Homeಚಳವಳಿಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

- Advertisement -
- Advertisement -

ನೀವು ಮೋದಿ ಸರ್ಕಾರ ಪಾಸು ಮಾಡಿರುವ ಮೂರು ಕೃಷಿ ಮಸೂದೆಗಳನ್ನು ಓದಿದರೆ ಅರ್ಥವಾಗುತ್ತದೆ: ಈ ಕಾಯ್ದೆಗಳು ಕೇವಲ ರೈತರಿಗಷ್ಟೇ ಮಾರಕವಲ್ಲ, ಬದಲಿಗೆ ನಮ್ಮ ನಿಮ್ಮಂತಹ ಸಾಮಾನ್ಯ ಜನರ ಬದುಕಿಗೂ ಕೊಳ್ಳಿ ಇಡಲಿವೆ ಎಂಬ ಸತ್ಯ. ಮಾರುಕಟ್ಟೆಗಳು ಬೃಹತ್ ಕಾರ್ಪೋರೇಟ್ ತಿಮಿಂಗಲುಗಳ ವಶವಾಗಲಿದ್ದು, ಈ ಮಾರುಕಟ್ಟೆಗಳು ಅವರ ಬಿಗಿ ಹಿಡಿತಕ್ಕೆ ಒಳಗಾಗಲಿವೆ. ಏಕೆಂದರೆ ಈ ಕಾಯ್ದೆಗಳ ಪರಿಣಾಮವಾಗಿ ಕಾರ್ಪೊರೇಟ್‌ಗಳು ಆಹಾರ ಪದಾರ್ಥಗಳನ್ನು ಅನಿಯಮಿತವಾಗಿ ಸಂಗ್ರಹಿಸಬಹುದು, ಅದೂ ಕಾನೂನಾತ್ಮಕ ಬೆಂಬಲದಿಂದ ಸಂಗ್ರಹಿಸಬಹುದು. ಈ ದೊಡ್ಡ ಕಾರ್ಪೊರೇಟ್‌ಗಳ ಕುತ್ತಿಗೆ ಹಿಸುಕುವ ಬೆಲೆ ಸ್ಪರ್ಧೆಯಿಂದಾಗಿ ರೈತರು ಕೃಷಿಯನ್ನೇ ತೊರೆಯಬಹುದು.

ಈ ಕಾಯ್ದೆಯ ಉಪ-ವಿಭಾಗ 1-ಎ ನ ಕ್ಲಾಜ್ ‘ಬಿ’ ಅನ್ನು ಒಮ್ಮೆ ಓದಿ ನೋಡಿ. ಸಂಗ್ರಹಣಾ ಮಿತಿಯನ್ನು ನಿಯಂತ್ರಿಸುವ ಆದೇಶವು ಯಾವುದೇ ಕೃಷಿ ಉತ್ಪನ್ನಗಳ ನಿರ್ವಹಣೆ ಅಥವಾ ಮೌಲ್ಯ ವರ್ಧನೆಯಲ್ಲಿ ಭಾಗಿಯಾಗುವವರಿಗೆ ಅನ್ವಯಿಸುವುದಿಲ್ಲ. ಅಂತಹ ವ್ಯಕ್ತಿಯ ಸಂಗ್ರಹಣಾ (ಸ್ಟಾಕ್) ಮಿತಿಯು ಸಂಸ್ಕರಿಸಿದ ಸಾಮರ್ಥ್ಯದ ಒಟ್ಟಾರೆ ಸೀಲಿಂಗ್ ಅನ್ನು ಮೀರದಿದ್ದರೆ ಅಥವಾ ರಫ್ತುದಾರನಾಗಿದ್ದಲ್ಲಿ ರಫ್ತು ಬೇಡಿಕೆಯನ್ನು ಮೀರದಿದ್ದಲ್ಲಿ ಆತ ಸುರಕ್ಷಿತ.

