತಕ್ಕೆ ಒಳಗಾಗಲಿವೆ. ಏಕೆಂದರೆ ಈ ಕಾಯ್ದೆಗಳ ಪರಿಣಾಮವಾಗಿ ಕಾರ್ಪೊರೇಟ್‌ಗಳು ಆಹಾರ ಪದಾರ್ಥಗಳನ್ನು ಅನಿಯಮಿತವಾಗಿ ಸಂಗ್ರಹಿಸಬಹುದು, ಅದೂ ಕಾನೂನಾತ್ಮಕ ಬೆಂಬಲದಿಂದ ಸಂಗ್ರಹಿಸಬಹುದು. ಈ ದೊಡ್ಡ ಕಾರ್ಪೊರೇಟ್‌ಗಳ ಕುತ್ತಿಗೆ ಹಿಸುಕುವ ಬೆಲೆ ಸ್ಪರ್ಧೆಯಿಂದಾಗಿ ರೈತರು ಕೃಷಿಯನ್ನೇ ತೊರೆಯಬಹುದು.

ಈ ಕಾಯ್ದೆಯ ಉಪ-ವಿಭಾಗ 1-ಎ ನ ಕ್ಲಾಜ್ ‘ಬಿ’ ಅನ್ನು ಒಮ್ಮೆ ಓದಿ ನೋಡಿ. ಸಂಗ್ರಹಣಾ ಮಿತಿಯನ್ನು ನಿಯಂತ್ರಿಸುವ ಆದೇಶವು ಯಾವುದೇ ಕೃಷಿ ಉತ್ಪನ್ನಗಳ ನಿರ್ವಹಣೆ ಅಥವಾ ಮೌಲ್ಯ ವರ್ಧನೆಯಲ್ಲಿ ಭಾಗಿಯಾಗುವವರಿಗೆ ಅನ್ವಯಿಸುವುದಿಲ್ಲ. ಅಂತಹ ವ್ಯಕ್ತಿಯ ಸಂಗ್ರಹಣಾ (ಸ್ಟಾಕ್) ಮಿತಿಯು ಸಂಸ್ಕರಿಸಿದ ಸಾಮರ್ಥ್ಯದ ಒಟ್ಟಾರೆ ಸೀಲಿಂಗ್ ಅನ್ನು ಮೀರದಿದ್ದರೆ ಅಥವಾ ರಫ್ತುದಾರನಾಗಿದ್ದಲ್ಲಿ ರಫ್ತು ಬೇಡಿಕೆಯನ್ನು ಮೀರದಿದ್ದಲ್ಲಿ ಆತ ಸುರಕ್ಷಿತ.

ಮೌಲ್ಯ ಸರಪಳಿಯಲ್ಲಿ (ವ್ಯಾಲ್ಯೂ ಚೈನ್) ಭಾಗಿಯಾಗುವವರನ್ನು ಕಾಯ್ದೆಯಲ್ಲಿ ಹೀಗೆ ವ್ಯಾಖ್ಯಾನಿಸಲಾಗಿದೆ: ಯಾವುದೇ ಕೃಷಿ ಉತ್ಪನ್ನಕ್ಕೆ ಸಂಬಂಧಿಸಿದಂತೆ “ಮೌಲ್ಯ ಸರಪಳಿ ಭಾಗಿದಾರರರು” ಎಂಬ ಅಭಿವ್ಯಕ್ತಿ, ಯಾವುದೇ ಉತ್ಪಾದನೆಯಿಂದ ಭಾಗವಹಿಸುವವರ ಗುಂಪನ್ನು ಅರ್ಥೈಸುತ್ತದೆ ಮತ್ತು ಅವರನ್ನು ಒಳಗೊಂಡಿದೆ. ಅದು ಕೃಷಿ ಕ್ಷೇತ್ರದಲ್ಲಿ ಕೃಷಿ ಉತ್ಪನ್ನಗಳ ಅಂತಿಮ ಬಳಕೆಯವರೆಗೂ ವ್ಯಾಪಿಸಿದೆ. ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾರಿಗೆ ಮತ್ತು ವಿತರಣೆಯನ್ನು ಒಳಗೊಂಡಿರುತ್ತದೆ, ಅಲ್ಲಿ ಪ್ರತಿ ಹಂತದಲ್ಲೂ ಉತ್ಪನ್ನಕ್ಕೆ ಮೌಲ್ಯವನ್ನು ಸೇರಿಸಲಾಗುತ್ತದೆ “.