ಮೌಲ್ಯ ಸರಪಳಿಯಲ್ಲಿ (ವ್ಯಾಲ್ಯೂ ಚೈನ್) ಭಾಗಿಯಾಗುವವರನ್ನು ಕಾಯ್ದೆಯಲ್ಲಿ ಹೀಗೆ ವ್ಯಾಖ್ಯಾನಿಸಲಾಗಿದೆ: ಯಾವುದೇ ಕೃಷಿ ಉತ್ಪನ್ನಕ್ಕೆ ಸಂಬಂಧಿಸಿದಂತೆ “ಮೌಲ್ಯ ಸರಪಳಿ ಭಾಗಿದಾರರರು” ಎಂಬ ಅಭಿವ್ಯಕ್ತಿ, ಯಾವುದೇ ಉತ್ಪಾದನೆಯಿಂದ ಭಾಗವಹಿಸುವವರ ಗುಂಪನ್ನು ಅರ್ಥೈಸುತ್ತದೆ ಮತ್ತು ಅವರನ್ನು ಒಳಗೊಂಡಿದೆ. ಅದು ಕೃಷಿ ಕ್ಷೇತ್ರದಲ್ಲಿ ಕೃಷಿ ಉತ್ಪನ್ನಗಳ ಅಂತಿಮ ಬಳಕೆಯವರೆಗೂ ವ್ಯಾಪಿಸಿದೆ. ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾರಿಗೆ ಮತ್ತು ವಿತರಣೆಯನ್ನು ಒಳಗೊಂಡಿರುತ್ತದೆ, ಅಲ್ಲಿ ಪ್ರತಿ ಹಂತದಲ್ಲೂ ಉತ್ಪನ್ನಕ್ಕೆ ಮೌಲ್ಯವನ್ನು ಸೇರಿಸಲಾಗುತ್ತದೆ “.

ಇತರ ರೈತರಿಗೆ ಕೆಲವು ನಿರ್ಬಂಧ ಹೇರಲಾಗಿದೆ. ಯಾಕೀ ತಾರತಮ್ಯ? ರೈತರು ಮತ್ತು ಗ್ರಾಹಕರು ಈ ಕಾರ್ಪೊರೇಟ್‌ಗಳ ಮರ್ಜಿಗೆ ಬಿದ್ದು, ಬಿಗ್ ಕಾರ್ಪೊರೇಟ್‌ಗಳಿಗೆ ಕೃಷಿಯ ಮೇಲೆ ನಿಯಂತ್ರಣ ಸಾಧಿಸಲು ಈ ಕಾಯ್ದೆ ಅವಕಾಶ ನೀಡುತ್ತದೆ.

‘ಕ್ಲಾಜ್ ‘ಬಿ’ ಅನ್ವಯ, ಸಂಗ್ರಹಣಾ ಮಿತಿಯನ್ನು ಹೇರುವ ಯಾವುದೇ ಕ್ರಮವು ಬೆಲೆ ಏರಿಕೆಯನ್ನು ಆಧರಿಸುತ್ತದೆ. ಯಾವುದೇ ಕೃಷಿ ಉತ್ಪನ್ನಗಳ ಸಂಗ್ರಹಣೆಯ ಮಿತಿ ಮೇಲೆ ನಿರ್ಬಂಧ ಹೇರುವುದು ಈ ಕೆಳಗಿನ ಅಂಶಗಳನ್ನು ಅವಲಂಭಿಸಿದೆ:
1. ತೋಟಗಾರಿಕಾ ಉತ್ಪನ್ನಗಳ ಚಿಲ್ಲರೆ ಮಾರಾಟ ದರದಲ್ಲಿ ಶೇ. 100ರಷ್ಟು ಏರಿಕೆಯಾದ ಸಂದರ್ಭದಲ್ಲಿ. ಅಥವಾ
2. ನಾಶವಾಗದ ಕೃಷಿ ಆಹಾರ ಪದಾರ್ಥಗಳ ಚಿಲ್ಲರೆ ಬೆಲೆಯಲ್ಲಿ ಶೇ. 50ರಷ್ಟು ಏರಿಕೆಯಾದ ಸಂದರ್ಭದಲ್ಲಿ.
ಈ ಎರಡು ಸಂದರ್ಭಗಳಲ್ಲಿ. ಹನ್ನೆರಡು ತಿಂಗಳುಗಳ ಹಿಂದಿನ ಚಾಲ್ತಿಯಲ್ಲಿರುವ ಬೆಲೆ ಅಥವಾ ಕಳೆದ ಐದು ವರ್ಷಗಳ ಸರಾಸರಿ ಚಿಲ್ಲರೆ ಬೆಲೆ, ಯಾವುದು ಕಡಿಮೆ ಇರುತ್ತದೋ ಅದು ಲಾಗೂ ಆಗುತ್ತದೆ.

1955ರ ಅಗತ್ಯ ವಸ್ತುಗಳ ಕಾಯ್ದೆಗೆ ತಂದ ತಿದ್ದುಪಡಿಯ ಪ್ರಕಾರ,
ಎ.) ಅಸಾಧಾರಣ ಸಂದರ್ಭಗಳಲ್ಲಿ (ಯುದ್ಧ, ಕ್ಷಾಮ, ಅಸಾಧಾರಣ ಬೆಲೆ ಏರಿಕೆ ಮತ್ತು ನೈಸರ್ಗಿಕ ವೈಪರೀತ್ಯ) ಮಾತ್ರ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು, ಆಲೂಗಡ್ಡೆ, ಈರುಳ್ಳಿ, ಖಾದ್ಯ ಎಣ್ಣೆಕಾಳುಗಳು ಮತ್ತು ತೈಲಗಳು ಸೇರಿದಂತೆ ಅಂತಹ ಆಹಾರ ಪದಾರ್ಥಗಳ ಪೂರೈಕೆಯನ್ನು ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ನಿರ್ದಿಷ್ಟಪಡಿಸಿ, ಅಧಿಸೂಚನೆಯ ಮೂಲಕ ಮಾತ್ರ ನಿಯಂತ್ರಿಸಬಹುದು.

ವಿವರಣೆ: ಕೃಷಿಗೆ ಸಂಬಂಧಿಸಿದಂತೆ ‘ಮೌಲ್ಯ ಸರಪಳಿಯ ಭಾಗಿದಾರರು’ : ಜಮೀನಿನಲ್ಲಿ ಉತ್ಪನ್ನವಾಗುವುದರಿಂದ ಹಿಡಿದು ಕೊನೆಯ ಗ್ರಾಹಕರು ಇದರ ವ್ಯಾಪ್ತಿಗೆ ಬರುತ್ತಾರೆ. ಇದರಲ್ಲಿ ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾಗಾಣಿಕೆ ಮತ್ತು ವಿತರಣೆಯ ಹಂತಗಳಿವೆ. ಪ್ರತಿ ಹಂತದಲ್ಲೂ ಮೌಲ್ಯ ವರ್ಧನೆ ಆಗುತ್ತದೆ.

ಇದರ ಒಟ್ಟು ತಾತ್ಪರ್ಯವೆಂದರೆ, ಯಾವುದನ್ನೂ ಕುರುಡಾಗಿ ನಂಬಬೇಡಿ, ನಿಮ್ಮ ಶಿಕ್ಷಣ ಮತ್ತು ಬುದ್ಧಿಯನ್ನು ಬಳಸಿ ಒಂದು ಮಾಹಿತಿಯುಕ್ತ ಅಭಿಪ್ರಾಯವನ್ನು ಸೃಷ್ಟಿಸಿ.

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

ಈ ಮೂರು ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ನಮ್ಮ-ನಿಮ್ಮಂತಹ ಗ್ರಾಹಕರಿಗೂ ಮಾರಕವಾಗಿವೆ. ಏಕೆಂದರೆ, ‘ಮೌಲ್ಯ ಸರಪಳಿ ಭಾಗಿದಾರರು” ಎಂದು ಕರೆಯಲ್ಪಡುವ ಈ ದೊಡ್ಡ ಕಂಪನಿಗಳು ಯಾವುದೇ ಮಿತಿಗಳಿಲ್ಲದೆ ಸಂಗ್ರಹಿಸಬಹುದು. ಆದರೆ ಮಿತಿಗಳು ರೈತರಿಗೆ ಮಾತ್ರ ಅನ್ವಯಿಸುತ್ತವೆ. ಇದು ಹೊಸ ತಿದುಪಡಿಯ ಅಂಶ.

ಅಂತಿಮವಾಗಿ, ಈ ದೊಡ್ಡ ಕಾರ್ಪೋರೇಟ್‌ಗಳು ಬೃಹತ್ತಾಗಿ ಸಂಗ್ರಹಿಸಿಡುತ್ತವೆ ಮತ್ತು ರೈತರಿಗೆ ಕಡಿಮೆ ಬೆಲೆಯನ್ನು ನೀಡುವ ಮೂಲಕ ಪೂರೈಕೆಯನ್ನು ನಿಯಂತ್ರಿಸುತ್ತವೆ. ಇನ್ನೊಂದು ಕಡೆ ಅನಿಯಮಿತ ಸಂಗ್ರಹಣೆ ಮೂಲಕ ಕೊರತೆಯನ್ನು ಉಂಟು ಮಾಡಿ ಗ್ರಾಹಕರ ಬೇಡಿಕೆಯ ಮೇಲೆ ನಿಯಂತ್ರಣ ಹೊಂದುತ್ತವೆ.

  • ಆದರ್ಶ್ ಆರ್ ಅಯ್ಯರ್

(ಆದರ್ಶ್ ಆರ್ ಅಯ್ಯರ್ ರವರು ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷರು)


ಇದನ್ನೂ ಓದಿ: ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...