ಇತರ ರೈತರಿಗೆ ಕೆಲವು ನಿರ್ಬಂಧ ಹೇರಲಾಗಿದೆ. ಯಾಕೀ ತಾರತಮ್ಯ? ರೈತರು ಮತ್ತು ಗ್ರಾಹಕರು ಈ ಕಾರ್ಪೊರೇಟ್‌ಗಳ ಮರ್ಜಿಗೆ ಬಿದ್ದು, ಬಿಗ್ ಕಾರ್ಪೊರೇಟ್‌ಗಳಿಗೆ ಕೃಷಿಯ ಮೇಲೆ ನಿಯಂತ್ರಣ ಸಾಧಿಸಲು ಈ ಕಾಯ್ದೆ ಅವಕಾಶ ನೀಡುತ್ತದೆ.

‘ಕ್ಲಾಜ್ ‘ಬಿ’ ಅನ್ವಯ, ಸಂಗ್ರಹಣಾ ಮಿತಿಯನ್ನು ಹೇರುವ ಯಾವುದೇ ಕ್ರಮವು ಬೆಲೆ ಏರಿಕೆಯನ್ನು ಆಧರಿಸುತ್ತದೆ. ಯಾವುದೇ ಕೃಷಿ ಉತ್ಪನ್ನಗಳ ಸಂಗ್ರಹಣೆಯ ಮಿತಿ ಮೇಲೆ ನಿರ್ಬಂಧ ಹೇರುವುದು ಈ ಕೆಳಗಿನ ಅಂಶಗಳನ್ನು ಅವಲಂಭಿಸಿದೆ:
1. ತೋಟಗಾರಿಕಾ ಉತ್ಪನ್ನಗಳ ಚಿಲ್ಲರೆ ಮಾರಾಟ ದರದಲ್ಲಿ ಶೇ. 100ರಷ್ಟು ಏರಿಕೆಯಾದ ಸಂದರ್ಭದಲ್ಲಿ. ಅಥವಾ
2. ನಾಶವಾಗದ ಕೃಷಿ ಆಹಾರ ಪದಾರ್ಥಗಳ ಚಿಲ್ಲರೆ ಬೆಲೆಯಲ್ಲಿ ಶೇ. 50ರಷ್ಟು ಏರಿಕೆಯಾದ ಸಂದರ್ಭದಲ್ಲಿ.
ಈ ಎರಡು ಸಂದರ್ಭಗಳಲ್ಲಿ. ಹನ್ನೆರಡು ತಿಂಗಳುಗಳ ಹಿಂದಿನ ಚಾಲ್ತಿಯಲ್ಲಿರುವ ಬೆಲೆ ಅಥವಾ ಕಳೆದ ಐದು ವರ್ಷಗಳ ಸರಾಸರಿ ಚಿಲ್ಲರೆ ಬೆಲೆ, ಯಾವುದು ಕಡಿಮೆ ಇರುತ್ತದೋ ಅದು ಲಾಗೂ ಆಗುತ್ತದೆ.

1955ರ ಅಗತ್ಯ ವಸ್ತುಗಳ ಕಾಯ್ದೆಗೆ ತಂದ ತಿದ್ದುಪಡಿಯ ಪ್ರಕಾರ,
ಎ.) ಅಸಾಧಾರಣ ಸಂದರ್ಭಗಳಲ್ಲಿ (ಯುದ್ಧ, ಕ್ಷಾಮ, ಅಸಾಧಾರಣ ಬೆಲೆ ಏರಿಕೆ ಮತ್ತು ನೈಸರ್ಗಿಕ ವೈಪರೀತ್ಯ) ಮಾತ್ರ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು, ಆಲೂಗಡ್ಡೆ, ಈರುಳ್ಳಿ, ಖಾದ್ಯ ಎಣ್ಣೆಕಾಳುಗಳು ಮತ್ತು ತೈಲಗಳು ಸೇರಿದಂತೆ ಅಂತಹ ಆಹಾರ ಪದಾರ್ಥಗಳ ಪೂರೈಕೆಯನ್ನು ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ನಿರ್ದಿಷ್ಟಪಡಿಸಿ, ಅಧಿಸೂಚನೆಯ ಮೂಲಕ ಮಾತ್ರ ನಿಯಂತ್ರಿಸಬಹುದು.

ವಿವರಣೆ: ಕೃಷಿಗೆ ಸಂಬಂಧಿಸಿದಂತೆ ‘ಮೌಲ್ಯ ಸರಪಳಿಯ ಭಾಗಿದಾರರು’ : ಜಮೀನಿನಲ್ಲಿ ಉತ್ಪನ್ನವಾಗುವುದರಿಂದ ಹಿಡಿದು ಕೊನೆಯ ಗ್ರಾಹಕರು ಇದರ ವ್ಯಾಪ್ತಿಗೆ ಬರುತ್ತಾರೆ. ಇದರಲ್ಲಿ ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾಗಾಣಿಕೆ ಮತ್ತು ವಿತರಣೆಯ ಹಂತಗಳಿವೆ. ಪ್ರತಿ ಹಂತದಲ್ಲೂ ಮೌಲ್ಯ ವರ್ಧನೆ ಆಗುತ್ತದೆ.

ಇದರ ಒಟ್ಟು ತಾತ್ಪರ್ಯವೆಂದರೆ, ಯಾವುದನ್ನೂ ಕುರುಡಾಗಿ ನಂಬಬೇಡಿ, ನಿಮ್ಮ ಶಿಕ್ಷಣ ಮತ್ತು ಬುದ್ಧಿಯನ್ನು ಬಳಸಿ ಒಂದು ಮಾಹಿತಿಯುಕ್ತ ಅಭಿಪ್ರಾಯವನ್ನು ಸೃಷ್ಟಿಸಿ.

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

ಈ ಮೂರು ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ನಮ್ಮ-ನಿಮ್ಮಂತಹ ಗ್ರಾಹಕರಿಗೂ ಮಾರಕವಾಗಿವೆ. ಏಕೆಂದರೆ, ‘ಮೌಲ್ಯ ಸರಪಳಿ ಭಾಗಿದಾರರು” ಎಂದು ಕರೆಯಲ್ಪಡುವ ಈ ದೊಡ್ಡ ಕಂಪನಿಗಳು ಯಾವುದೇ ಮಿತಿಗಳಿಲ್ಲದೆ ಸಂಗ್ರಹಿಸಬಹುದು. ಆದರೆ ಮಿತಿಗಳು ರೈತರಿಗೆ ಮಾತ್ರ ಅನ್ವಯಿಸುತ್ತವೆ. ಇದು ಹೊಸ ತಿದುಪಡಿಯ ಅಂಶ.

ಅಂತಿಮವಾಗಿ, ಈ ದೊಡ್ಡ ಕಾರ್ಪೋರೇಟ್‌ಗಳು ಬೃಹತ್ತಾಗಿ ಸಂಗ್ರಹಿಸಿಡುತ್ತವೆ ಮತ್ತು ರೈತರಿಗೆ ಕಡಿಮೆ ಬೆಲೆಯನ್ನು ನೀಡುವ ಮೂಲಕ ಪೂರೈಕೆಯನ್ನು ನಿಯಂತ್ರಿಸುತ್ತವೆ. ಇನ್ನೊಂದು ಕಡೆ ಅನಿಯಮಿತ ಸಂಗ್ರಹಣೆ ಮೂಲಕ ಕೊರತೆಯನ್ನು ಉಂಟು ಮಾಡಿ ಗ್ರಾಹಕರ ಬೇಡಿಕೆಯ ಮೇಲೆ ನಿಯಂತ್ರಣ ಹೊಂದುತ್ತವೆ.

  • ಆದರ್ಶ್ ಆರ್ ಅಯ್ಯರ್

(ಆದರ್ಶ್ ಆರ್ ಅಯ್ಯರ್ ರವರು ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷರು)


ಇದನ್ನೂ ಓದಿ: ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...